ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ರಾಘವೇಂದ್ರ ಮನವಿ


Team Udayavani, Aug 5, 2021, 6:48 PM IST

5-16

ಶಿವಮೊಗ್ಗ: ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಸಂಸದ ಬಿ.ವೈ. ರಾಘವೇಂದ್ರ ಮಂಗಳವಾರ ಕೇಂದ್ರ ರೈಲ್ವೆ ಸಚಿವರಾದ ಅಶ್ವಿ‌ನಿ ವೈಷ್ಣವ್‌ ಅವರಿಗೆ ಮನವಿ ಸಲ್ಲಿಸಿದರು. 76 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ ಹತ್ತಿರದ ಕೋಟೆಗಂಗೂರಿನಲ್ಲಿ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಿಸಲು ಈಗಾಗಲೇ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ರಾಜ್ಯ ಸರ್ಕಾರ 43.14 ಎಕರೆ ಭೂಮಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಸಾರ್ವಜನಿಕರಿಂದ ಖರೀದಿಸಿ ನೀಡಲಾಗುತ್ತಿದ್ದು, ರೈಲ್ವೆ ಇಲಾಖೆಯು ಈಗಾಗಲೇ ಯೋಜನೆಯ ಪ್ರಾಥಮಿಕ ಹಂತದ ಕಾಮಗಾರಿಗಳ ಅನುಷ್ಠಾನಕ್ಕೆ ಏಜೆನ್ಸಿಯನ್ನು ನಿಗದಿಪಡಿಸಿದೆ.

ಆದಷ್ಟು ಬೇಗನೇ ರೈಲ್ವೆ ಇಲಾಖೆಯ ವತಿಯಿಂದ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಬೇಕಾಗಿರುವ ರೈಲ್ವೆ ಕೋಚಿಂಗ್‌ ಡಿಪೋ ನಿರ್ಮಾಣ ಕಾರ್ಯವನ್ನು ಆದಷ್ಟು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಶಿವಮೊಗ್ಗ-ಶಿಕಾ ರಿಪುರ-ರಾಣಿಬೆನ್ನೂರು ಹೊಸ ರೈಲ್ವೆ ಮಾರ್ಗಕ್ಕೆ ಶೇ.50ರಷ್ಟು ಅನುದಾನವನ್ನು ನೀಡುತ್ತಿದ್ದು, ಈಗಾಗಲೇ ಅಗತ್ಯವಿರುವ 427 ಎಕರೆ ಭೂ ಸ್ವಾ ಧೀನ ಪೈಕಿ ಈಗಾಗಲೇ 378 ಎಕರೆ ಭೂಮಿಯನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದ್ದು, ರೈಲ್ವೆ ಇಲಾಖೆಯಿಂದ ಆದಷ್ಟು ಬೇಗನೇ 2021-22ರ ಕೇಂದ್ರ ಆಯವ್ಯಯದಲ್ಲಿ ಘೋಷಿಸಿರುವಂತೆ 100 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್‌ ಆಹ್ವಾನಿಸುವಂತೆ ಮನವಿ ಮಾಡಿದರು.

ಜಗತ್ಪಸಿದ್ದ ಜೋಗ ಜಲಪಾತಕ್ಕೆ ಗೇಟ್‌ವೇ ಎನಿಸಿರುವ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಂಬಗಾರು ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಯಾಗಬೇಕಿದ್ದು, ಈ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿ, ಹೊಸ ರೈಲ್ವೆ ನಿಲ್ದಾಣ ಕಟ್ಟಡ ಹಾಗೂ 2ನೇ ಫ್ಲಾಟ್‌ ಫಾರಂ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಕೋರಿದರು. 2019ರಲ್ಲಿ ಶಿವಮೊಗ್ಗದಿಂದ ರೇಣಿಗುಂಟ ಮತ್ತು ಚೆನ್ನೆ çಗೆ ವಾರದಲ್ಲಿ ಎರಡು ದಿನಗಳ ಎರಡು ಹೊಸ ರೈಲುಗಳ ಓಡಾಟ ಪ್ರಾರಂಭಿಸಲಾಗಿತ್ತಾದರೂ, ಈ ರೈಲುಗಳ ಸಮಯವು ಸೂಕ್ತವಾಗಿರದ ಕಾರಣ, ಪ್ರಯಾಣಿಕರಿಗೆ ಅನುಕೂಲಕರ ವಾಗಿರುವುದಿಲ್ಲ.

ಆದ್ದರಿಂದ ಈ ಎರಡೂ ರೈಲುಗಳನ್ನು ಒಗ್ಗೂಡಿಸಿ ವಾರದಲ್ಲಿ ನಾಲ್ಕು ದಿನಗಳು ಶಿವಮೊಗ್ಗದಿಂದ ಚೆನ್ನೆ ಗೆ ರೇಣಿಗುಂಟ ಮಾರ್ಗವಾಗಿ ಚಲಿಸುವಂತೆ ಮಾಡಿದ್ದಲ್ಲಿ, ಪ್ರಯಾಣಿಕರಿಗೆ ಅನುಕೂಲವಾಗುತ್ತದೆ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು.

ಪ್ರಸಿದ್ಧ ಯಾತ್ರಾ ಸ್ಥಳವಾದ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಹೋಗುವವರಿಗೆ ಇಳಿಯಲು ಮುಕಾಂಬಿಕ ರೋಡ್‌ ಬೈಂದೂರು ರೈಲ್ವೆ ನಿಲ್ದಾಣವು ಹತ್ತಿರದ ಸ್ಟೇಷನ್‌ ಆಗಿದ್ದು, ಗರೀಬ್‌ ರಥ್‌ ಎಕ್ಸೆಸ್‌ ರೈಲಿಗೆ ಈ ನಿಲ್ದಾಣಕ್ಕೆ ನಿಲುಗಡೆಯನ್ನು ನೀಡಿದ್ದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಇಲ್ಲಿ ಇಳಿದು ಕೊಲ್ಲೂರಿಗೆ ತೆರಳಲು ಅತ್ಯಂತ ಉಪಯುಕ್ತ ಆಗುವುದನ್ನು ಸಭೆಯ ಗಮನಕ್ಕೆ ತರಲಾಯಿತು.

ಈ ಬಗ್ಗೆ ಆದಷ್ಟು ತ್ವರಿತವಾಗಿ ನಿಲುಗಡೆ ನೀಡುವ ವ್ಯವಸ್ಥೆಗೆ ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.