ಅಧಿಕಾರ ಇಲ್ಲದಿದ್ದರೂ ಅಭಿವೃದ್ಧಿಗೆ ಶ್ರಮಿಸುವೆ : ಜಗದೀಶ ಶೆಟ್ಟರ

ವಿಳಂಬವಾಗದಂತೆ ಚಾಲ್ತಿ| ಕಾಮಗಾರಿಗಳ ಮುಗಿಸಲು ಆದ್ಯತೆ| ­ಮಳೆ ಕಡಿಮೆಯಾದ ನಂತರ ರಸ್ತೆ ಗುಂಡಿ ಮುಚ್ಚುವ ಕೆಲಸ

Team Udayavani, Aug 3, 2021, 12:59 PM IST

fds

ಹುಬ್ಬಳ್ಳಿ: ಮುಖ್ಯಮಂತ್ರಿ ಸೇರಿದಂತೆ ಯಾವುದೇ ಖಾತೆ ಸಿಕ್ಕರೂ ಕಡಿಮೆ ಅವಧಿ ದೊರೆತಿದೆ. ಐದು ವರ್ಷಗಳ ಕಾಲ ಒಂದು ಇಲಾಖೆಯ ಅಧಿಕಾರ ದೊರೆತಿದ್ದರೆ ಸ್ಪಷ್ಟ ರೂಪ ಕೊಡುತ್ತಿದ್ದೆ. ಆದರೆ ಇದೀಗ ಅಧಿಕಾರ ಹೋಗಿದೆಯಾದರೂ ಇಲ್ಲಿನ ಅಭಿವೃದ್ಧಿಗೆ ಶ್ರಮಿಸುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.

ಶಿರೂರ ಪಾರ್ಕ್‌ನ ಉದ್ಯಾನವನದಲ್ಲಿ ರಿಕ್ರಿಯೇಶನ್‌ ಭವನಕ್ಕೆ ಪೂರಕವಾದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು. ಟೆಂಡರ್‌ ಶ್ಯೂರ್‌ ರಸ್ತೆಯಾದ ನಂತರ ಈ ಭಾಗದ ಚಿತ್ರಣವೇ ಬದಲಾಗಿದೆ. ಈ ರಸ್ತೆ ನಿರ್ಮಾಣ ಸಂದರ್ಭದಲ್ಲಿ ಪರ್ಯಾಯ ಮಾರ್ಗಗಳಾಗಿ ಒಳ ರಸ್ತೆಗಳನ್ನು ಬಳಸಿಕೊಳ್ಳಲಾಯಿತು. ಇದರಿಂದ ರಸ್ತೆಗಳು ಹಾಳಾಗಿದ್ದವು ಎನ್ನುವ ದೂರುಗಳು ಬಂದಿದ್ದವು. ಅಂದು ನೀಡಿದ ಭರವಸೆಯಂತೆ ಒಳ ರಸ್ತೆಗಳ ದುರಸ್ತಿ ಮಾಡಲಾಗಿದೆ. ಎರಡು ಬದಿಯಲ್ಲಿ ಕಾಂಕ್ರಿಟ್‌ ರಸ್ತೆ ಬರಲಿದ್ದು, ಧೂಳು ಮುಕ್ತ ಪ್ರದೇಶವಾಗಲಿದೆ. ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಟೆಂಡರ್‌ ಪ್ರಕ್ರಿಯೆ ಹಂತದಲ್ಲಿದೆ. ಭೂಮಿಪೂಜೆ ನಂತರ ಕಾಮಗಾರಿ ಆರಂಭವಾಗಲಿದೆ. ಮಳೆಯಿಂದಾಗಿ ರಸ್ತೆಗಲ್ಲಿ ಗುಂಡಿಗಳಾಗಿದ್ದು, ಮಳೆ ಕಡಿಮೆಯಾದ ನಂತರ ಗುಂಡಿ ಮುಚ್ಚುವ ಕೆಲಸ ಆರಂಭವಾಗಲಿದೆ ಎಂದರು.

ಗೋಕುಲ ಕೈಗಾರಿಕೆ ಪ್ರದೇಶದಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ನಡೆದ ಕಾಮಗಾರಿಗಳಿಂದ ರಾಜ್ಯದಲ್ಲಿ ಮಾದರಿ ಕೈಗಾರಿಕೆ ಪ್ರದೇಶವಾಗಿದೆ. ಇದರಂತೆ ತೋಳನಕೆರೆ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿವೆ. ಈ ಯೋಜನೆಗಳು ವಿಳಂಬವಾಗದೆ ಪೂರ್ಣಗೊಳಿಸುವ ಕೆಲಸ ಮಾಡಿಸುತ್ತೇನೆ. ಈ ಭಾಗದ ಕೈಗಾರಿಕೆ ಅಭಿವೃದ್ಧಿಗಾಗಿ ಏಕಸ್‌, ಇನ್‌ಪ್ಲೆಕ್ಸ್‌ ಸೇರಿದಂತೆ ಹಲವು ಕಂಪನಿಗಳು ಸಾವಿರಾರು ಕೋಟಿ ರೂ. ಹೂಡಿಕೆ ಮಾಡುವುದರೊಂದಿಗೆ ಸಾವಿರಾರು ಉದ್ಯೋಗ ಸೃಷ್ಟಿ ಮಾಡಲಿವೆ. ಎಫ್‌ಎಂಸಿಜಿ ವಲಯ ನಿರ್ಮಾಣದ ವಿಚಾರದಲ್ಲಿ ಸಾಕಷ್ಟು ಪ್ರಗತಿಯಾಗಿದ್ದು, ಇದರ ಸ್ಥಾಪನೆಗೆ ಮೊದಲ ಆದ್ಯತೆ ಕೊಡಲಾಗುವುದು.ಅಧಿಕಾರದಿಂದ ಕೆಳಗಿಳಿಯುವ ಸಂದರ್ಭದಲ್ಲಿ ಬೆಳಗಾವಿ ಕಣಗಾಲ ಕೈಗಾರಿಕೆ ಪ್ರದೇಶದಲ್ಲಿ ಗ್ಲಾಸ್‌ ತಯಾರಿಕೆ ಕಂಪನಿಯೊಂದಕ್ಕೆ 200 ಎಕರೆ ಭೂಮಿ ಮಂಜೂರು ಮಾಡಿಸಿ ಉತ್ತರ ಕರ್ನಾಟಕದಲ್ಲಿ ದೊಡ್ಡ ಕೈಗಾರಿಕೆಗಳಿಗೆ ಶ್ರಮಿಸಿದ್ದೇನೆ ಎಂದು ಹೇಳಿದರು.

ಪಾಲಿಕೆ ಮಾಜಿ ಸದಸ್ಯ ಮಹೇಶ ಬುರ್ಲಿ ಮಾತನಾಡಿ, ಶಿರೂರು ಪಾಕ್‌ನ ಒಳ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆಯಿಂದ ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಉದ್ಯಾನದ ಲಾನ್‌ ಮಾಡಲಾಗಿದೆ. 12 ಲಕ್ಷ ರೂ. ವೆಚ್ಚದಲ್ಲಿ ರಿಕ್ರಿಯೇಶನ್‌ ಭವನ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಮತ್ತಿಷ್ಟು ಕೆಲಸಗಳು ಆಗಲಿವೆ. ಈ ಪ್ರದೇಶದಲ್ಲಿ 1.48 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರಿಟ್‌ ಶೋಲ್ಡರ್‌ ಕಾಮಗಾರಿ ನಡೆಯಲಿದೆ ಎಂದರು. ಮಂಜುನಾಥ ರೇವಣಕರ, ಆರ್‌.ಬಿ. ಗದಗಕರ, ಪ್ರಭು ಅಂಕಲಕೋಟೆ, ವಲಯ ಸಹಾಯಕ ಆಯುಕ್ತ ಇನ್ನಿತರರಿದ್ದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.