ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 


Team Udayavani, Jul 30, 2021, 9:10 AM IST

ಈ ವರ್ಷ ಬಾಗಿಲು ಮುಚ್ಚಲಿವೆ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು! 

ಎಂಜಿನಿಯರಿಂಗ್‌ ಶಿಕ್ಷಣಕ್ಕೆ ಕಳೆದ ಕೆಲವು ವರ್ಷಗಳಿಂದ ಬೇಡಿಕೆ ಗಮನಾರ್ಹವಾಗಿ ಕುಸಿದಿರುವುದರಿಂದ 2015- 16ರಿಂದೀಚೆಗೆ ದೇಶಾದ್ಯಂತ ಹಲವಾರು ಎಂಜಿನಿಯರಿಂಗ್‌ ಕಾಲೇಜುಗಳು ಮುಚ್ಚಲ್ಪಟ್ಟಿವೆ. ದೇಶದ ಎಂಜಿನಿಯರಿಂಗ್‌ ಸಂಸ್ಥೆಗಳಲ್ಲಿ ಲಭ್ಯವಿರುವ ಒಟ್ಟು ಸೀಟ್‌ಗಳ ಸಂಖ್ಯೆ ಕಳೆದ 10 ವರ್ಷಗಳಲ್ಲಿ ಗಣನೀಯ ಇಳಿಕೆ ಕಂಡಿದೆ.

444 ಎಂಜಿನಿಯರಿಂಗ್‌ ಕಾಲೇಜುಗಳಿಗೆ ಬೀಗ! :

2011- 12ರಿಂದ 2021- 22ರ ವರೆಗೆ ಒಟ್ಟು 444 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲು ಅನುಮತಿ ಕೋರಿ ಅಖೀಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ)ಗೆ ಅರ್ಜಿ ಸಲ್ಲಿಕೆಯಾಗಿದ್ದರೆ ಇದೇ ಅವಧಿಯಲ್ಲಿ ಹೊಸದಾಗಿ 1,228 ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅನುಮತಿ ಕೇಳಿ ಅರ್ಜಿ ಸಲ್ಲಿಸಲಾಗಿದೆ. 2021- 22ರ ಸಾಲಿನಲ್ಲಿ 63 ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆಗಳು ಮುಚ್ಚಲಿದ್ದರೆ 54 ಸಂಸ್ಥೆಗಳನ್ನು ತೆರೆಯಲು ಎಐಸಿಟಿಇ ಅನುಮತಿ ನೀಡಿದೆ.

ಸೀಟ್‌ಗಳ ಲಭ್ಯತೆಯಲ್ಲಿ ಇಳಿಕೆ! :

ಎಐಸಿಟಿಇ ಯ ಇತ್ತೀಚಿನ ಮಾಹಿತಿ ಪ್ರಕಾರ ಸ್ನಾತಕ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಹಂತಗಳಲ್ಲಿ ಎಂಜಿನಿಯರಿಂಗ್‌ ಸೀಟ್‌ಗಳು 23.28 ಲಕ್ಷಕ್ಕೆ ಇಳಿದಿದ್ದು,  ಇದು 10 ವರ್ಷಗಳಲ್ಲಿ ಅತ್ಯಂತ ಕಡಿಮೆಯಾಗಿವೆ. ಸಂಸ್ಥೆಗಳು ಮುಚ್ಚಿದ್ದರಿಂದ ಮತ್ತು ಸಂಸ್ಥೆಗಳ ಪ್ರವೇಶ ಸಾಮರ್ಥ್ಯ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ  ಪ್ರಸಕ್ತ ಸಾಲಿನಲ್ಲಿ ಎಂಜಿನಿಯರಿಂಗ್‌ ಸೀಟ್‌ಗಳು 1.46 ಲಕ್ಷದಷ್ಟು ಇಳಿಕೆಯಾಗಿದೆ.

2014- 15ರಲ್ಲಿ ಎಐಸಿಟಿಇ ಅನುಮೋದಿತ ಸಂಸ್ಥೆಗಳು ಸುಮಾರು 32 ಲಕ್ಷ ಎಂಜಿನಿಯರಿಂಗ್‌ ಸೀಟ್‌ಗಳನ್ನು ಹೊಂದಿದ್ದವು. ಆದರೆ ಕಳೆದ ಏಳು ವರ್ಷಗಳಿಂದೀಚೆಗೆ ಎಂಜಿನಿಯರಿಂಗ್‌ ಸೀಟ್‌ಗಳಿಗೆ ಬೇಡಿಕೆ ಕುಸಿಯಲಾರಂಭಿಸಿದ್ದರಿಂದ ಸೀಟ್‌ಗಳ ಸಂಖ್ಯೆ ಇಳಿಮುಖವಾಗಿದ್ದೇ ಅಲ್ಲದೆ ಕೆಲವಷ್ಟು  ಕಾಲೇಜುಗಳು ಮುಚ್ಚುವಂತಾಯಿತು. ಅಲ್ಲಿಂದೀಚೆಗೆ ಸರಿಸುಮಾರು 400 ಎಂಜಿನಿಯರಿಂಗ್‌ ಕಾಲೇಜುಗಳು ಬಾಗಿಲು ಮುಚ್ಚಿವೆ. ಕೋವಿಡ್‌ ಹಿನ್ನೆಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷವನ್ನು ಹೊರತುಪಡಿಸಿದಂತೆ 2015-16ರಿಂದೀಚೆಗೆ ಪ್ರತೀ ವರ್ಷ ಕನಿಷ್ಠ 50 ಎಂಜಿನಿಯರಿಂಗ್‌ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.

ಹೊಸ ಸಂಸ್ಥೆಗಳ ಸ್ಥಾಪನೆಯಲ್ಲೂ ಹಿನ್ನಡೆ :

ಕಳೆದ ಐದು ವರ್ಷಗಳಲ್ಲಿಯೇ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಹೊಸ ಎಂಜಿನಿಯರಿಂಗ್‌ ಸಂಸ್ಥೆಗಳು ಸ್ಥಾಪನೆಯಾಗಿವೆ. 2014- 15ರಲ್ಲಿ ಎಐಸಿಟಿಇ ಅನುಮೋದಿತ ಸಂಸ್ಥೆಗಳು ಸುಮಾರು 32 ಲಕ್ಷ ಎಂಜಿನಿಯರಿಂಗ್‌ ಸೀಟ್‌ಗಳನ್ನು ಹೊಂದಿದ್ದವು. ಆದರೆ ಗುಣಮಟ್ಟ ಕುಸಿತದ ಕಾರಣ ಎಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಬೇಡಿಕೆ ಕಡಿಮೆಯಾದ ಪರಿಣಾಮ ಎಐಸಿಟಿಇ ಸೀಟ್‌ಗಳನ್ನು ಕಡಿತಗೊಳಿಸುತ್ತಾ ಬಂದಿತು.  ಐಐಟಿ- ಹೈದರಾಬಾದ್‌ ಅಧ್ಯಕ್ಷ ಬಿ.ವಿ.ಆರ್‌. ಮೋಹನ್‌ ರೆಡ್ಡಿ ನೇತೃತ್ವದ ಸರಕಾರಿ ಸಮಿತಿಯ ಶಿಫಾರಸಿನ ಮೇರೆಗೆ ಎಐಸಿಟಿಇ ಯು ಎರಡು ವರ್ಷಗಳ ಅವಧಿಗೆ ಹೊಸ ಎಂಜಿನಿಯರಿಂಗ್‌ ಕಾಲೇಜುಗಳ ಆರಂಭಕ್ಕೆ ನಿರ್ಬಂಧ ಹೇರಿ 2019ರಲ್ಲಿ ಆದೇಶ ಹೊರಡಿಸಿತ್ತು. ಆದರೆ ಇದರ ಹೊರತಾಗಿಯೂ ಎಐಸಿಟಿಇ  2021-22ನೇ ಸಾಲಿನಲ್ಲಿ ಹೊಸದಾಗಿ 54 ಎಂಜಿನಿಯರಿಂಗ್‌ ಕಾಲೇಜುಗಳ ಸ್ಥಾಪನೆಗೆ ಅನುಮೋದನೆ ನೀಡಿದೆ. ಈ ಕಾಲೇಜುಗಳು ಹಿಂದುಳಿದ ಜಿಲ್ಲೆಗಳಲ್ಲಿ ಸ್ಥಾಪನೆಗೊಳ್ಳಲಿವೆ ಮಾತ್ರವಲ್ಲದೆ ಈ ಕಾಲೇಜುಗಳನ್ನು ತೆರೆಯಲು ರಾಜ್ಯ ಸರಕಾರಗಳೇ ಆಸಕ್ತಿ ತೋರಿವೆ ಎಂದು ಎಐಸಿಟಿಇ ಮೂಲಗಳು ತಿಳಿಸಿವೆ. ನಿರ್ಬಂಧ ಹೇರುವುದಕ್ಕೂ ಮುನ್ನ ಅಂದರೆ 2017- 18, 2018-19 ಮತ್ತು 2019- 20ರಲ್ಲಿ  ಕ್ರಮವಾಗಿ 143, 158 ಮತ್ತು 153 ಹೊಸ ಸಂಸ್ಥೆಗಳಿಗೆ ಅನುಮೋದನೆ ನೀಡಲಾಗಿತ್ತು.  2016-17ರಲ್ಲಿ 3,291 ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಲಭ್ಯವಿದ್ದ 15.5 ಲಕ್ಷ ಸ್ನಾತಕ ಸೀಟ್‌ಗಳಲ್ಲಿ ಶೇ. 51ರಷ್ಟಕ್ಕೂ ಬೇಡಿಕೆ ಇರಲಿಲ್ಲ.

ಎಂಜಿನಿಯರಿಂಗ್‌ ಶಿಕ್ಷಣ ಸಂಸ್ಥೆ :

ವರ್ಷ  ಹೊಸದಾಗಿ ಪ್ರಾರಂಭ ಮುಚ್ಚಿರುವುದು

2011- 12          314      1

2012- 13          165      9

2013-14           56        20

2014-15           51       18

2015-16           40       53

2016-17           32       70

2017-18           143      73

2018-19           158      58

2019-20           153     53

2020-21           62        26

2021-22           54        63

 

ಟಾಪ್ ನ್ಯೂಸ್

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.