ಏಳು ತಿಂಗಳು ಕಳೆದರೂ ದುರಸ್ತಿಯಾಗದ ಕಾವೇರಿ ತಂತ್ರಾಂಶ


Team Udayavani, Aug 8, 2021, 3:30 AM IST

ಏಳು ತಿಂಗಳು ಕಳೆದರೂ ದುರಸ್ತಿಯಾಗದ ಕಾವೇರಿ ತಂತ್ರಾಂಶ

ಬೈಂದೂರು:  ಸರಕಾರ ಆಡಳಿತ ಸುಧಾರಣೆಯಾಗಬೇಕು, ತಾಂತ್ರಿಕವಾಗಿ ಮೇಲ್ದರ್ಜೆಗೇರಬೇಕು, ಜನರಿಗೆ ಉತ್ತಮ ಸೇವೆ ದೊರೆಯಬೇಕು ಎನ್ನುವ ಉದ್ದೇಶದಿಂದ ಹೊಸ ಹೊಸ ತಂತ್ರಾಂಶಗಳನ್ನು ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸುತ್ತಿದೆ. ಆದರೆ ಈ ತಂತ್ರಾಂಶಗಳ ಗೊಂದಲದ ಪರಿಣಾಮ ನೋಂದಣಿ ಇಲಾಖೆ ಯಲ್ಲಿ ಒಟ್ಟು 14,000 ಸ್ಥಿರಾಸ್ತಿ  ಕಡತಗಳು ಕಾವೇರಿ ತಂತ್ರಾಂಶದಿಂದ ಇ-ಸ್ವತ್ತು ನೋಂದಣಿ ಯಾಗದೆ ಬಾಕಿ ಉಳಿದಿವೆ.

ಅಧಿಕಾರಿಗಳಲ್ಲಿ  ಸಮನ್ವಯದ ಕೊರತೆ:

ಅಗತ್ಯ ಕೆಲಸಕ್ಕೆ ಭೂ ವಿಕ್ರಯ ಮಾಡಿದ ಗ್ರಾಮೀಣ ಭಾಗದ ಜನರು ಈ ಗೊಂದಲದಿಂದ  ಶುಲ್ಕ ನೀಡಿ ನೋಂದಣಿಯಾಗಿದ್ದರೂ  ಕಾವೇರಿ ತಂತ್ರಾಂಶವನ್ನು ಸರಿಪಡಿಸದ ಇಲಾಖೆಯ ಕಾರ್ಯವೈಖರಿಯಿಂದ ಬೇಸತ್ತು ಹೋಗುವಂತಾಗಿದೆ. ಮಾತ್ರವಲ್ಲದೆ ಅಧಿಕಾರಿಗಳ ನಡುವಿನ ಸಮನ್ವಯದ ಕೊರತೆ ಯಾದರೆ ಜನಪ್ರತಿನಿಧಿಗಳು ಮಾತ್ರ ಜಾಣ ಮೌನ ವಹಿಸುತ್ತಿದ್ದಾರೆ.

ಇಲ್ಲಿನ ಪ್ರಸ್ತುತ ಸಮಸ್ಯೆಗಳೇನು?:

ಭೂ ಪರಿವರ್ತನೆಯಾದ ಸ್ಥಿರಾಸ್ತಿಗಳನ್ನು ನೋಂದಣಿ  ಇಲಾಖೆಯಲ್ಲಿ ಪಂಚತಂತ್ರ ಮತ್ತು ಕಾವೇರಿ ತಂತ್ರಾಂಶದ ಸಂಯೋಜನೆಯಲ್ಲಿ ನೋಂದಾಯಿಸಲಾಗುತ್ತದೆ. ಬಳಿಕ ಆನ್‌ಲೈನ್‌ ತಂತ್ರಾಂಶದ ಮೂಲಕ ಗ್ರಾಮ ಪಂಚಾಯತ್‌ಗೆ ರವಾನೆಯಾಗುತ್ತದೆ. ಆದರೆ ಕಳೆದ ಆರೇಳು ತಿಂಗಳುಗಳಿಂದ ಕೃಷಿಯೇತರ ಸ್ಥಿರಾಸ್ತಿಗಳ ನೋಂದಣಿಯಾದ ದಸ್ತಾವೇಜುಗಳ ಮಾಹಿತಿಯು ಗ್ರಾಮ ಪಂಚಾಯತ್‌ಗೆ ವರ್ಗಾವಣೆಯಾಗಿರು ವುದಿಲ್ಲ. ಇದರಿಂದ ಸಾರ್ವಜನಿಕರಿಗೆ ಸಾಲ ಪಡೆ ಯಲು, ಕಟ್ಟಡ ನಿರ್ಮಿಸಲು ಅಥವಾ ಯಾವುದೇ ಅಭಿವೃದ್ಧಿಗೂ ಅವಕಾಶ ಇಲ್ಲದಂತಾಗಿದೆ. ಈ ಕುರಿತು ಇಲಾಖೆಯನ್ನು ವಿಚಾರಿಸಿದರೆ ತಂತ್ರಾಂಶ ದೋಷ ಎನ್ನುತ್ತಾರೆ. ಜತೆಗೆ ಗುರುತಿನ ಚೀಟಿ  ಪಡೆದು ನೋಂದಣಿ  ಬಳಿಕ ರವಾನೆ ಮಾಡುವ ಪ್ರಯತ್ನವು ಸಫಲವಾಗಿಲ್ಲ. ಇಂತಹ ಸಾವಿರಾರು ಕಡತಗಳು ನೋಂದಣಿ  ಸಮಸ್ಯೆಯಿಂದ ಬಾಕಿ ಉಳಿದಿವೆ.

ಇದರ ಜತೆ ಕಾಡುವ ಇನ್ನೊಂದು ಸಮಸ್ಯೆ ಎಂದರೆ ಗುರುತಿನ ಚೀಟಿ ಪಡೆಯಲು 18 ವರ್ಷ ಮೇಲ್ಪಟ್ಟಿರಬೇಕು. ಒಂದು ವೇಳೆ ಸ್ಥಿರಾಸ್ತಿಯಲ್ಲಿ ಹಕ್ಕು ಪಡೆಯುವ ವ್ಯಕ್ತಿ ಅಪ್ರಾಪ್ತನಾಗಿದ್ದರೆ 18 ವರ್ಷ ತುಂಬುವ ವರೆಗೆ ಕಾಯಬೇಕು ಎನ್ನುವ ಗೊಂದಲ ಇದೆ. ಸಂವಿಧಾನ ನೀಡಿದ ಆಸ್ತಿ ಹಕ್ಕು ಉಲ್ಲಂಘನೆಗೆ ದಾರಿ ಮಾಡಿ ಕೊಟ್ಟಂತಿದೆ. ಬೈಂದೂರಿನಲ್ಲಿ 150ಕ್ಕೂ ಅಧಿಕ ಇಂತಹ ಪ್ರಕರಣಗಳಿವೆ. ಹೀಗಾಗಿ ಜಿಲ್ಲಾಡಳಿತ ಸಮರ್ಪಕ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವತ್ರಿಕ ಅಭಿಪ್ರಾಯವಾಗಿದೆ.

ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಈ ಸಮಸ್ಯೆ ಕಳೆದ ಆರು ತಿಂಗಳುಗಳಿಂದ ಇದೆ. ತಂತ್ರಾಂಶ ಗೊಂದಲದ ಕಾರಣ ಬಾಕಿ ಉಳಿದಿದ್ದು ಈಗಾಗಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು ಶೀಘ್ರ ಸರಿಪಡಿಸಲಾಗುವುದು. -ಶ್ರೀಧರ್‌, ಜಿಲ್ಲಾ ನೋಂದಣಾಧಿಕಾರಿ 

 

– ಅರುಣ ಕುಮಾರ್‌ ಶಿರೂರು

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.