ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ: ಜೆಡಿಎಸ್ನಲ್ಲಿ ಭಿನ್ನಮತ ಸ್ಫೋಟ
Team Udayavani, Aug 8, 2021, 10:30 PM IST
ಮಂಡ್ಯ: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಹತ್ತಿರವಾಗುತ್ತಿದ್ದು, ಟಿಕೆಟ್ಗಾಗಿ ಜೆಡಿಎಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ವಿಧಾನ ಪರಿಷತ್ನ ಜೆಡಿಎಸ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ ಹಾಗೂ ಮರಿತಿಬ್ಬೇಗೌಡ ಇಬ್ಬರಿಗೂ ಪ್ರತಿಷ್ಠೆಯಾಗಿದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸುತ್ತಿದ್ದಾರೆ
ಮರಿತಿಬ್ಬೇಗೌಡ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಸದಸ್ಯ. ಕೆ.ಟಿ.ಶ್ರೀಕಂಠೇಗೌಡ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಸದಸ್ಯರಾಗಿದ್ದಾರೆ. ಕೆ.ಟಿ.ಶ್ರೀಕಂಠೇಗೌಡ ಅವರ ಅವ ಧಿ ಮುಗಿಯುತ್ತಿದ್ದು, ಮತ್ತೆ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿರುವುದರಿಂದ ಅವರ ಸ್ಥಾನಕ್ಕೆ ತಮ್ಮ ಬೆಂಬಲಿಗರಿಗೆ ಟಿಕೆಟ್ ಕೊಡಿಸಬೇಕೆಂಬ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಮುಂದಾಗಿದ್ದಾರೆ. ಶ್ರೀಕಂಠೇಗೌಡ ತಮ್ಮ ಬೆಂಬಲಿಗ ಮೈಸೂರು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಎಚ್.ಕೆ.ರಾಮು ಪರ ಬ್ಯಾಟಿಂಗ್ ಬೀಸುತ್ತಿದ್ದರೆ, ಇತ್ತ ಮರಿತಿಬ್ಬೇಗೌಡ ತಮ್ಮ ಬೆಂಬಲಿಗ ಕೀಲಾರ ಜಯರಾಮು ಪರವಾಗಿ ಅಖಾಡಕ್ಕಿಳಿದಿದ್ದಾರೆ.
ಇದನ್ನೂ ಓದಿ:ಆಗಸ್ಟ್ 11 ದರ್ಶನ್ ಅವರಿಗೆ ವಿಶೇಷವಾದ ದಿನ : ಸಂಭ್ರಮಕ್ಕೆ ಸಜ್ಜಾಗಿದೆ ‘ಡಿ ಬಾಸ್’ ಪಡೆ
ಶಿಕ್ಷಕರ ಕ್ಷೇತ್ರದ ಮೇಲೆ ಶ್ರೀಕಂಠೇಗೌಡ ಕಣ್ಣು?:
ಹಾಲಿ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಜೆಡಿಎಸ್ನೊಂದಿಗೆ ಮುನಿಸಿಕೊಂಡು ಕಾಂಗ್ರೆಸ್ ಸೇರುತ್ತಾರೆಂಬ ವದಂತಿ ಹಿನ್ನೆಲೆ ಜೆಡಿಎಸ್ನಿಂದ ಶಿಕ್ಷಕರ ಕ್ಷೇತ್ರಕ್ಕೆ ಅಭ್ಯರ್ಥಿಯಾಗಲು ಶ್ರೀಕಂಠೇಗೌಡ ಚಿಂತಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಮರಿತಿಬ್ಬೇಗೌಡರು ನಾನು ಜೆಡಿಎಸ್ನಲ್ಲೇ ಉಳಿಯುತ್ತೇನೆಂಬ ಮಾತುಗಳನ್ನಾಡುತ್ತಿದ್ದಾರೆ. ಹೀಗಾಗಿ ಜೆಡಿಎಸ್ ವರಿಷ್ಠರು ಇಬ್ಬರಲ್ಲಿ ಯಾರ ಬೆಂಬಲಿಗರಿಗೆ ಟಿಕೆಟ್ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ