ಬಿಎಸ್ ಪಿ ನನಗೆ ತಾಯಿಯಂತೆ, ತಾಯಿಯಿಂದಲೇ ನನಗೆ ಮೋಸವಾಗಿದೆ: ಎನ್.ಮಹೇಶ್
Team Udayavani, Aug 6, 2021, 11:56 AM IST
ಮೈಸೂರು: ಬಿಎಸ್ಪಿ ನನ್ನ ತಾಯಿಯೆಂದು ಹೇಳಿದ್ದೆ. ಆದರೆ ತಾಯಿಯಿಂದಲೇ ನನಗೆ ಮೋಸವಾಗಿದೆ ಎಂದು ಗುರುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಯಿಯೇ ಮಗನಿಗೆ ಮೋಸ ಮಾಡಿದಾಗ ಮಗ ಏನು ಮಾಡಬೇಕು? ಮಗ ಅನಾಥನಾಗಿದ್ದ, ಹೀಗಾಗಿ ರಾಜಕೀಯವಾಗಿ ದಾರಿ ಕಂಡುಕೊಂಡಿದ್ದೇನೆ ಎಂದರು.
ನನ್ನನ್ನು ಟ್ರೋಲ್ ಮಾಡುತ್ತಿರುವವರು ಯಾರು ಎಂದು ನನಗೆ ಗೊತ್ತಿದೆ. ಬಿಎಸ್ಪಿ ಗೆಳೆಯರಿಗೆ ನಾನು ಹೇಳುವುದಿಷ್ಟೆ, ನನ್ನನ್ನು ಟ್ರೋಲ್ ಮಾಡಿಕೊಂಡು ಸಮಯ ವ್ಯರ್ಥ ಮಾಡಬೇಡಿ. ಆ ಸಮಯವನ್ನು ಬಿಎಸ್ಪಿ ಪಕ್ಷ ಕಟ್ಟಲು ಬಳಸಿ. ನನ್ನನ್ನು ಟ್ರೋಲ್ ಮಾಡುತ್ತಿರುವವರಿಗೆ ಮಲೆ ಮಹದೇಶ್ವರ ಸ್ವಾಮಿ ಒಳೆಯದು ಮಾಡಲಿ ಎಂದು ಹೇಳಿದರು.
ಇದನ್ನೂ ಓದಿ:ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್
ಅವತ್ತಿನ ರಾಜಕೀಯ ಸಂದರ್ಭಕ್ಕೆ ಹೇಳಿದ ಮಾತನ್ನು ಇವತ್ತಿನ ನೆಲೆಯಲ್ಲಿ ನಿಂತು ನೋಡಬಾರದು. ಹೋರಾಟಗಳ ವೇಳೆ ಹೇಳಿದ ಮಾತೇ ಬೇರೆ. ಆ ಮಾತುಗಳು ಅಧಿಕಾರದ ಸ್ಥಾನಕ್ಕೆ ಬಂದಾಗ ನಡೆಯಲ್ಲವೆಂದು ಅರ್ಥವಾಗಿದೆ ಎಂದು ಮಹೇಶ್ ಹೇಳಿದರು.
ಕಾಂಗ್ರೆಸ್ ನಲ್ಲಿ ಸ್ಥಾನಗಳು ಇಲ್ಲ. ನನಗೆ ಬಿಜೆಪಿ ಸೇರುವುದು ಬಿಟ್ಟು ಬೇರೆ ದಾರಿಯೇ ಇರಲಿಲ್ಲ. ಹೀಗಾಗಿ ಬಿಜೆಪಿ ಸೇರಿದ್ದೇನೆ. ಎಲ್ಲ ಸಮುದಾಯದವರೂ ವೋಟ್ ಹಾಕಿ ನನ್ನನ್ನು ಗೆಲ್ಲಿಸಿದ್ದಾರೆ. ನನ್ನ ಚಿಂತನೆ, ಆಲೋಚನೆ, ಬದ್ಧತೆಯನ್ನು ಎಲ್ಲಿಗೆ ಹೋದರೂ ನಾನು ಉಳಿಸಿಕೊಳ್ಳುತ್ತೇನೆ. ಆದ್ದರಿಂದ ಬಿಜೆಪಿಗೆ ಸೇರಿರುವುದರಿಂದ ಸಮಸ್ಯೆವಾಗದು ಎಂದು ಶಾಸಕ ಎನ್.ಮಹೇಶ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ