3ನೇ ಅಲೆ ಭೀತಿ: ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ, ವಾರಾಂತ್ಯದ ಲಾಕ್ ಡೌನ್ ಘೋಷಣೆ
ಕೊಟ್ಟಾಯಂನಲ್ಲಿ ಅತೀ ಹೆಚ್ಚು ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.
Team Udayavani, Jul 29, 2021, 2:27 PM IST
ತಿರುವನಂತಪುರ: ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾದ ನಂತರ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜುಲೈ31ರಿಂದ ಆಗಸ್ಟ್ 1ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ನಿರ್ಧರಿಸಿದೆ.
ಇದನ್ನೂ ಓದಿ: ‘ಕೆಜಿಎಫ್’ ಅಡ್ಡಾಗೆ ಖಡ್ಗ ಹಿಡಿದು ಎಂಟ್ರಿ ಕೊಟ್ಟ ‘ಅಧೀರ’: ಸಂಜು ಬಾಬಾ ರಗಡ್ ಲುಕ್ ರಿಲೀಸ್
ಕೇರಳದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಪರಿಣಾಮ ಕೇಂದ್ರ ಸರ್ಕಾರವು ಆರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಸೋಂಕು ನಿಯಂತ್ರಣ ತಂಡವನ್ನು ಅಧ್ಯಯನಕ್ಕಾಗಿ ಕಳುಹಿಸಿರುವುದಾಗಿ ತಿಳಿಸಿದೆ.
ಕೇರಳದಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸೋಂಕು ನಿಯಂತ್ರಣ ತಂಡ ರಾಜ್ಯಕ್ಕೆ ಅಗತ್ಯವಾದ ನೆರವನ್ನು ನೀಡಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವ್ಯ ತಿಳಿಸಿದ್ದಾರೆ.
ಕೇರಳದ ಮಲಪ್ಪುರಂ, ತ್ರಿಶ್ಶೂರ್, ಕೋಝಿಕೋಡ್, ಎರ್ನಾಕುಲಂ, ಪಾಲಕ್ಕಾಡ್, ಕೊಲ್ಲಂ, ಅಳಪ್ಪುಝಾ, ಕಣ್ಣೂರು, ತಿರುವನಂತಪುರಂ ಹಾಗೂ ಕೊಟ್ಟಾಯಂನಲ್ಲಿ ಅತೀ ಹೆಚ್ಚು ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ವಿವರಿಸಿದೆ.