ಜಡ್ಜ್ ಗಳಿಗೆ ಬೆದರಿಕೆ : ಸುಪ್ರೀಂ ಕೋರ್ಟ್ ಕಳವಳ
ಸಿಬಿಐ, ಐಬಿಯಿಂದಲೂ ಯಾವುದೇ ಪ್ರಯೋಜನವಿಲ್ಲ ಎಂದ ಸಿಜೆಐ
Team Udayavani, Aug 6, 2021, 6:55 PM IST
ನವ ದೆಹಲಿ : ಜಡ್ಜ್ ಗಳಿಗೆ ಬೆದರಿಕೆ ಕರೆಗಳು ಹಾಗೂ ಅವಹೇಳನಕಾರಿ ಸಂದೇಶಗಳು ಕಳುಹಿಸುವಂಥ ಪ್ರಕರಣಗಳು ಹೆಚ್ಚುತ್ತಿವೆ. ನ್ಯಾಯಾಂಗಕ್ಕೆ ಈ ವಿಚಾರದಲ್ಲಿ ಗುಪ್ತಚರ ಸಂಸ್ಥೆ (ಐಬಿ)ಯಾಗಲೀ, ಸಿಬಿಐಯಾಗಲೀ ನೆರವಿಗೆ ಬರುತ್ತಿಲ್ಲ. ಈ ಕುರಿತು ದೂರು ಸಲ್ಲಿಸುವ ಸ್ವಾತಂತ್ರ್ಯವೂ ನ್ಯಾಯಾಂಗ ಅಧಿಕಾರಿಗಳಿಗೆ ಇಲ್ಲದಾಗಿದೆ ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಜಾರ್ಖಂಡ್ನ ಧನ್ ಬಾದ್ ನಲ್ಲಿ ಜಡ್ಜ್ ಉತ್ತಮ್ ಆನಂದ್ ಅವರನ್ನು ಆಟೋ ಡಿಕ್ಕಿ ಹೊಡೆಸಿ ಕೊಲೆ ಮಾಡಿದ ಪ್ರಕರಣದ ಬೆನ್ನಲ್ಲೇ ನ್ಯಾಯಾಲಯದಿಂದ ಈ ಅಭಿಪ್ರಾಯ ಹೊರಬಿದ್ದಿದೆ. ಜತೆಗೆ, ನ್ಯಾಯಾಂಗ ಅಧಿಕಾರಿಗಳಿಗೆ ಯಾವ ರೀತಿ ಭದ್ರತೆಯನ್ನು ಒದಗಿಸುತ್ತಿದ್ದೀರಿ ಎಂಬ ಬಗ್ಗೆ ವಿವರಣೆ ಇರುವ ಸ್ಥಿತಿಗತಿ ವರದಿ ಸಲ್ಲಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೂ ಕೋರ್ಟ್ ಸೂಚಿಸಿದೆ.
ಇದನ್ನೂ ಓದಿ :ಕ್ಯಾನ್ಸರ್ ಪೀಡಿತೆ ಅಕ್ಕನನ್ನು ಬದುಕಿಸಿಕೊಳ್ಳಲು ಬೀದಿಯಲ್ಲಿ ಕಾಳು ಮಾರುತ್ತಿರುವ ಪುಟ್ಟ ಬಾಲಕ
ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ಹೈಕೋರ್ಟ್ ಜಡ್ಜ್ ಗಳ ಮೇಲೆ ಕೇವಲ ದೈಹಿಕವಾಗಿ ಮಾತ್ರವಲ್ಲ, ವಾಟ್ಸ್ ಆ್ಯಪ್- ಫೇಸ್ ಬುಕ್ ಗಳಲ್ಲಿ ಅವಹೇಳನಕಾರಿ ಸಂದೇಶಗಳ ಮೂಲಕ ಮಾನಸಿಕವಾಗಿಯೂ ಬೆದರಿಕೆ ಹಾಕಲಾಗುತ್ತದೆ. ಒಂದೆರಡು ಪ್ರದೇಶಗಳಲ್ಲಿ ಈ ಬಗ್ಗೆ ಸಿಬಿಐ ತನಿಖೆಗೂ ಕೋರ್ಟ್ಗಳು ಆದೇಶಿಸಿವೆ. ಈ ಪೈಕಿ ಒಂದು ಕಡೆ ಸಿಬಿಐ ಏನನ್ನೂ ಮಾಡಿಲ್ಲ. ಸಿಬಿಐನ ವರ್ತನೆಯಲ್ಲಿ ಬದಲಾವಣೆಯನ್ನು ನಾವು ನಿರೀಕ್ಷಿಸಿದ್ದೆವು. ಆದರೆ, ಅವರ ವರ್ತನೆಯಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಪರಿಸ್ಥಿತಿಯೇ ಹಾಗಿದೆ ಎಂದು ಸಿಜೆಐ ಎನ್.ವಿ. ರಮಣ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ