ಕಾಲ್ಪನಿಕ ಕೋವಿಡ್ ಮೂರನೇ ಅಲೆಯಂತೆ ಧುಮುಕಿದ ಜನ : ಜೋಗ ‘ಜನಪಾತ’!


Team Udayavani, Aug 1, 2021, 4:05 PM IST

Shivamogga, Sagara Jog Falls

ಪ್ರಾತಿನಿಧಿಕ ಚಿತ್ರ

ಸಾಗರ : ಕೋವಿಡ್ 19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಎರಡು ತಿಂಗಳಿನಿಂದ ಕೋವಿಡ್ ಮಾರ್ಗಸೂಚಿಗಳ ಅನ್ವಯ ನಿಷೇಧ ಹೇರಿದ್ದರಿಂದ ಜನರಿಂದ ದೂರವುಳಿದಿದ್ದ ಜೋಗ ಜಲಪಾತದ ದರ್ಶನಕ್ಕೆ ಇಂದು(ಭಾನುವಾರ, ಆಗಷ್ಟ್ 1) ಜನಸಾಗರ ಹರಿದು ಬಂದಿದೆ.

ಪ್ರಕೃತಿ ಕೂಡ ಇಡೀ ದಿನ ಆಗೊಮ್ಮೆ ಈಗೊಮ್ಮೆ ಬಿಸಿಲು ತೋರಿ, ಮಳೆ ಸುರಿಸದೆ ಇದ್ದುದು ಪ್ರವಾಸಿಗರಿಗೆ ಭವ್ಯ ಜಲಪಾತದ ದರ್ಶನ ಒದಗಿಸಿತು. ಆದರೆ ಈವರೆಗೆ ಹೇಳಲಾಗುತ್ತಿರುವ ಕೋವಿಡ್‌ ನ ಮೂರನೇ ಅಲೆಯೂ ಇದೇ ರೀತಿ ಬರಬಹುದು ಎಂಬ ಕಲ್ಪನೆ ಮೂಡಿಸಿದೆ. ಜನ ಕೂಡ ಅದನ್ನು ಸ್ವಾಗತಿಸುವಂತೆ ಯಾವುದೇ ಭೌತಿಕ ಅಂತರ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವ ಗೋಜಿಗೇ ಹೋಗದೆ ಜಲಪಾತ ವೀಕ್ಷಣೆ ಹಾಗೂ ಮೊಬೈಲ್ ಸೆಲ್ಫಿ ಫೋಟೋಗಳ ಗುಂಗಿನಲ್ಲಿ ಮುಳುಗಿದ್ದುದು ಕಂಡುಬಂದಿದೆ.

ಇದನ್ನೂ ಓದಿ : ಉಡುಪಿ: 1ಕಿಲೋ, 226  ಗ್ರಾಂ ಗಾಂಜಾ ವಶ; ಇಬ್ಬರು ಆರೋಪಿಗಳ  ಬಂಧನ

ಪ್ರವೇಶ ಶುಲ್ಕ ಸಂಗ್ರಹ 2.2 ಲಕ್ಷ ರೂ..!

ಖಾಸಗಿ ಕಾರು, ಪ್ರವಾಸಿ ವಾಹನಗಳೇ ಹೆಚ್ಚಿನ ಸಂಖ್ಯೆಯಲ್ಲಿ ಜೋಗದತ್ತ ಪಯಣಿಸಿದ್ದರಿಂದ ಎನ್‌ ಎಚ್ 206ನಲ್ಲಿ ಕಾರುಗಳ ರ‍್ಯಾಲಿ ನಡೆಯುತ್ತಿದೆಯೇನೋ ಎಂಬ ದೃಶ್ಯ ಸಾಗರ ಜೋಗದ ನಡುವೆ ಕಂಡುಬಂದಿತು. ಜೋಗ ಅಭಿವೃದ್ಧಿ ಪ್ರಾಧಿಕಾರದ ಪ್ರವೇಶ ಶುಲ್ಕ ಸಂಗ್ರಹ ಎರಡೂವರೆ ಲಕ್ಷ ರೂ. ದಾಟಬಹುದು ಎಂದು ಅಂದಾಜಿಸಲಾಗಿದೆ. ಶನಿವಾರ ಈ ಪ್ರವೇಶ ಶುಲ್ಕ ಸಂಗ್ರಹ 2.2 ಲಕ್ಷ ರೂ. ಆಗಿತ್ತು ಎಂದು ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಪ್ರವಾಸಿಗರ ಸಂಖ್ಯೆ ತೀವ್ರವಾಗಿ ಹೆಚ್ಚಿದ್ದರಿಂದ ಮೈಸೂರು ಬಂಗ್ಲೋ ಭಾಗದಲ್ಲಿ ಪ್ರವಾಸಿ ವಾಹನಗಳು ತುಂಬಿ ತುಳುಕಿದವು. ಜಾತ್ರೆಯ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಕ್ಯೂ ನಿಂತ ಸ್ಥಿತಿ ನಿರ್ಮಾಣವಾಗಿತ್ತು. ಅರ್ಧದಿಂದ ಮುಕ್ಕಾಲು ಘಂಟೆ ಕ್ಯೂನಲ್ಲಿ ನಿಂತ ನಂತರವೇ ಜಲಪಾತ ದರ್ಶನಕ್ಕೆ ಪ್ರವೇಶ ಸಿಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ನಿಯಂತ್ರಣ ವ್ಯವಸ್ಥೆ ನಿರ್ವಹಿಸಲಾಗದ ಪೊಲೀಸರು ಸಂಪೂರ್ಣವಾಗಿ ಕೈಚೆಲ್ಲಿದರು. ಇದೇ ವೇಳೆ ತಾಲೂಕಿನ ಧಾರ್ಮಿಕ ಕ್ಷೇತ್ರಗಳಾದ ವರದಪುರ, ಸಿಗಂದೂರಿನಲ್ಲಿಯೂ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆಯಾಗಿತ್ತು.

ಇದನ್ನೂ ಓದಿ : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ

ಟಾಪ್ ನ್ಯೂಸ್

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್​ ವಿಶ್ವ ದಾಖಲೆ ಬರೆದ ಯುವಕ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

ಚಿಕ್ಕಮಗಳೂರು: 436 ಗ್ರಾಮಗಳಲ್ಲಿ ಕುಡಿವ ನೀರಿನ ಅಭಾವ

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.