ಶಾಸಕಿ ಪೂರ್ಣಿಮಾ ಅಭಿಮಾನಿಗಳಿಂದ ಪಾದಯಾತ್ರೆ

ಧರ್ಮಪುರದಿಂದ ಹಿರಿಯೂರಿಗೆ 30 ಕಿಮೀ ಪಾದಯಾತ್ರೆ ; ಶಾಸಕಿಗೆ ಸಚಿವ ಸ್ಥಾನ ನೀಡಲು ಒತ್ತಾಯ

Team Udayavani, Aug 7, 2021, 6:11 PM IST

Hiriyur

ಹಿರಿಯೂರು: ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ತಾಲೂಕಿನ ಅತಿದೊಡ್ಡ ಹೋಬಳಿ
ಧರ್ಮಪುರ ಗ್ರಾಮದಿಂದ ಪೂರ್ಣಿಮಾ ಶ್ರೀನಿವಾಸ್‌ ನೂರಾರು ಅಭಿಮಾನಿಗಳು ಹಿರಿಯೂರು ತಾಲೂಕು ಕಚೇರಿವರೆಗೆ 30 ಕಿ.ಮೀ ಪಾದಯಾತ್ರೆ ನಡೆಸಿದರು.

ದಾರಿಯುದ್ದಕ್ಕೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ಪೂರ್ಣಿಮಾ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು
ಆಗ್ರಹಿಸಿದರು. ಇನ್ನು ಕೆಲ ಅಭಿಮಾನಿಗಳು ಬೈಕ್‌ಗಳ ಮೂಲಕ ಭಾಗವಹಿಸಿದ್ದರು. ಸಂಜೆ ವೇಳೆಗೆ ಹಿರಿಯೂರು ನಗರಕ್ಕೆ ಪಾದಯಾತ್ರೆ ಆಗಮಿಸುತ್ತಿದಂತೆ ಸಾವಿರಾರು ಅಭಿಮಾನಿಗಳು ಪಾದಯಾತ್ರೆಯಲ್ಲಿ ಸೇರಿ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್‌ ಅವರಿಗೆ ಮನವಿ ನೀಡಿದರು.

ತಾಪಂ ಮಾಜಿ ಸದಸ್ಯ ಯಶವಂತ್‌ ರಾಜ್‌ ಮಾತನಾಡಿ, ಬಸವರಾಜ್‌ ಬೊಮ್ಮಾಯಿ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಿರುವುದು ನಿಜಕ್ಕೂ
ಖಂಡನೀಯ. ಸಾಮಾಜಿಕ ನ್ಯಾಯ ಹಾಗೂ ಮಹಿಳಾ ಕೋಟಾದಡಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರಿಗೆ ಸಚಿವ ಸ್ಥಾನ ನೀಡಬೇಕಾಗಿತ್ತು.
ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಶಿರಾ ಹಾಗೂ ಉತ್ತರ ಕರ್ನಾಟಕದಲ್ಲಿ ಪೂರ್ಣಿಮಾ ಅವರು ಪ್ರವಾಸ ಕೈಗೊಂಡು ಯಾದವ ಜನಾಂಗದ ಮತಗಳನ್ನು ಬಿಜೆಪಿಗೆ ಬರುವಂತೆ ಮಾಡಲು ಶ್ರಮಿಸಿದ್ದಾರೆ. 29 ಸೀಟುಗಳಲ್ಲಿ 15 ಸೀಟುಗಳನ್ನು ಕೇವಲ ಎರಡೇ ಜಾತಿಗೆ ಮೀಸಲಿಟ್ಟಿರುವುದು ಬಿಜೆಪಿ ಅಸಮಾನತೆ ಧೋರಣೆ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದರು.

ಇದನ್ನೂ ಓದಿ:ಮಸ್ಕಿ ಪೊಲೀಸರ ಕಾರ್ಯಾಚರಣೆ : ನಾಲ್ವರು ಕಳ್ಳರ ಸಹಿತ 4 ಲಕ್ಷ ಮೌಲ್ಯದ ಮೊಬೈಲ್, ಬೈಕ್ ಜಪ್ತಿ

ನಗರಸಭೆ ಮಾಜಿ ಅಧ್ಯಕ್ಷ ಚಂದ್ರಶೇಖರ್‌ ಮಾತನಾಡಿ, ರಾಜ್ಯದ ರಾಜಕಾರಣದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ಗೊಲ್ಲ ಸಮುದಾಯದ ನಿರ್ಣಾಯಕ ಅಭ್ಯರ್ಥಿಯಾಗಿದ್ದಾರೆ. ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಚಿವ ಸಂಪುಟದಲ್ಲಿ
ಸ್ಥಾನ ನೀಡದೆ, ಮಕ್ಕಳ ಮೊಟ್ಟೆ ಹಗರಣದಲ್ಲಿ ಭಾಗಿಯಾಗಿದ್ದ ಶಶಿಕಲಾ ಜೊಲ್ಲೆ ಅವರಿಗೆ ಸ್ಥಾನ ನೀಡಿರುವುದು ಬಿಜೆಪಿಯ ದೌರ್ಬಲ್ಯ ಎತ್ತಿ ತೋರಿಸುತ್ತಿದೆ. ಸಚಿವ ಸ್ಥಾನ ಸಿಗದಿರುವುದು ನಿಜಕ್ಕೂ ಅನ್ಯಾಯವಾಗಿದೆ.

ಸಂಪುಟದಲ್ಲಿ ಸ್ಥಾನ ನೀಡದಿದ್ದರೆ ಹಿರಿಯೂರು ಬಂದ್‌ ಮಾಡಿ, ನಂತರ ಹಿರಿಯೂರಿನಿಂದ ಬೆಂಗಳೂರು ತನಕ ಲಕ್ಷಾಂತರ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಶಕ್ತಿ ಪ್ರದರ್ಶನ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಧರ್ಮಪುರ ಗ್ರಾಮದ ಮುಖಂಡರಾದ ಶಿವಣ್ಣ, ಬಂಗಾರಪ್ಪ, ಅಭಿನಂದನ್‌, ಪುಟ್ಟರಾಜು, ರಂಗನಾಥ್‌, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ದ್ಯಾಮೇಗೌಡ, ಜಿಪಂ ಮಾಜಿ ಸದಸ್ಯ ಎಂ.ಮಂಜುನಾಥ್‌, ಡೀಶ್‌ ಮಂಜುನಾಥ್‌, ಎಚ್‌. ಆರ್‌. ತಿಮ್ಮಯ್ಯ, ಅಲ್ಪಸಂಖ್ಯಾತರ ಮುಖಂಡರಾದ ಅಸ್ಗರ ಅಹಮದ್‌, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್‌ ಯಾದವ್‌, ಸದಸ್ಯರಾದ ಸಣ್ಣಪ್ಪ,ಪಲ್ಲವ್‌, ಶರವಣನ್‌, ಕರಿಯಣ್ಣ ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.