ಜೋಗದ ಸಿರಿ ಕಣ್ತುಂಬಿಕೊಂಡು ಸಂಭ್ರಮಿಸಿದ ನಟ ಜಗ್ಗೇಶ್
Team Udayavani, Aug 5, 2021, 9:40 PM IST
ಬೆಂಗಳೂರು : ನವರಸ ನಾಯಕ ಜಗ್ಗೇಶ್ ಅವರು ತಮ್ಮ ಸಿನಿಮಾಗಳ ಶೂಟಿಂಗ್ ಬ್ಯುಝಿ ಶೆಡ್ಯೂಲ್ಡ್ ನಡುವೆಯೂ ವಿಶ್ವ ಪ್ರಸಿದ್ಧ ಜೋಗ ಜಲಪಾತವನ್ನು ಕಣ್ತುಂಬಿಕೊಂಡು ಸಂಭ್ರಮಿಸಿದ್ದಾರೆ.
ಬುಧವಾರ ಜೋಗಕ್ಕೆ ತೆರಳಿದ್ದ ಜಗ್ಗಣ್ಣ, ಅಲ್ಲಿಯ ಜಲಧಾರೆಯನ್ನು ಕಣ್ತುಂಬಿಕೊಂಡಿದ್ದಾರೆ. ಜೋಗದ ಪ್ರಕೃತಿ ಸೌಂದರ್ಯಕ್ಕೆ ಮನಸೋತಿದ್ದಾರೆ. ಈ ಬಗ್ಗೆ ಅವರು ತಮ್ಮ ಟ್ವಿಟರಿನಲ್ಲಿ ಬರೆದುಕೊಂಡಿದ್ದಾರೆ.
“ ಪ್ರಕೃತಿಯಲ್ಲಿ ನನ್ನ ಪ್ರತಿರೂಪ ಪ್ರತಿಬಿಂಬವಿದೆ ಎಂದು ಶ್ರೀಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿರುವ ಮಾತನ್ನು ಉಲ್ಲೇಖಿಸಿರುವ ಅವರು, ಪ್ರಕೃತಿಯ ಕಂಡಾಗ ಮನ ಆನಂದ ಮೂಡುವ ಮತ್ತೊಂದು ಸ್ಥಿತಿಯೇ ಭಕ್ತಿ. ಇದೇ ಮಾತನ್ನು ಮನಶಾಸ್ತ್ರಜ್ಞ ಹೇಳುತ್ತಾರೆ. ಮನಸ್ಸಿಗೆ ಶಾಂತಿ ಸಿಗಲು ಪ್ರಕೃತಿಯಲ್ಲಿ ವರ್ಷಕ್ಕೆ ಕೆಲ ದಿನ ಮನ ಮಜ್ಜನ ಮಾಡಿ ಬನ್ನಿ ಮನಸ್ಸಿನ ಆರೋಗ್ಯಕ್ಕೆ ಇದು ಶ್ರೇಷ್ಟ ಚಿಕಿತ್ಸೆ ಎನ್ನುವುದು ಮನಶಾಸ್ತ್ರಜ್ಞರ ಸಲಹೆ ಆಗಿರುತ್ತದೆ ಎಂದು ಜಗ್ಗೇಶ್ ಅವರು ಹೇಳಿದ್ದಾರೆ.
ಇನ್ನು ಜಗ್ಗೇಶ್ ಅವರು ನಟಿಸಿರುವ ತೋತಾಪುರಿ ಚಿತ್ರದ ಶೂಟಿಂಗ್ ಮುಕ್ತಾಯವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಈ ವರ್ಷ ಈ ಸಿನಿಮಾ ತೆರೆ ಕಾಣುವ ಸಾಧ್ಯತೆ ಇದೆ. ಇದರ ಜೊತೆ ಮಠ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್ ಅವರ ಜೊತೆ ರಂಗನಾಯಕ ಸಿನಿಮಾದಲ್ಲೂ ಜಗ್ಗೇಶ್ ಅವರು ನಾಯಕ ನಟರಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಕೂಡ ಶುರುವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!