ಬಸಣ್ಣನ ಆಸ್ಥಾನದಲ್ಲಿ ಯಾರಿಗೆ ಸಚಿವ ಸ್ಥಾನ?

ಸಚಿವ ಸ್ಥಾನದ ಚರ್ಚೆ ಜೋರು | ರೇಸ್‌ನಲ್ಲಿ ಚರಂತಿಮಠ-ದೊಡ್ಡನಗೌಡ ಹೆಸರು¬| ರಾಜ್ಯಾಧ್ಯಕ್ಷರಾಗ್ತಾರಾ ನಿರಾಣಿ?

Team Udayavani, Aug 2, 2021, 3:35 PM IST

jk

ವರದಿ: ಶ್ರೀಶೈಲ ಕೆ. ಬಿರಾದಾರ

ಬಾಗಲಕೋಟೆ: ನಾಡಿನ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಜಿಲ್ಲೆಯ ಯಾವ ನಾಯಕರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಚರ್ಚೆ ನಿತ್ಯವೂ ನಡೆಯುತ್ತಿವೆ.

ಹೌದು. ಬೀಳಗಿ ಕ್ಷೇತ್ರದ ಮುರುಗೇಶ ನಿರಾಣಿ ಸಿಎಂ ಆಗಲಿದ್ದಾರೆಂಬ ಬಹುದೊಡ್ಡ ನಿರೀಕ್ಷೆ ಜಿಲ್ಲೆಯ ಮಟ್ಟಿಗೆ ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದು, ಪಕ್ಷದಲ್ಲಿ ದೊಡ್ಡ ಹುದ್ದೆ ಸಿಗಲಿದೆ ಎಂಬ ಆಶಾಭಾವ ಇನ್ನೊಂದೆಡೆ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯಾಧ್ಯಕ್ಷರಾಗ್ತಾರಾ ನಿರಾಣಿ: ಮುಖ್ಯಮಂತ್ರಿ ಖುರ್ಚಿಯವರೆಗೂ ಹೆಸರು ಹೋಗಿ ಬಂದು ಕೊನೆ ಗಳಿಗೆಯಲ್ಲಿ ಅವಕಾಶ ವಂಚಿತರಾದ ಮುರುಗೇಶ ನಿರಾಣಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ದೊರೆಯಲಿದೆಯೇ ಎಂಬ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿರಾಣಿ ಅವರ ಹೆಸರು ಇದೇ ಮೊದಲ ಬಾರಿಗೆ ಕೇಳಿ ಬಂದಿರಲಿಲ್ಲ. ಕಳೆದ 2008-2013ರ ಬಿಜೆಪಿ ಸರ್ಕಾರದ ಅವಧಿಯಲ್ಲೂ ಯಡಿಯೂರಪ್ಪ ಅವರ ರಾಜೀನಾಮೆ ಬಳಿಕವೂ ಅವರ ಹೆಸರು ಕೇಳಿ ಬಂದಿತ್ತು. ಆಗ ಇಡೀ ಜಿಲ್ಲೆಯಲ್ಲಿ ನಿರಾಣಿ ಸಿಎಂ ಆಗಲೆಂದು ಹಲವು ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರ, ಉರುಳು ಸೇವೆ ಕೂಡ ಮಾಡಲಾಗಿತ್ತು. ಆದರೆ ಆಗಲೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಸಿಎಂ ಸ್ಥಾನ ಪಕ್ಕಾ ಎಂದೇ ನಂಬಿದ್ದ ನಿರಾಣಿ ಬೆಂಬಲಿಗರು ಹಾಗೂ ನಿರಾಣಿಗೆ ನಿರಾಸೆಯಾದರೂ ಉತ್ತರ ಕರ್ನಾಟಕಕ್ಕೆ ಈ ಸ್ಥಾನ ದೊರೆತಿದೆ ಎಂಬ ಸಂಭ್ರಮ ಮತ್ತೂಂದೆಡೆ ಮನೆ ಮಾಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾದ ನಿರಾಣಿ, ಪ್ರಬಲ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಉತ್ತರ ಕರ್ನಾಟಕ ಮತ್ತು ರಾಜ್ಯದಲ್ಲಿ ಪ್ರಬಲ ಸಮುದಾಯಕ್ಕೆ ಅವಕಾಶ ಕೊಡುವ ಜತೆಗೆ ಪಕ್ಷ ಸಂಘಟನೆಗೆ ನೆರವಾಗಲು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ದೊರೆಯಲಿದೆ ಎಂಬ ಚರ್ಚೆಗೂ ರೆಕ್ಕೆ-ಪುಕ್ಕ ಹೆಚ್ಚಿವೆ.

ಸಿಎಂ ಸ್ಥಾನ ತಪ್ಪಿದ್ದು ಹೇಗೆ?: ನಿರಾಣಿ ಅವರು ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕಕ್ಕೂ ಸಕ್ಕರೆ ಉದ್ಯಮ ವಿಸ್ತರಿಸಿ ಇಡೀ ದೇಶದಲ್ಲೇ ಯಶಸ್ವಿ ಉದ್ಯಮಿ ಎಂಬ ಹೆಸರೂ ಪಡೆದವರು. ಆ ಉದ್ಯಮದ ಮೂಲಕವೇ ಪಕ್ಷದ ರಾಷ್ಟ್ರೀಯ ನಾಯಕರಿಗೆ ಹತ್ತಿರವಾಗಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮಲು ಕಾರಣವೂ ಆಗಿದೆ. ಕೇವಲ ಶಾಸಕರಾಗಿದ್ದುಕೊಂಡೇ ದೆಹಲಿ ಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ನಿರಾಣಿ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದರು. ನಿರಾಣಿ ಮುಟ್ಟಿದ್ದೆಲ್ಲ ಚಿನ್ನ ಎಂಬ ಮಾತು ಅವರ ಮನೆತನ ಹಾಗೂ ಬೆಂಬಲಿಗರಲ್ಲಿದ್ದು, ಅದು ಹಲವು ಬಾರಿ ಉದ್ಯಮದಲ್ಲಿ ಯಶಸ್ವಿಯಾಗಿ ಕೇಳಿ ಬಂದಿದೆ. ಆದರೆ ಹಿಂದೆ ಯಡಿಯೂರಪ್ಪ ಅವರ ಮಾನಸಪುತ್ರನಂತಿದ್ದ ನಿರಾಣಿ ಅವರು ಕಳೆದ 2013ರ ಚುನಾವಣೆ ವೇಳೆ ಅವರೊಂದಿಗೆ ಕೆಜೆಪಿ ಸೇರದ ಹಿನ್ನೆಲೆಯಲ್ಲಿ ಈಗ ಅದೇ ಯಡಿಯೂರಪ್ಪ ಅವರು ನಿರಾಣಿಗೆ ಸಿಎಂ ಸ್ಥಾನ ತಪ್ಪಿಸಲು ಕಾರಣರಾದರೇ? ಎಂಬ ಚರ್ಚೆಯೂ ನಡೆಯುತ್ತಿದೆ.

ನೂತನ ಮುಖ್ಯಮಂತ್ರಿ ನೇಮಕದ ಹಿಂದಿನ ದಿನ ಸಿಎಂ ಸ್ಥಾನ ಸಂಪೂರ್ಣ ಖಚಿತ ಮಾಡಿಕೊಂಡೇ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನಿರಾಣಿ ಅವರಿಗೆ ಮರುದಿನದ ಬೆಳವಣಿಗೆಯಲ್ಲಿ ಕೈ ತಪ್ಪಿ ಹೋಗಿದೆ.

ಚರಂತಿಮಠ-ದೊಡ್ಡನಗೌಡರ ಹೆಸರೂ ಮುಂಚೂಣಿ: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಿಲ್ಲೆಯ ಹಿರಿಯ ನಾಯಕ ಗೋವಿಂದ ಕಾರಜೋಳರಿಗೆ ಸ್ಥಾನ ದೊರೆಯುವುದರಲ್ಲಿ ಸಂಶಯವಿಲ್ಲ. ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೂ ಅವರ ಹೆಸರು ಕೇಳಿ ಬರುತ್ತಿದೆಯಾದರೂ ರಾಜಕೀಯ ಲೆಕ್ಕಾಚಾರ, ವರ್ಗವಾರು ಕೋಟಾದಡಿ ಅವರಿಗೆ ಪ್ರಮುಖ ಹುದ್ದೆ ಮಾತ್ರ ದೊರೆಯಲಿದೆ. ಆದರೆ ಅವರ ಹೊರತಾಗಿ ಬಾಗಲಕೋಟೆಯ ಕ್ರಿಯಾಶೀಲ ಶಾಸಕ ಡಾ|ವೀರಣ್ಣ ಚರಂತಿಮಠ, ಹುನಗುಂದದ ದೊಡ್ಡನಗೌಡ ಪಾಟೀಲ ಅವರ ಹೆಸರೂ ಮುಂಚೂಣಿಯಲ್ಲಿದೆ. ತೇರದಾಳದ ಸಿದ್ದು ಸವದಿ ಕೂಡ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆಯಲ್ಲಿ ಚರಂತಿಮಠ ಅವರ ಹೆಸರು, ಸಚಿವ ಸ್ಥಾನಕ್ಕೆ ಪ್ರಬಲವಾಗಿ ಕೇಳಿ ಬರುತ್ತಿದೆ. ಯಾವುದೇ ಸ್ಥಾನ, ಜವಾಬ್ದಾರಿ ಕೊಟ್ಟರೂ ಸಶಕ್ತವಾಗಿ ನಿಭಾಯಿಸುತ್ತಾರೆಂಬ ಮಾತು ಅವರ ಹೆಸರಿಗಿದ್ದು, ಪಕ್ಷದ ಹೈಕಮಾಂಡ್‌ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.