ತಜ್ಞರ ಜತೆ ಚರ್ಚಿಸಿ ಶಾಲೆ ಆರಂಭಕ್ಕೆ ನಿರ್ಧಾರ ; ಶಿಕ್ಷಣ ಸಚಿವ ಬಿ.ಸಿ.ನಾಗೇಶ್
Team Udayavani, Aug 7, 2021, 6:37 PM IST
ಯಾದಗಿರಿ: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಜ್ಞರ ಜತೆ ಚರ್ಚಿಸಿ ಸಮಾಜ ಹಾಗೂ ಮಕ್ಕಳ ಹಿತದೃಷ್ಟಿಯಿಂದ ನಿರ್ಧಾರಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರಾದ ಬಳಿಕ ಮೊದಲ ಬಾರಿಗೆ ಯಾದಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ನಾಳೆಯೇ ಶಿಕ್ಷಣ ತಜ್ಞರ ಜತೆ ಸಭೆ ನಡೆಸುವುದಾಗಿ ಹೇಳಿದ ಅವರು, ಮುಖ್ಯಮಂತ್ರಿಗಳ ಸಲಹೆ ಪಡೆದು ನಿರ್ಣಯಕ್ಕೆ ಬರುವುದಾಗಿ ಹೇಳಿದರು.
ಟಾಸ್ಕ್ ಫೋರ್ಸ್ ಸಮಿತಿಯಿದ್ದು ಈಗಾಗಲೇ ಸಮಿತಿ ಶಾಲೆಗಳ ಆರಂಭ ಮಾಡಬೇಕು ಎಂದು ಹೇಳಿದ್ದು, ಪ್ರಾಥಮಿಕ ಶಾಲೆಯೂ ಆರಂಭಿಸಬೇಕು ಎಂದು ಅಭಿಪ್ರಾಯ ಮೂಡಿಬಂದಿದ್ದು ಸರ್ಕಾರ ಈ ವಿಚಾರವಾಗಿ ಗಮನಹರಿಸಿದ್ದು ತಜ್ಞರ ಜತೆ ಚರ್ಚಿಸಿ ಶಾಲೆ ಆರಂಭಿಸುವ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ :ವಿಜಯಪುರ : ತೋಟದ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ
ಪ್ರಪಂಚದಲ್ಲಿ ಎಲ್ಲೂ ಶಾಲೆ ತರಗತಿ ಸ್ಥಗಿತವಾಗಿರಲಿಲ್ಲ. ಕೋವಿಡ್ ಸಮಯದಲ್ಲಿ ಮಕ್ಕಳು ಶಾಲೆಯಿಂದ ದೂರ ಉಳಿಯುವಂತಾಯಿತು. ಆದರೇ, ಆನ್ಲೈನ್ ಶಿಕ್ಷಣ, ಶಿಕ್ಷಕರೆ ಮನೆ ಮನೆಗೆ ತೆರಳಿ ಪಾಠ ಮಾಡಿದರು.
ಮೊದಲು ಕೋವಿಡ್ ಎಂದರೆ, ಏನು ಅಂತ ಗೊತ್ತಿರಲಿಲ್ಲ. ಅದು ನಮ್ಮ ದೇಶಕ್ಕೆ ಹೊಸ ರೋಗ. ನಮ್ಮಲ್ಲಿ ಮೊದಲು ಪಿಪಿಇ ಕಿಟ್ ಇರಲಿಲ್ಲ, ಈಗಾಗಲೇ ನಾವು ಮೊದಲು ಹಾಗೂ ಎರಡನೇ ಅಲೆಯನ್ನು ಎದುರಿಸಿದ್ದು, ರಾಜ್ಯದಲ್ಲಿ ಮೂಲನೇ ಅಲೆ ಎದುರುಸಲು ಸರ್ಕಾರ ಸಕಲ ಸನ್ನದ್ದವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal R case: ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿಗೆ SIT ಮನವಿ: ಏನಿದು?
Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ
Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ
Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ
ಸಮರ್ಥ ರಾಷ್ಟ್ರ – ಸಮಗ್ರ ಅಭಿವೃದ್ಧಿಗಾಗಿ ಮತ್ತೂಮ್ಮೆ ಸಂಸತ್ಗೆ ಕಳುಹಿಸಿ: B.Y. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ