ಮುಂದಿನ ಬಾರಿ ರಾಷ್ಟ್ರವಾದಿ ಮುಖ್ಯಮಂತ್ರಿ; ಆಗ ಜಾತಿ ಲೆಕ್ಕಾಚಾರವಿಲ್ಲ: ಈಶ್ವರಪ್ಪ ಅಸಮಾಧಾನ


Team Udayavani, Aug 5, 2021, 9:26 AM IST

ಮುಂದಿನ ಬಾರಿ ರಾಷ್ಟ್ರವಾದಿ ಮುಖ್ಯಮಂತ್ರಿ; ಆಗ ಜಾತಿ ಲೆಕ್ಕಾಚಾರವಿಲ್ಲ: ಈಶ್ವರಪ್ಪ ಅಸಮಾಧಾನ

ಮೈಸೂರು: ಮುಂದಿನ ಬಾರಿ ರಾಷ್ಟ್ರವಾದಿ ಮುಖ್ಯಮಂತ್ರಿಯಾಗುತ್ತಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗಬೇಕೆಂದು ಬೆಂಬಲಿಗರು ಬಯಸಿದ್ದರು. ಆದರೆ ಸಚಿವನೂ ಆಗುವುದಿಲ್ಲಎಂಬಂತೆ ಬಿಂಬಿಸಲಾಗಿತ್ತು. ಹೈಕಮಾಂಡ್ ನನ್ನನ್ನು ಹೇಗೆ ಪರಿಗಣಿಸಿದೆ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ ಎಂದರು.

ಮುಂದೆ ಜಾತಿ ಲೆಕ್ಕಾಚಾರವಿಲ್ಲ: ಈವರೆಗೆ ಬಿಜೆಪಿಗೆ ಸಂಪೂರ್ಣ ಬಹುಮತ ಬಂದಿಲ್ಲ. ಹೊರಗಿನವರ ಸಹಕಾರ ಪಡೆದುಕೊಂಡು ಸರ್ಕಾರ ರಚನೆ ಮಾಡಿದ್ದೇವೆ. ಮುಂದಿನ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುತ್ತೆ. ಆಗ ಜಾತಿ ವಿಚಾರ ಬರುವುದಿಲ್ಲ. ರಾಷ್ಟ್ರವಾದಿಯನ್ನು ಬಿಜೆಪಿ ಮುಖ್ಯಮಂತ್ರಿ ಮಾಡುತ್ತದೆ ಎಂದು ಈಶ್ವರಪ್ಪ ಹೇಳಿದರು.

ಬೊಮ್ಮಾಯಿ ಬೆಟ್ಟ ಅಗೆದು ಇಲಿ ಹಿಡಿದಿದ್ದಾರೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಈಶ್ವರಪ್ಪ, ಸಿದ್ದರಾಮಯ್ಯ ಹಸಿವಿನಿಂದ ಒದ್ದಾಡುತ್ತಿರುವ ಇಲಿ. ಸಿದ್ದರಾಮಯ್ಯ ಹುಲಿಯಾಗುತ್ತಾರೆ ಅಂದುಕೊಂಡಿದ್ದೆವು. ಆದರೆ ಅವರು ಇಲಿಯಾಗಿ ವಿಲವಿಲ‌ ಒದ್ದಾಡುತ್ತಿದ್ದಾರೆ. ಅವರು ರಾಜ್ಯಕ್ಕೆ ಹುಲಿಯಾಗುವ ಬದಲು ಡಿ.ಕೆ.ಶಿವಕುಮಾರ್ ಮೇಲೆ ಹುಲಿಯಾಗಿದ್ದಾರೆ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ:ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್!

ಚಾಮುಂಡಿ ಬೆಟ್ಟದಲ್ಲಿ ನಿಂತು ಹೇಳುತ್ತಿದ್ದೇನೆ. ಪರಮೇಶ್ವರ್ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ. ತಮ್ಮ ಸಿಎಂ ಸ್ಥಾನಕ್ಕೆ ಅಡ್ಡಿಯಾಗುತ್ತಾರೆ ಎಂದು ಸೋಲಿಸಿದರು. ಸಿದ್ದರಾಮಯ್ಯ ಒಬ್ಬ ಕುರುಬರನ್ನು ಬೆಳೆಸಲಿಲ್ಲ. ನೆಪ ಮಾತ್ರಕ್ಕೆ ತಾತ್ಕಾಲಿಕವಾಗಿ ಕೆಲವು ಕುರುಬರನ್ನು ಸಚಿವರನ್ನಾಗಿ ಮಾಡಿದ್ದರು. ಪೂರ್ಣಾವಧಿಯಲ್ಲಿ ಯಾರಿಗೂ ಸಚಿವ ಸ್ಥಾನ ನೀಡಲಿಲ್ಲ ಎಂದು ಕಿಡಿಕಾರಿದರು.

ನಮ್ಮಲ್ಲಿ ಹಿಂದುಳಿದವರಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬರಲಿದೆ. ಪಕ್ಷ ನಿಷ್ಠ ಕಾರ್ಯಕರ್ತರೊಂದಿಗೆ ಅಧಿಕಾರಕ್ಕೆ ಬರಲಿದೆ. ಇದುವರೆಗೂ ಯಾವತ್ತು ಬಿಜೆಪಿ ಪೂರ್ಣಪ್ರಮಾಣದಲ್ಲಿ ಅಧಿಕಾರ ನಡೆಸಿಲ್ಲ. ಇದರಿಂದಾಗಿಯೇ ಸಣ್ಣ ಪುಟ್ಟ ಗೊಂದಲಗಳಿದ್ದವು. ಮುಂದೆ ಈ ರೀತಿ ಆಗುವುದಿಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.