ಮೀನು, ಕೋಳಿಗಿಂತ ಹೆಚ್ಚು ಗೋಮಾಂಸವನ್ನು ತಿನ್ನಬೇಕು ಎಂದ ಬಿಜೆಪಿ ಸಚಿವ!
Team Udayavani, Aug 1, 2021, 3:38 PM IST
ಶಿಲ್ಲಾಂಗ್: ಕೋಳಿ, ಕುರಿ ಮತ್ತು ಮೀನುಗಳಿಗಿಂತ ಹೆಚ್ಚು ಗೋಮಾಂಸವನ್ನು ಜನರು ತಿನ್ನಬೇಕು ಎಂದು ಮೇಘಾಲಯ ಸರ್ಕಾರದಲ್ಲಿ ಬಿಜೆಪಿ ಸಚಿವರಾದ ಸಾನ್ಬೋರ್ ಶುಲ್ಲೈ ಹೇಳಿದ್ದಾರೆ. ಬಿಜೆಪಿ ಸಿದ್ದಾಂತಕ್ಕೆ ವಿರುದ್ಧ ನಿಲುವನ್ನು ತೆಗೆದುಕೊಂಡಿರುವ ಮೇಘಾಲಯ ಸಚಿವರು ಹೇಳಿಕೆ ಇದೀಗ ಭಾರಿ ಸುದ್ದಿಯಾಗಿದೆ.
ಕಳೆದ ವಾರ ಕ್ಯಾಬಿನೆಟ್ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿಜೆಪಿಯ ಹಿರಿಯ ನಾಯಕ ಸಾನ್ಬೋರ್ ಶುಲ್ಲೈ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರತಿಯೊಬ್ಬರೂ ತಮಗೆ ಬೇಕಾದುದನ್ನು ತಿನ್ನಲು ಸ್ವತಂತ್ರರು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಉದ್ಯಮಿಗೆ ವಂಚನೆ ಪ್ರಕರಣ : ಕನ್ನಡ ನಿರ್ಮಾಪಕನಿಗೆ ಒಂದು ವರ್ಷ ಶಿಕ್ಷೆ
“ನಾನು ಜನರನ್ನು ಚಿಕನ್, ಮಟನ್ ಅಥವಾ ಮೀನಿಗಿಂತ ಹೆಚ್ಚು ಗೋಮಾಂಸ ತಿನ್ನಲು ಪ್ರೋತ್ಸಾಹಿಸುತ್ತೇನೆ. ಜನರನ್ನು ಹೆಚ್ಚು ಗೋಮಾಂಸ ತಿನ್ನಲು ಪ್ರೋತ್ಸಾಹಿಸುವ ಮೂಲಕ, ಬಿಜೆಪಿ ಗೋಹತ್ಯೆಯ ಮೇಲೆ ನಿಷೇಧ ಹೇರುತ್ತದೆ ಎಂಬ ಗ್ರಹಿಕೆಯನ್ನು ಹೋಗಲಾಡಿಸಲಾಗುತ್ತದೆ” ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಪಶು ಸಂಗೋಪನೆ ಮತ್ತು ಪಶುವೈದ್ಯ ಸಚಿವರಾಗಿರುವ ಸಾನ್ಬೋರ್ ಶುಲ್ಲೈ ಅವರು ನೆರೆಯ ಅಸ್ಸಾಂ ರಾಜ್ಯದ ಹೊಸ ಪಶು ನೀತಿಯಿಂದ ಮೇಘಾಲಯಕ್ಕೆ ಜಾನುವಾರು ಸಾಗಾಣಿಕೆಯ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ಮಾತನಾಡುವುದಾಗಿ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ
Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ
Arvind Kejriwal ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು
NEET; ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ!: ಚುನಾವಣಾ ಅಸ್ತ್ರ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…
LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ
Hubballi: ಒಂದೇ ಕುಟುಂಬದ 96 ಸದಸ್ಯರಿಂದ ಮತದಾನ