ನವಜಾತ ಶಿಶುವಿಗೆ ಸಿಗಲಿದೆ ವಿಶಿಷ್ಟ  ಗುರುತಿನ ಚೀಟಿ


Team Udayavani, Aug 2, 2021, 7:30 AM IST

ನವಜಾತ ಶಿಶುವಿಗೆ ಸಿಗಲಿದೆ ವಿಶಿಷ್ಟ  ಗುರುತಿನ ಚೀಟಿ

ಸರಕಾರದ ಯಾವುದೇ ಸೌಲಭ್ಯ ಪಡೆಯಬೇಕಾದರೆ ಜನರು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ನೀಡುವ ಆಧಾರ್‌ ಕಾರ್ಡ್‌ ಹೊಂದಿರುವುದು ಕಡ್ಡಾಯ. ಜನನ ಪ್ರಮಾಣ ಪತ್ರವಿಲ್ಲದೆ ಯುಐಡಿಎಐಯಿಂದ ಆಧಾರ್‌ ಕಾರ್ಡ್‌ ಪಡೆಯುವುದು ಅಸಾಧ್ಯವಾಗಿತ್ತು. ಜನನ ಪ್ರಮಾಣ ಪತ್ರಕ್ಕಾಗಿ ಕನಿಷ್ಠ 1 ತಿಂಗಳು ಕಾಯಲೇಬೇಕಾಗುತ್ತದೆ. ಇದರಿಂದ ಶಿಶುಗಳಿಗೆ ಸರಕಾರದಿಂದ ದೊರೆಯುವ ಸೌಲಭ್ಯಗಳು ಸಕಾಲದಲ್ಲಿ ಸಿಗುವುದು ಕಷ್ಟವಾಗಿತ್ತು. ಆದರೆ ಇನ್ನು ಈ ಸಮಸ್ಯೆ ಎದುರಾಗದು. ಯಾಕೆಂದರೆ ನವಜಾತ ಶಿಶುಗಳಿಗೆ 12 ಅಂಕೆಗಳ ವಿಶಿಷ್ಟ ಗುರುತಿನ ಚೀಟಿಯನ್ನು ಜನನ ಪ್ರಮಾಣ ಪತ್ರ ಇಲ್ಲದೇ ಇದ್ದರೂ ಪಡೆಯಬಹುದಾಗಿದೆ.

ಬಾಲ್ ಆಧಾರ್ ಕಾರ್ಡ್ : ಯುಐಡಿಎಐ ಪರಿಚಯಿಸಿರುವ ಬಾಲ್‌ ಆಧಾರ್‌ ಕಾರ್ಡ್‌ ಅನ್ನು ನವಜಾತ ಶಿಶುಗಳಿಗೆ ನೀಡಲಾಗುತ್ತದೆ. ಇದನ್ನು ಪಡೆಯುವುದು ಸುಲಭ. ಶಿಶುವಿನ ಹೆತ್ತವರು ಇದಕ್ಕಾಗಿ ಆಸ್ಪತ್ರೆಯಿಂದ ಡಿಸಾcರ್ಜ್‌ ಆದ ಪ್ರಮಾಣ ಪತ್ರ ಮತ್ತು ಅವರ ಆಧಾರ್‌ ಕಾರ್ಡ್‌ ಪ್ರತಿಯನ್ನು ಸಲ್ಲಿಸಬೇಕಾಗುತ್ತದೆ. ಆದರೆ ಮಗುವಿಗೆ 5 ವರ್ಷ ತುಂಬಿದಾಗ ಬಯೋಮೆಟ್ರಿಕ್‌  ನೀಡಿ ಹೊಸದಾಗಿ ಆಧಾರ್‌ ಕಾರ್ಡ್‌ ಪಡೆಯಬೇಕು. ಒಂದು ವೇಳೆ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡದೇ ಇದ್ದರೆ ಮಗುವಿನ ಹೆಸರಿನಲ್ಲಿರುವ ಬಾಲ್‌ ಆಧಾರ್‌ ಕಾರ್ಡ್‌ ನಿಷ್ಕ್ರಿಯವಾಗುವುದು. ಆಗ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಸಿ ಆಧಾರ್‌ ಕಾರ್ಡ್‌ ಪಡೆಯಬೇಕಾಗುತ್ತದೆ.

ಬಯೋಮೆಟ್ರಿಕ್ ಅಪ್ಡೇಟ್ ವಿಧಾನ :

  1. ಯುಐಡಿಎಐ ನೀಡಿರುವ ನೇರ ಲಿಂಕ್‌- appointments.uidai.gov.in/easearchaspx?AspxAutoDetectCookieSupport=1 ಗೆ ಲಾಗಿನ್‌ ಆಗಿ.

2.ಆಯ್ಕೆಗಳಲ್ಲಿ ಒಂದನ್ನು ಆರಿಸಿ- ರಾಜ್ಯ, ಅಂಚೆ (ಪಿನ್‌)ಕೋಡ್‌ ಬಳಸಿ ಸರ್ಚ್‌ ಬಾಕ್ಸ್‌  ಆಯ್ಕೆ ಮಾಡಿ.

3.ನೀಡಿರುವ ಆಯ್ಕೆಗಳಲ್ಲಿ ಒಂದನ್ನು ಭರ್ತಿ ಮಾಡಿ ಕೇಳಿರುವ ಮಾಹಿತಿಯನ್ನು ತುಂಬಿಸಿ ಬಳಿಕ ಲೊಕೇಟ್‌ ಸೆಂಟರ್‌ ಬಟನ್‌ ಕ್ಲಿಕ್‌ ಮಾಡಿದರೆ ಹತ್ತಿರದ ಆಧಾರ್‌ ಕೇಂದ್ರವನ್ನು ತೋರಿಸುತ್ತದೆ. ಅಲ್ಲಿ ಅಪಾಯಿಂಟ್‌ಮೆಂಟ್‌ ಪಡೆದು ದಿನಾಂಕ, ಸಮಯ ನಿಗದಿ ಪಡಿಸಿ ಮಗುವಿನೊಂದಿಗೆ ಆಧಾರ್‌ ಕೇಂದ್ರಕ್ಕೆ ಹೋಗಿ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡಿ ನಿಮ್ಮ ಮಕ್ಕಳ ಆಧಾರ್‌ ಕಾರ್ಡ್‌ ಅನ್ನು ಪಡೆಯಬಹುದು.

ಬಯೋ ಮೆಟ್ರಿಕ್ ಅಪ್ಡೇಟ್ ಹೇಗೆ?:

ಬಾಲ್‌ ಆಧಾರ್‌ ಕಾರ್ಡ್‌ 5 ವರ್ಷದೊಳಗಿನ ಮಕ್ಕಳಿಗಾಗಿ ಇರುವಂಥದ್ದು. ಮಗುವಿಗೆ ಐದು ವರ್ಷ ಮತ್ತು 15 ವರ್ಷ ತುಂಬಿದ ಬಳಿಕ ಬಯೋಮೆಟ್ರಿಕ್‌ ಅಪ್‌ಡೇಟ್‌ ಮಾಡುವುದು ಕಡ್ಡಾಯ. ಇದಕ್ಕಾಗಿ ಹತ್ತಿರದ ಆಧಾರ್‌ ಕಾರ್ಡ್‌ ಕೇಂದ್ರವನ್ನು ಸಂಪರ್ಕಿಸಬಹುದು. ಇದು ಸಂಪೂರ್ಣ ಉಚಿತವಾಗಿದೆ. ಮಗುವಿಗೆ 5 ಹಾಗೂ 15 ವರ್ಷ ತುಂಬಿದ ಅನಂತರ ಬಯೋಮೆಟ್ರಿಕ್‌ ಅಪ್‌ಡೇಟ್‌ಗಾಗಿ ಹೆತ್ತವರು ಮೊದಲೇ ಆನ್‌ಲೈನ್‌ನಲ್ಲಿ ಯುಐಡಿಎಐಯ ಲಿಂಕ್‌ ಕ್ಲಿಕ್‌ ಮಾಡಿ ಹತ್ತಿರದ ಸ್ಥಳವನ್ನು ಆಯ್ಕೆ ಮಾಡಿಕೊಳ್ಳಬಹುದು.

 

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.