ಮುಯ್ಯಾಳು ಪದ್ದತಿಯಲ್ಲಿ ನಾಟಿ ಕಾರ್ಯ
Team Udayavani, Jul 31, 2021, 12:50 PM IST
ಬಾಳೆಹೊನ್ನೂರು: ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಯಿಂದ ಜನ ದೂರ ಸರಿಯುತ್ತಿರುವ ಇಂದಿನ ದಿನಗಳಲ್ಲಿ ಬಿ.ಕಣಬೂರು ಗ್ರಾಪಂ ವ್ಯಾಪ್ತಿಯ ವಾಟುಕುಡಿಗೆ ಬಸವನಕೋಗು ಗ್ರಾಮದಲ್ಲಿ ಇಂದಿಗೂ ಮುಯ್ನಾಳು ಪದ್ಧತಿಯಲ್ಲಿ ಸಾಂಪ್ರದಾಯಿಕ ಕೃಷಿ ಚಟುವಟಿಕೆ ನಡೆಸಲಾಗುತ್ತಿದೆ ಎಂದು ಬಿ. ಕಣಬೂರು ಗ್ರಾಪಂ ಉಪಾಧ್ಯಕ್ಷ ಎಂ.ಜೆ. ಮಹೇಶಾಚಾರ್ ತಿಳಿಸಿದರು.
ಬಸವನಕೋಗು ಭತ್ತ ನಾಟಿ ಮಾಡುತ್ತಿದ್ದ ಗದ್ದೆಗೆ ಬೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮದಲ್ಲಿ ಕೃಷಿ ಕಾಯಕಕ್ಕೆ ಕೂಲಿ ಕಾರ್ಮಿಕರ ಕೊರತೆ ಉಂಟಾಗುವುದಿಲ್ಲ. ಸಣ್ಣ ಸಣ್ಣ ರೈತ ಕುಟುಂಬಗಳು ಪರಸ್ಪರ ಸಹಕಾರದಿಂದ ಭತ್ತದ ಸಸಿ ನಾಟಿ ಮಾಡಲು ದಿನ ನಿಗದಿ ಮಾಡಿ ಸರತಿಯಂತೆ ನಾಟಿ ಮಾಡಲಾಗುತ್ತದೆ. ಪ್ರತಿ ಮನೆಯಿಂದ ಒಂದೆರಡು ಜನರು ನಾಟಿ ಮಾಡಲು ಬರುತ್ತಾರೆ.
ಮಲೆನಾಡು ಗಿಡ್ಡ ತಳಿಗಳನ್ನು ಉಳುಮೆ ಮಾಡಲು ಬಳಸಿಕೊಳ್ಳಲಾಗುತ್ತದೆ. 5ರಿಂದ 6 ಜೊತೆ ಎತ್ತುಗಳನ್ನು ಬಳಸಿ ಉಳುಮೆ ಮಾಡಲಾಗುತ್ತದೆ. ಟ್ರಾÂಕ್ಟರ್, ಟಿಲ್ಲರ್ ಅವಶ್ಯಕತೆಯಿಲ್ಲ. ಹಿಂದಿನಿಂದಲೂ ಮುಯ್ನಾಳು ಪದ್ಧತಿಯಲ್ಲೇ ಕೃಷಿ ಚಟುವಟಿಕೆ ಮಾಡಿಕೊಂಡು ಬರುತ್ತಿದ್ದು ಈಗಲೂ ಅದೇ ಪದ್ಧತಿಯಲ್ಲಿ ಮುಂದುವರಿಸಿಕೊಂಡು ಬರಲಾಗುತ್ತಿದೆ ಎಂದರು.
ಪರಸ್ಪರ ಸಹಕಾರದಿಂದ ಕೆಲಸ ಮಾಡುವುದರಿಂದ ದಿನಗೂಲಿ ಪ್ರಶ್ನೆಯೇ ಬರುವುದಿಲ್ಲ. ವಾಟುಕುಡಿಗೆ, ಮಠದ ಕಾಲೋನಿ ಹಾಗೂ ಕಂಚಿಕುಡಿಗೆ ಭಾಗದಲ್ಲಿ ಇಂದಿಗೂ ಈ ಕೃಷಿ ಚಟುವಟಿಕೆಯಲ್ಲಿ ಮುಯ್ನಾಳು ಪದ್ಧತಿ ಇದ್ದು ಗ್ರಾಮಕ್ಕೆ ಮಾದರಿಯಾಗಿದೆ. ಮಹಿಳೆಯರು ಜಾನಪದ ಹಾಡುಗಳನ್ನು ಹಾಡುತ್ತಾ ನಾಡಿ ಮಾಡುವುದು ವಿಶೇಷ ಹಾಗೂ ಗದ್ದೆ ಬದುವಿನಲ್ಲಿ ಮಧ್ಯಾಹ್ನದ ಉಪಾಹಾರ ಸೇವಿಸಿ ಒಗ್ಗಟ್ಟಿನಲ್ಲಿ ಬಲವಿದೆ ಎಂಬ ಸಂದೇಶವನ್ನು ಸಾರುವಂತಿದೆ ಎಂದರು.
ಕೃಷಿಕ ಯಜ್ಞಪುರುಷ ಭಟ್ ಮಾತನಾಡಿ, ಸಹಬಾಳ್ವೆಯ ಕಾಯಕ ಶ್ಲಾಘನೀಯ. ಮಲೆನಾಡು ಪ್ರದೇಶದಲ್ಲಿ ಶೇ.70ರಷ್ಟು ಜಮೀನಿನಲ್ಲಿ ಭತ್ತ ಬೆಳೆಯುವುದನ್ನು ಬಿಟ್ಟು ವಾಣಿಜ್ಯ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಒಕ್ಕಲುತನ ಮರೆಯಾಗಿದ್ದು, ಭತ್ತದ ಕಣಜವಾಗಿದ್ದ ಬಿ. ಕಣಬೂರು ಗ್ರಾಮ ವಾಣಿಜ್ಯ ಬೆಳೆಗಳ ಕೇಂದ್ರವಾಗಿದೆ. ಗ್ರಾಪಂ ಉಪಾಧ್ಯಕ್ಷ ಎಂ.ಜೆ. ಮಹೇಶಾಚಾರ್ ಅವರ ಇಂತಹ ಸಂಘಟನೆ ಇತರರಿಗೆ ಮಾದರಿಯಾಗಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ