ಮೋದಿ, ಮತ್ತವರ ಗುಲಾಮರು ದೇಶದ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ : ರಾಹುಲ್ ಕಿಡಿ
Team Udayavani, Aug 2, 2021, 1:59 PM IST
ನವ ದೆಹಲಿ : ಸಾವಿರಾರು ಕಿಲೋಮೀಟರ್ ಭಾರತದ ಭೂಮಿಯನ್ನು ಚೀನಾಕ್ಕೆ ಮೋದಿ ಸರ್ಕಾರ ಬಿಟ್ಟುಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ಹರಿಹಾಯ್ದಿದ್ದಾರೆ.
ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಗಾಂಧಿ, ಮೋದಿ ಮತ್ತು ಅವರ ಗುಲಾಮರು ಸಾವಿರಾರು ಕಿಲೋಮೀಟರ್ ಭಾರತೀಯ ಭೂಮಿಯನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದಾರೆ. ಯಾವಾಗ ನಾವದನ್ನು ವಾಪಸ್ ಪಡೆಯುತ್ತೇವೆ ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.
मोदी जी व उनके चापलूसों ने हज़ारों किलोमीटर भारतीय भूमि चीन को सौंप दी।
हम इसे कब वापस हासिल कर रहे हैं?
— Rahul Gandhi (@RahulGandhi) August 2, 2021
ಇದನ್ನೂ ಓದಿ : ಅಂದು ಶಿವಮೊಗ್ಗ ಪ್ರಾಂತ್ಯದಲ್ಲಿ ಶ್ರೀಮಂತರು, ಬ್ರಿಟಿಷರಿಗೆ ದುಸ್ವಪ್ನವಾಗಿದ್ದ ರಾಬಿನ್ ಹುಡ್ ಕನ್ನೇಶ್ವರ ರಾಮ!
ಇನ್ನು, ಚೀನಾದ ಎಲ್ ಎ ಸಿ ಅಥವಾ ಗಡಿ ನಿಯಂತ್ರಣ ರೇಖೆಯ ಮೋಲ್ಡೋದಲ್ಲಿ ಶನಿವಾರ ಸಂಜೆ 7.30 ಕ್ಕೆ, ಹನ್ನೆರಡನೇ ಸುತ್ತಿನ ಮಾತುಕತೆಗಳು ನಡೆದಿವೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ. ಒಂಬತ್ತು ಗಂಟೆಗಳ ಸಭೆಗಳಲ್ಲಿ, ಪೂರ್ವದ ಲಡಾಖ್ ಜೊತೆಗೆ ನಡೆಯುತ್ತಿರುವ ಮಿಲಿಟರಿ ಬಿಕ್ಕಟ್ಟನ್ನು ಪರಿಹರಿಸಲು ಉಭಯ ದೇಶದಗಳ ಸೇನಾಧಿಕಾರಿಗಳು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವ್ಯಾಪಕ ಮಾತುಕತೆಯ ನಂತರ ಭಾರತ ಮತ್ತು ಚೀನಾ ಈಗಾಗಲೇ ಪಾಂಗಾಂಗ್ ಸರೋವರದ ದಡದಿಂದ ಬೇರ್ಪಟ್ಟಿವೆ. ಕಳೆದ ವರ್ಷ ಇದು ಹಲವಾರು ಚೀನೀ ಮತ್ತು ಭಾರತೀಯ ಸೈನಿಕರ ಸಾವಿಗೆ ಕಾರಣವಾಯಿತು. ಘರ್ಷಣೆಯಲ್ಲಿ ಭಾರತವು 20 ಸೈನಿಕರನ್ನು ಕಳೆದುಕೊಂಡಿದೆ ಎಂದು ಘೋಷಿಸಿದರೂ, ಚೀನಿಯರು ತನ್ನ ಮೃತಪಟ್ಟ ಸೈನಿಕರ ಸಂಖ್ಯೆಯನ್ನು ಇನ್ನೂ ಒಪ್ಪಿಕೊಂಡಿಲ್ಲ.
ಇದನ್ನೂ ಓದಿ : ಕಾಣಿಪಾಕಂನ ವರಸಿದ್ಧಿ ವಿನಾಯಕ ದೇಗುಲಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ