ಗೋವಿನ ಜೋಳದ ಬೆಳೆಗೆ ಸೈನಿಕ ಹುಳುವಿನ ಬಾಧೆ

ಎಲೆಗಳನ್ನು ತಿಂದು ಗಟ್ಟಿಯಾದ ಹಿಕ್ಕೆಗಳನ್ನು ಎಲೆಗಳ ಮೇಲೆ ಮತ್ತು ಸುಳಿಯಲ್ಲಿ ಕಾಣಬಹುದು

Team Udayavani, Aug 3, 2021, 6:24 PM IST

Hula

ಬಾಗಲಕೋಟೆ: ಜಿಲ್ಲೆಯ ವಿವಿಧ ತಾಲೂಕಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆದಿರುವ ಗೋವಿನ ಜೊಳದ ಬೆಳೆಯಲ್ಲಿ ಪರಕೀಯ ಹಾಗೂ ಆಕ್ರಮಣಕಾರಿ ಕೀಟ ನ್ಪೋಡಾಪ್ಟೀರಾ ಫ್ರೂಜಿಫೆರಡಾ ಹಾವಳಿ ಕಂಡುಬಂದಿದೆ ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದ್ದಾರೆ.

ಈ ಕೀಟವು ಬೆಳೆಯ ಸುಳಿಯಲ್ಲಿ ಇದ್ದು, ಹಗಲು ರಾತ್ರಿ ಇಡೀ ಚಟುವಟಿಕೆಯಿಂದ ಕೂಡಿದ್ದು ಎಲೆ ತಿನ್ನುತ್ತಾ ಹಾನಿ ಮಾಡುತ್ತಿದೆ. ಈ ಕೀಟವು ಲೆಪಿಡಾಪ್ಟೀರಾ ಗುಂಪಿಗೆ ಸೇರಿದ್ದು ಅಂತಾರಾಷ್ಟೀಯವಾಗಿ ಕೀಟ ತಜ್ಞರು ಇದನ್ನು ಫಾಲ್‌ ಆರ್ಮಿವರ್ಮ ಎಂದು ಗುರುತಿಸುತ್ತಾರೆ. ಈ ಕೀಟವು ವಿಶೇಷವಾಗಿ ಆಹಾರ ಧಾನ್ಯಗಳ ಬೆಳೆಗಳಾದ ಗೋವಿನ ಜೋಳ, ಜೋಳ ಹಾಗೂ ಇತರ ಬೆಳೆಗಳನ್ನು ಬಾಧಿಸುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಮೋಡ ಕವಿದ ಹಾಗೂ ತುಂತುರ ಮಳೆಯಿಂದ ಕೂಡಿದ ವಾತಾವರಣ ಇರುವುದರಿಂದ ಈ ಕೀಟದ ಪಸರಿಸಿರುವಿಕೆ ಇನ್ನೂ ಹೆಚ್ಚಾಗಿರುತ್ತದೆ. ಈ ಕೀಟವು ತನ್ನ ಜೀವನ ಚಕ್ರವನ್ನು 30-40 ದಿವಸಗಳಲ್ಲಿ ಪೂರ್ಣಗೊಳಿಸಬಲ್ಲದಾಗಿದ್ದು ಪ್ರೌಢ ಪತಂಗವು ಒಂದು ರಾತ್ರಿಯಲ್ಲಿ ಕನಿಷ್ಠ 100 ಕಿ.ಮೀ ದೂರವನ್ನು ಕ್ರಮಿಸಬಲ್ಲದು ಎಂದು ಕೃಷಿ ವಿಜ್ಞಾನ ಕೇಂದ್ರದ ಕೀಟಶಾಸ್ತ್ರಜ್ಞ ಡಾ| ಅರ್ಜುನ ಸೂಲಗಿತ್ತಿ ತಿಳಿಸಿದ್ದಾರೆ.

ಬಾಧೆಯ ಲಕ್ಷಣಗಳು: ತತ್ತಿಯಿಂದ ಹೊರಬಂದ ಮರಿಹುಳುಗಳು ಸಮೂಹವಾಸಿಯಾಗಿದ್ದು ಮೊದಲು ಮೊಟ್ಟೆಯ, ತತ್ತಿಯ ಸಿಪ್ಪೆಯನ್ನೆ ತಿಂದು ಬದುಕುತ್ತವೆ. ತದನಂತರ ಗೋವಿನ ಜೋಳದ ಸುಳಿಯಲ್ಲಿ ಉಳಿದುಕೊಂಡು ಸಸ್ಯಗಳ ಹರಿತ್ತನ್ನು ಕೆರೆದು ತಿಂದು ಬದುಕುತ್ತವೆ. ಇಂತಹ ಎಲೆಗಳು ಜಾಳು ಜಾಳಾಗಿದ್ದು ಅಸ್ಥಿಪಂಜರದಂತೆ ಗೋಚರಿಸಿ ಎಲೆಗಳಲ್ಲಿ ದೊಡ್ಡ ದೊಡ್ಡ ಹಾಗೂ ಸಾಲಿನಲ್ಲಿರುವ ಕಿಡಕಿಗಳನ್ನು ಅಥವಾ ರಂಧ್ರಗಳನ್ನು ಕೊರೆಯುತ್ತದೆ. ನಂತರದ ದಿನಗಳಲ್ಲಿ ಮರಿಗಳು ದೊಡ್ಡವಾದಾಗ ಸುಳಿ ಮತ್ತು ಎಲೆಗಳನ್ನು ತಿಂದು ಗಟ್ಟಿಯಾದ ಹಿಕ್ಕೆಗಳನ್ನು ಎಲೆಗಳ ಮೇಲೆ ಮತ್ತು ಸುಳಿಯಲ್ಲಿ ಕಾಣಬಹುದು.

ಸಮಗ್ರ ಕೀಟ ನಿರ್ವಹರ್ಣಾ ಕ್ರಮಗಳು: ಬೆಳೆ ಕಟಾವಾದ ನಂತರ ಮಾಗಿ ಉಳುಮೆ ಮಾಡುವುದರಿಂದ ಕೋಶಗಳನ್ನು ಮಣ್ಣಿನ ಮೇಲ್ಪದರಕ್ಕೆ ತಂದು ಹಕ್ಕಿಗಳಿಗೆ ಹಾಗೂ ಬಿಸಿಲಿನ ಪ್ರಖರತೆಗೆ ಒಡ್ಡಿ ನಿಯಂತ್ರಿಸಬಹುದು. ಶಿಫಾರಸು ಮಾಡಿದ ಅವಧಿಯಲ್ಲಿ ಬಿತ್ತನೆ ಕಾರ್ಯಕ್ರಮ ಪೂರ್ಣಗೊಳಿಸುವುದು. ಹಂತ ಹಂತವಾಗಿ ಬಿತ್ತನೆಯಾದಲ್ಲಿ  ಕೀಟಕ್ಕೆ ನಿರಂತರವಾಗಿ ಆಹಾರ ಲಭ್ಯವಾಗಲಿದ್ದು, ಹಲವಾರು ಸಂತತಿಗಳನ್ನು ಬೆಳೆಯ ಹಂತದಲ್ಲಿ ಕಾಣಬಹುದು, ಇದರಿಂದ ನಷ್ಟದ ಪ್ರಮಾಣ ಹೆಚ್ಚಾಗುವುದು. ಮೋಹಕ ಬಲೆಗಳನ್ನು ಪ್ರತಿ ಎಕರೆಗೆ 10-12ರಂತೆ ಹಾಕಿ ಚಿಟ್ಟೆಗಳನ್ನು ಆಕರ್ಷಿಸಿ ನಾಶಪಡಿಸಬೇಕು ಮತ್ತು ಪೀಡೆ ಸಮೀಕ್ಷೆ ಕೈಗೊಂಡು ಕೀಟದ ಉಪಸ್ಥಿ ಮತ್ತು ಹರಡುವಿಕೆ ಬಗ್ಗೆ ನಿಗಾ ವಹಿಸುವುದು.

ಕೀಟಬಾಧೆ ತಿವ್ರತೆ ಕಡಿಮೆ ಇದ್ದಾಗ ಅಥವಾ ಮರಿಹುಳುಗಳ ನಿರ್ವಹಣೆಗೆ ಜೈವಿಕ ಕೀಟನಾಶಕವಾದ ನೊಮೊರಿಯಾ ರಿಲೈಯೆ, ಶಿಲೀಂಧ್ರವನ್ನು 2 ಗ್ರಾಂ ಅಥವಾ
ಬ್ಯಾಸಿಲಸ್‌ ಥುರಿಂಜಿಯಸ್‌ 2 ಗ್ರಾಂ ಅಥವಾ ಶೇ 5 ರ ಬೇವಿನ ಬೀಜದ ಕಷಾಯ, ಅಜಾಡಿರೆಕ್ಟಿನ 1500 ಪಿಪಿಎಮ್‌ 5ಮಿ.ಲೀ ಪ್ರತಿ ಲೀಟರ ನೀರಿಗೆ ಮಿಶ್ರಣ ಮಾಡಿ ಸಿಂಪಡಿಸಬೇಕು. ಕೀಟದ ಬಾಧೆ ಶೇ 10 ಕಿಂತ ಹೆಚ್ಚಿಗೆ ಇರುವಾಗ 0.25 ಗ್ರಾಂ ಇಮಾಮೆಕ್ಟಿನ್‌ ಬೆಂಜೋಯೇಟ್‌ 5% ಎಸ್‌.ಜಿ. ಅಥವಾ ಕೋರ್‍ಯಾಂಟ್ರಿನಿಲಿಪೊಲ್‌ 18.5 ಎಸ್‌.ಸಿ 0.2 ಮಿ.ಲೀ ಆಥವಾ ಸ್ಪಿನೋಟೊರಮ 11.7 ಎಸ್‌.ಸಿ 0.5 ಮಿ.ಲೀ ಪ್ರತಿ ಲೀಟರ ನೀರಿಗೆ ಬೆರೆಸಿ ಸಿಂಪಡಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.