ಮತ್ತೆ ಪುಟಿದೆದ್ದ ವಹಿವಾಟು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 209 ಅಂಕ ಏರಿಕೆ
ಈಕ್ವಿಟಿ ಮಾರಾಟ ಚೇತರಿಸಿಕೊಂಡ ನಿಟ್ಟಿನಲ್ಲಿ ಮೆಟಲ್ ಮತ್ತು ಐಟಿ ಷೇರುಗಳು ಭರ್ಜರಿಯಾಗಿ ಮಾರಾಟ
Team Udayavani, Jul 29, 2021, 4:38 PM IST
ಮುಂಬಯಿ: ಸತತ ಇಳಿಕೆ ಕಂಡಿದ್ದ ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಗುರುವಾರ (ಜುಲೈ 29) 209 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಳಿಸಿದೆ. ಇದರಿಂದ ಟಾಟಾ ಸ್ಟೀಲ್, ಎಸ್ ಬಿಐ ಷೇರುಗಳು ಲಾಭಗಳಿಸಿದೆ.
ಇದನ್ನೂ ಓದಿ:ರಾಜ್ ಕುಂದ್ರಾ ‘ಕಾಮ’ ಕಾಂಡ ಬಿಚ್ಚಿಟ್ಟ ನಟಿ ಶೆರ್ಲಿನ್ ಚೋಪ್ರಾ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 209.36 ಅಂಕಗಳಷ್ಟು ಏರಿಕೆಯೊಂದಿಗೆ 52,653,07 ಅಂಕಗಳೊಂದಿಗೆ ದಿನದ ವಹಿವಾಟು ಕೊನೆಗೊಂಡಿದೆ. ಎನ್ ಎಸ್ ಇ ನಿಫ್ಟಿ 69.05 ಅಂಕ ಏರಿಕೆಯೊಂದಿಗೆ 15,778.45ರ ಗಡಿ ತಲುಪಿದೆ.
ಸೆನ್ಸೆಕ್ಸ್ ಏರಿಕೆಯಿಂದ ಟಾಟಾ ಸ್ಟೀಲ್, ಬಜಾಜ್ ಫಿನ್ ಸರ್ವ್, ಎಸ್ ಬಿಐ, ಎಚ್ ಸಿಎಲ್ ಟೆಕ್, ಸನ್ ಫಾರ್ಮಾ, ಬಜಾಜ್ ಫೈನಾನ್ಸ್ ಮತ್ತು ರಿಲಯನ್ಸ್ ಇಂಡಿಸ್ಟ್ರೀಸ್ ಷೇರುಗಳು ಲಾಭಗಳಿಸಿವೆ. ಮತ್ತೊಂದೆಡೆ ಮಾರುತಿ, ಪವರ್ ಗ್ರಿಡ್, ಬಜಾಜ್ ಆಟೋ ಮತ್ತು ಐಟಿಸಿ ಷೇರುಗಳು ನಷ್ಟ ಅನುಭವಿಸಿದೆ.
ಜಾಗತಿಕ ಷೇರುಪೇಟೆಯ ಧನಾತ್ಮಕ ವಹಿವಾಟಿನ ಪರಿಣಾಮ ದೇಶೀ ಈಕ್ವಿಟಿ ಮಾರಾಟ ಚೇತರಿಸಿಕೊಂಡ ನಿಟ್ಟಿನಲ್ಲಿ ಮೆಟಲ್ ಮತ್ತು ಐಟಿ ಷೇರುಗಳು ಭರ್ಜರಿಯಾಗಿ ಮಾರಾಟ ಕಂಡಿದ್ದು, ಸೆನ್ಸೆಕ್ಸ್ ಏರಿಕೆಗೆ ಕಾರಣವಾಗಿದೆ ಎಂದು ರಿಲಯನ್ಸ್ ಸೆಕ್ಯುರಿಟೀಸ್ ನ ಬಿನೋದ್ ಮೋದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ