ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಕಡೆಗಣನೆ

ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ. ಮುಂದೆ ಮಂತ್ರಿಯಾಗುವೆ ಎಂದು ಕಾರ್ಯಕರ್ತರಿಗೆ ಸಮಾಧಾನ ಪಡಿಸಿದ್ದಾರೆ

Team Udayavani, Aug 5, 2021, 6:18 PM IST

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಕಡೆಗಣನೆ

ಯಾದಗಿರಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಯಾದಗಿರಿಗೆ ಜಿಲ್ಲೆಗೆ ಸಚಿವ ಸ್ಥಾನ ಸಿಗದಿರುವುದು ಗಿರಿ ಜಿಲ್ಲೆ ಜನರಲ್ಲಿ ಬೇಸರ ಮೂಡಿಸಿದೆ. ಜಿಲ್ಲೆಯ ನಾಲ್ಕು ವಿಧಾನಸಭೆ ಕ್ಷೇತ್ರಗಳಲ್ಲಿ ಯಾದಗಿರಿ ಮತ್ತು ಸುರಪುರದಲ್ಲಿ ಕಮಲ ಅರಳಿದ್ದು, ಸುರಪುರ ಕ್ಷೇತ್ರದಿಂದ ಮುರು ಬಾರಿ ಆರಿಸಿ ಬಂದ ನರಸಿಂಹ ನಾಯಕ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ಇಲ್ಲವೇ ನರಸಿಂಹ ನಾಯಕ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ಪಕ್ಕಾ ಎನ್ನುವ ಮಾತುಗಳು ಕೇಳಿಬಂದಿತ್ತು. ಈ ಹಿಂದೆ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗಲೂ ಅವರ ಆಪ್ತರೇ ಆಗಿದ್ದ ಇಬ್ಬರಿಗೂ ಸಚಿವ ಸ್ಥಾನ ದಕ್ಕಿರಲಿಲ್ಲ. ಇದೀಗ ಬದಲಾದ ರಾಜಕೀಯ ಸನ್ನಿವೇಶದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನರಸಿಂಹ ನಾಯಕ ಮಂತ್ರಿಯಾಗುವುದು ಖಚಿತವಾಗಿತ್ತು.

ಆದರೆ ಅಂದುಕೊಂಡಂತೆ ನಡೆದಿದ್ದರೆ ಕ್ಷೇತ್ರದ ಜನ ಸಂಭ್ರಮದಲ್ಲಿರುತ್ತಿದ್ದರು. ಲೆಕ್ಕಾಚಾರ ಉಲ್ಟಾ ಆಗಿದ್ದರಿಂದ ಬೆಂಬಲಿಗರು, ಕಾರ್ಯಕರ್ತರು ಆಕ್ರೋಶಗೊಳ್ಳುವಂತೆ ಮಾಡಿದೆ. ಇಬ್ಬರು ಶಾಸಕರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ಬೆಂಬಲಿಗರು ಹೈಕಮಾಂಡ್‌ ಮೇಲೆ ಒತ್ತಡ ಹೇರುವ ಕಾರ್ಯವನ್ನು ನಿರಂತರ ಮಾಡಿದ್ದರೂ ಶ್ರಮ ಫಲಿಸದಿರುವುದು ಇಬ್ಬರು ನಾಯಕರ ಬೆಂಗಲಿಗರಲ್ಲಿ ನಿರಾಶೆ ಮೂಡಿಸಿದೆ.

ನರಸಿಂಹ ನಾಯಕರನ್ನು ಮಂತ್ರಿ ಮಾಡಿಯೇ ಕ್ಷೇತ್ರಕ್ಕೆ ಕರೆತರಲು ಬೆಂಗಳೂರಿಗೆ ತೆರಳಿದ್ದ ಬೆಂಬಲಿಗರು ಅಂತಿಮ ಹಂತದಲ್ಲಿ ನಾಯಕ ಹೆಸರು ಇಲ್ಲದಿರುವುದರಿಂದ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ ಪ್ರಸಂಗವೂ ನಡೆದಿದೆ. ಈ ವೇಳೆ ಶಾಸಕ ನಾಯಕ ಮಾತನಾಡಿ, ಮಂತ್ರಿ ಮಾಡದೇ ಇರುವುದಕ್ಕೆ ಒಂದೇ ಒಂದು ಕಾರಣ ಕೊಡಲಿ ಎಂದಿರುವ ಅವರು, ಪಕ್ಷ ತಾಯಿಯಿದ್ದಂತೆ. ಪಕ್ಷ ಸಂಘಟನೆಗಾಗಿ ದುಡಿಯುತ್ತೇನೆ. ಮುಂದೆ ಮಂತ್ರಿಯಾಗುವೆ ಎಂದು ಕಾರ್ಯಕರ್ತರಿಗೆ ಸಮಾಧಾನ ಪಡಿಸಿದ್ದಾರೆ

ರಾಜುಗೌಡರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಆಕ್ರೋಶ 
ನೂತನ ಸಚಿವ ಸಂಪುಟದಲ್ಲಿ ವಿಶೇಷವಾಗಿ ಪ್ರಭಾವಿ ನಾಯಕರಾಗಿದ್ದ ಸುರಪುರದ ಶಾಸಕ ರಾಜುಗೌಡರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಭರವಸೆಯಿತ್ತು. ಕೊನೆ ಘಳಿಗೆಯಲಿ ರಾಜುಗೌಡರಿಗೆ ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಅವರ ಅಭಿಮಾನಿ ಬಳಗದಲ್ಲಿ ಭಾರಿ ಬೇಸರ ಮೂಡಿಸಿದೆ. ಮೂರು ಬಾರಿ ಶಾಸಕರಾಗಿ ಜವಳಿ ಹಾಗೂ ಸಣ್ಣ ಕೈಗಾರಿಕೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಸಾವಿರಾರು ಕೋಟಿ ಅನುದಾನ ತಂದು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಿದ್ದರು. ಬಿಎಸ್‌ ವೈ ಸರಕಾರದಲ್ಲಿ ನಗರ ನೀರು ಸರಬರಾಜು ಮತ್ತು
ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ಸಾವಿರಾರು ಕೋಟಿ ಅನುದಾನ ತಂದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಿದ್ದರು. ಈ ಎಲ್ಲ ಕಾರಣಗಳಿಂದ ಸಚಿವ ಸ್ಥಾನ ಸಿಗುತ್ತದೆ ಎಂಬ ನೀರಿಕ್ಷೆಯಲ್ಲಿ ಅಭಿಮಾನಿಗಳಿದ್ದರು. ಆದರೆ ಅದು ಹುಸಿಯಾಗಿದೆ.

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.