ಬೆಳ್ತಂಗಡಿ: 37,718 ಪಡಿತರ  ಚೀಟಿಗಳ ಇ-ಕೆವೈಸಿ ಪೂರ್ಣ


Team Udayavani, Aug 3, 2021, 3:10 AM IST

Untitled-1

ಬೆಳ್ತಂಗಡಿ: ನ್ಯಾಯಬೆಲೆ ಅಂಗಡಿ ಗಳಲ್ಲಿ ಈಗಾಗಲೆ ಇ- ಕೆವೈಸಿಯಾಗಿರುವ ಪಡಿ ತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ, ಉಳಿದಿರುವ ಎಲ್ಲ ಫಲಾನುಭವಿಗಳ ಇ-ಕೆವೈಸಿಯನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಆ.1 ನೇ ತಾರೀಕಿನಿಂದ 10 ನೇ ತಾರೀಕಿನರವರೆಗೆ ನಡೆಸುವ ಪ್ರಕ್ರಿಯೆ ಬೆಳ್ತಂಗಡಿ ತಾಲೂಕಿನಲ್ಲಿ ಬಿರುಸುಗೊಂಡಿದೆ.

ಇ-ಕೆವೈಸಿ ಮಾಡಿಸುವ ಉದ್ದೇಶ ಪಡಿತರ ಚೀಟಿದಾರರು ತಮ್ಮ ಇರುವಿಕೆಯ ಕುರಿತು ದೃಢೀಕರಣ ಮಾಡುವ ಪ್ರಕ್ರಿಯೆಯಾಗಿದೆ. ಎ.ಪಿ.ಎಲ್‌., ಬಿ.ಪಿ.ಎಲ್‌., ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಸ್ಥರು ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಬೇಕಿದೆ. 2021ರ ಆಗಸ್ಟ್‌ ತಿಂಗಳ ವರೆಗೆ ಇ-ಕೆವೈಸಿ ಅವಕಾಶ ನೀಡ ಲಾಗಿದ್ದು, ಆ ಬಳಿಕ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿ ಯಲಾಗುತ್ತದೆ.

ಗ್ರಾಮೀಣ ಭಾಗದಲ್ಲಿ ಸವಾಲು:

ಜಾತಿ ಪ್ರಮಾಣ ಪತ್ರ, ಅನಿಲ ಸಂಪರ್ಕದ ಪುಸ್ತಕ, ಪಡಿತರ ಚೀಟಿ, ಆಧಾರ್‌ ಕಾರ್ಡ್‌ ಹಾಗೂ ಆಧಾರ್‌ ಸಂಖ್ಯೆಗೆ ನೋಂದಾಯಿಸಿದ ಮೊಬೈಲ್‌ ಸಂಖ್ಯೆಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಕೊರೊನಾದ ಮಧ್ಯೆಯೂ ಸಾಮಾಜಿಕ ಅಂತರ ಪಾಲಿ ಸುವುದು ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ ನೆಟ್‌ವರ್ಕ್‌ ಸಮಸ್ಯೆ ಇ-ಕೆವೈಸಿಗೆ ತೊಡ ಕಾಗಿರುವ ಮಧ್ಯೆಯೂ ವಯಸ್ಸಾದ, ಕೊರೊನಾ ಬಾಧಿತರನ್ನು ಕರೆತಂದು ಕೆವೈಸಿ ನೀಡುವುದು ಸವಾಲಾಗಿದೆ.

ಒಟ್ಟು 62,844 ಪಡಿತರ ಚೀಟಿ:

ಬೆಳ್ತಂಗಡಿ ತಾ| ನಲ್ಲಿ ಒಟ್ಟು 62,844 ಪಡಿತರ ಚೀಟಿಗಳಲ್ಲಿ 37,718 ಪಡಿತರ ಚೀಟಿಗಳ ಇ-ಕೆವೈಸಿ ಪೂರ್ಣಗೊಂಡಿದೆ. ಒಟ್ಟು 2,49,068 ಪಡಿತರ ಚೀಟಿ ಫಲಾನು ಭವಿಗಳು ಇದ್ದು, 1,45,189 ಮಂದಿಯ ಇ-ಕೆವೈಸಿ ಪೂರ್ಣಗೊಂಡಿದೆ. ತಾ|ನ ಎಲ್ಲ 68 ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಕಾರ್ಯ ನಡೆಸ ಲಾಗುತ್ತಿದ್ದು, ಇ-ಕೆವೈಸಿ ಬಾಕಿ ಇರುವ ಫಲಾನುಭವಿಗಳು ಆ.10ರ ಒಳಗೆ ತಮ್ಮ ಬಯೋ ದೃಢೀಕರಣವನ್ನು ಕಡ್ಡಾಯ ವಾಗಿ ನೀಡುವಂತೆ ಆಹಾರ ಇಲಾಖೆ ಸೂಚಿಸಿದೆ. ಈ ಕುರಿತು ಸಂದೇಹಗಳು ಇದ್ದಲ್ಲಿ 08256-232383 ದೂರವಾಣಿ ಸಂಪರ್ಕಿಸಬಹುದಾಗಿದೆ.

ಪಡಿತರ ಚೀಟಿದಾರರು ತಮ್ಮ ಇರುವಿಕೆಯನ್ನು ಖಾತ್ರಿ ಪಡಿಸಲು ಬಯೋ- ದೃಢೀಕರಣ ನೀಡುವ ಇ-ಕೆವೈಸಿ ಮಾಡಿಸಬೇಕು. ಆಗಸ್ಟ್‌ 10ರ ವರೆಗೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು ಬಾಕಿ ಇರುವವರು ಕಡ್ಡಾಯವಾಗಿ ಮಾಡಬೇಕು. ಇ-ಕೆವೈಸಿ ಮಾಡಿಸದಿದ್ದಲ್ಲಿ ಪಡಿತರ ಹಂಚಿಕೆ ತಡೆಹಿಡಿಯಲಾಗುತ್ತದೆ. -ವಿಶ್ವ ಕೆ., ಆಹಾರ ನಿರೀಕ್ಷಕರು, ಬೆಳ್ತಂಗಡಿ 

 

-ವಿಶೇಷ ವರದಿ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.