ಮನೆಯೊಳಗೆ ಅಕ್ರಮ ಪ್ರವೇಶಿಸಿ ಅಸಭ್ಯ ವರ್ತನೆ ತೋರಿದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು
Team Udayavani, Aug 4, 2021, 9:45 PM IST
ಅಂಕೋಲಾ : ಅಕ್ರಮವಾಗಿ ಮನೆಯೊಳಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯೊಬ್ಬನನ್ನು ನಾಗರಿಕರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬೊಳೆ ಜಮಗೋಡದ ಆಗೇರ ಕಾಲನಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದವನೆಂದು ಹೇಳಿಕೊಳ್ಳುವ ಯುವಕನೊಬ್ಬ ಪಟ್ಟಣದ ಬಡಾವಣೆಯೊಂದರ ಮನೆಯ ಹಿಂಬದಿಯಲ್ಲಿ ಒಣಗಿಸಲು ಹಾಕಿದ್ದ ಒಳ ಉಡುಪುಗಳನ್ನು ಕದ್ದಿದ್ದಾನೆ. ಇವನನ್ನು ಹಿಡಿಯಲು ಪ್ರಯತ್ನಿಸುತ್ತಿರುವಾಗಲೇ, ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.
ಅದಾದ ಬಳಿಕ ಈತ ಬೊಳೆ ಜಮಗೋಡದ ಆಗೇರ ಕಾಲನಿಯ ಮನೆಯೊಂದಕ್ಕೆ ಅಕ್ರಮವಾಗಿ ನುಗ್ಗಿದ್ದಾನೆ ಈ ವೇಳೆ ಈತನನ್ನು ಕಂಡ ಮನೆಯೊಳಗಿದ್ದ ಮಹಿಳೆಯರು ಬೊಬ್ಬೆ ಹಾಕಿದ್ದಾರೆ. ಮಹಿಳೆಯರ ಚೀರಾಟಕ್ಕೆ ಪಕ್ಕದಲ್ಲಿದ್ದ ಬಡಾವಣೆಯ ಜನರು ಸೇರಿ ಯುವಕನನ್ನು ಹಿಡಿದು ಧರ್ಮದೇಟು ನೀಡಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ :ಅಂಕೋಲಾ: ಹೆಚ್ಚಾದ ಚಿರತೆ ಹಾವಳಿ :ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸ್ಥಳಕ್ಕಾಗಮಿಸಿದ ಬೀಟ್ ಪೊಲೀಸ್ ಸಿಬ್ಬಂದಿ ಶಿವಾನಂದ ನಾಗರದಿನ್ನಿ ಅವರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆ ತಂದಿದ್ದಾರೆ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ