ಹೊಸಬರ ನಿರೀಕ್ಷೆ , ಹಳಬರ ಆತಂಕ
Team Udayavani, Jul 29, 2021, 7:50 AM IST
ಬೆಂಗಳೂರು: ನೂತನ ಮುಖ್ಯ ಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಸಚಿವ ಸಂಪುಟ ರಚನೆ ಸಾಕಷ್ಟು ಕುತೂ ಹಲ ಮೂಡಿಸಿದ್ದು, ಆಕಾಂಕ್ಷಿ ಗಳಿಗೆ ನಿರೀಕ್ಷೆ ಹೆಚ್ಚಾ ಗಿದ್ದರೆ, ಮಾಜಿ ಸಚಿವರಿಗೆ ಆತಂಕ ಹೆಚ್ಚಿದೆ.
ಸಂಪುಟ ರಚನೆ ಕುರಿತು ಚರ್ಚಿಸುವುದಕ್ಕಾಗಿ ದಿಲ್ಲಿಗೆ ತೆರಳಲು ಬೊಮ್ಮಾಯಿ ಸಮಯ ಕೇಳಿ ದ್ದಾರೆ. ಹೊಸ ಮುಖಗಳಿಗೆ ಆದ್ಯತೆ ನೀಡಲು ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ. ಸಚಿವಾಕಾಂಕ್ಷಿಗಳು ಈಗಾ ಗಲೇ ಲಾಬಿ ಆರಂಭಿಸಿದ್ದಾರೆ.
ಶುಕ್ರವಾರ ದಿಲ್ಲಿಗೆ ತೆರಳಿ, ವರಿಷ್ಠರ ಜತೆ ಸಂಪುಟ ರಚನೆ ಬಗ್ಗೆ ಚರ್ಚಿಸುತ್ತೇನೆ. ಶೆಟ್ಟರ್ ಸಂಪುಟ ಸೇರಲು ನಿರಾಕರಿಸಿದ್ದು ತಿಳಿದಿಲ್ಲ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಹಿರಿಯರಿಗೆ ಕೊಕ್?:
ಯಡಿಯೂರಪ್ಪ ಸಂಪುಟದಲ್ಲಿ ಸ್ಥಾನ ಪಡೆದವರು ಮತ್ತು ಸಚಿವರಾಗಿ ಎರಡು ವರ್ಷ ಪೂರ್ಣಗೊಳಿಸಿರುವ ಹಿರಿಯರನ್ನು ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಬಿಜೆಪಿ ವರಿಷ್ಠರು ಚಿಂತಿಸಿದ್ದಾರೆ. ಜಗದೀಶ್ ಶೆಟ್ಟರ್, ಈಶ್ವರಪ್ಪ, ಸೋಮಣ್ಣ, ಸುರೇಶ್ ಕುಮಾರ್ ಸಹಿತ ಅನೇಕ ಹಿರಿಯ ನಾಯಕರನ್ನು ಹೀಗೆ ಬಳಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಸಚಿವರಾಗಿದ್ದೂ ಸಕ್ರಿಯರಾಗಿರ ದಿದ್ದ ಎಂ.ಟಿ.ಬಿ. ನಾಗರಾಜ್, ಶ್ರೀಮಂತ ಪಾಟೀಲ್, ಕೆ. ಗೋಪಾಲಯ್ಯ, ನಾರಾಯಣ ಗೌಡ ಸಹಿತ ಕೆಲವರನ್ನು ಹೊರಗಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ವಲಸಿಗರಲ್ಲಿ ಯಾರನ್ನೂ ಕೈಬಿಡಬಾರದು ಎಂದು ಬೊಮ್ಮಾಯಿ ಮತ್ತು ಬಿಎಸ್ವೈ ಅವರು ವರಿಷ್ಠರ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.
ಪ್ರಮಾಣ ವಚನ ಕಾರ್ಯಕ್ರಮದ ಬಳಿಕ ವಲಸಿಗ ಮಾಜಿ ಸಚಿವರೆಲ್ಲ ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ನಮ್ಮನ್ನು ಸಂಪುಟದಿಂದ ಹೊರಗಿಡುವುದಾಗಿ ಹೇಳಿಲ್ಲ. ಅಂಥ ಪ್ರಶ್ನೆ ಉದ್ಭವಿಸುವುದಿಲ್ಲ. ನಮಗೆ ವರಿಷ್ಠರ ಮೇಲೆ ನಂಬಿಕೆ ಇದೆ, ಆತಂಕ ಇಲ್ಲ ಎಂದು ಭೇಟಿಯ ಬಳಿಕ ಮಾಜಿ ಸಚಿವರು ಹೇಳಿದ್ದಾರೆ.
ಜತೆಗೆ, ಅರ್ಜಿ ಕುರಿತು ಆಕ್ಷೇಪಣೆ ಸಲ್ಲಿಸಲು ಸೂಚಿಸಿ ಪ್ರತಿವಾದಿಯಾಗಿರುವ ರಾಜ್ಯ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ದೇವಿ ಪ್ರಸಾದ್ ಅವರಿಗೂ ನೋಟಿಸ್ ಜಾರಿಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !
ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು
Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ
Prajwal Revanna ಪತ್ತೆಗೆ ವಿತ್ತ ಅಸ್ತ್ರ ! ಬ್ಯಾಂಕ್ ವ್ಯವಹಾರ ಪರಿಶೀಲನೆ
Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ