ಕರ್ನಾಟಕ ಸಹಿತ 8 ರಾಜ್ಯ ಸಂಕಷ್ಟ
Team Udayavani, Aug 4, 2021, 7:10 AM IST
ಹೊಸದಿಲ್ಲಿ: ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕರ್ನಾಟಕ ಸಹಿತ ದೇಶದ ಎಂಟು ರಾಜ್ಯಗಳಿಗೆ ಬಿಗಿ ನಿಯಮ ರೂಪಿಸಿಕೊಳ್ಳುವಂತೆ ಎಚ್ಚರಿಕೆ ನೀಡಿದೆ.
ಈ ಎಂಟು ರಾಜ್ಯಗಳಲ್ಲಿ “ಆರ್’ ಫ್ಯಾಕ್ಟರ್ ಹೆಚ್ಚಿದೆ ಎಂದು ಕೇಂದ್ರ ಹೇಳಿದೆ. ಸೋಂಕು ಒಬ್ಬರಿಂದ ಎಷ್ಟು ಮಂದಿಗೆ ಹರಡುತ್ತದೆ ಎಂಬುದನ್ನು “ಆರ್ ಫ್ಯಾಕ್ಟರ್’ ವಿವರಿಸುತ್ತದೆ. ಆರ್ ಫ್ಯಾಕ್ಟರ್ ಹೆಚ್ಚಿದೆ ಎಂದರೆ ಒಬ್ಬರಿಂದ ಹಲವು ಮಂದಿಗೆ ಸೋಂಕು ಪ್ರಸಾರವಾಗುತ್ತಿದೆ ಎಂದರ್ಥ. ಕರ್ನಾಟಕ, ಕೇರಳ, ತ.ನಾಡು, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಮಿಜೋರಾಂ ಮತ್ತು ಪುದುಚೇರಿಗಳಲ್ಲಿ ಆರ್ ಫ್ಯಾಕ್ಟರ್ 1:2 ಇದೆ. ಅಂದರೆ ಒಬ್ಬರಿಗೆ ಸೋಂಕು ತಗಲಿದರೆ ಅವರಿಂದ ಇಬ್ಬರಿಗೆ ಸೋಂಕು ಹರಡುತ್ತಿದೆ.
ಆರ್ ಫ್ಯಾಕ್ಟರ್ ಹೆಚ್ಚಿರುವಲ್ಲಿ ನಿಗಾ ವಹಿಸಬೇಕು. ಸೋಂಕು ಹರಡದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ಹಾಗೆಯೇ 12 ರಾಜ್ಯಗಳ 44 ಜಿಲ್ಲೆ ಗಳಲ್ಲಿ ಪಾಸಿಟಿವಿಟಿ ದರ ಶೇ. 10ಕ್ಕಿಂತ ಹೆಚ್ಚಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ದೇಶದ 18 ಜಿಲ್ಲೆಗಳಲ್ಲಿ ಕೊರೊನಾ ಏರಿಕೆಯ ಹಾದಿ ಕಾಣಿಸುತ್ತಿದೆ. ಇದರಲ್ಲಿ 10 ಜಿಲ್ಲೆಗಳು ಕೇರಳದಲ್ಲಿವೆ. ದೇಶದ ಶೇ. 50ರಷ್ಟು ಪ್ರಕರಣಗಳು ಕೇರಳದಿಂದಲೇ ವರದಿಯಾಗುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ