ರಾಷ್ಟ್ರೀಯ ವಯೋಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ ನಿಧನ
Team Udayavani, Aug 9, 2021, 8:13 AM IST
ವಿಜಯಪುರ : ಶ್ರೇಷ್ಠ ಶಿಕ್ಷಕ ರಾಷ್ಟ್ರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ (96) ಸೋಮವಾರ ನಸುಕಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ನಗರದಲ್ಲಿ ಇರುವ ತಮ್ಮ ಮನೆಯಲ್ಲಿ ಬೆಳಗಿನ 3 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಡೀನರಾಗಿರುವ ಡಾ.ಮಹೇಶ ಚಿಂತಾಮಣಿ ಸೇರಿ ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು, ಸಾಹಿತ್ಯದ ಅಪಾರ ಬಳಗವನ್ನು ಅಗಲಿದ್ದಾರೆ.
ಹಲಸಂಗಿ ಗೆಳೆಯರ ಬಳಗದ ಸದಸ್ಯರಾಗಿದ್ದ ಈಶ್ವರಚಂದ್ರ ಚಿಂತಾಮಣಿ ಅವರು, ಜಾನಪದ ಸಂಶೋಧನೆ, ಸಂಗ್ರಹ, ವಿಶೇಷವಾಗಿ ಮಕ್ಕಳ ಸಾಹಿತ್ಯದ ವೈವಿಧ್ಯಮಯ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ.ರಾಜ್ಯದ ನವ ಸಾಕ್ಷರರಿಗಾಗಿ ಇವರು ರಚಿಸಿದ ಕಥೆಗಳು, ನಾಟಕಗಳು ಪಠ್ಯವಾಗಿದ್ದು, ರಾಜ್ಯದ ಬಹುತೇಕ ಎಲ್ಲ ಆಕಾಶವಾಣಿ ಕೇಂದ್ರಗಳಲ್ಲಿ ಪ್ರಸಾರವಾಗಿವೆ.
ಈಶ್ವರಚಂದ್ರರ ಶಿಕ್ಷಣ ಸೇವೆಗೆ ರಾಜ್ಯ, ರಾಷ್ಟ್ರೀಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ದಕ್ಕಿದ್ದರೆ, ಸಾಹಿತ್ಯ ಹಾಗೂ ಸಂಶೋಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಕಳೆದ 3 ವರ್ಷದ ಹಿಂದೆ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ರಾಷ್ಟ್ರೀಯ ವಯೋಶ್ರೇಷ್ಠ ಪ್ರಶಸ್ತಿಗೂ ಚಿಂತಾಮಣಿ ಅವರು ಭಾಜನರಾಗಿದ್ದರು.
ಮೃತ ಈಶ್ವರಚಂದ್ರ ಚಿಂತಾಮಣಿ ಅವರು ವೈದ್ಯಕೀಯ ಸಂಶೋಧನೆಗಾಗಿ ನಗರದ ಬಿಎಲ್ ಡಿಇ ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಸಂಶೋಧನಾ ಕಾಲೇಜಿಗೆ ತಮ್ಮ ದೇಹ ದಾನದ ವಾಗ್ದಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಇಚ್ಛಾನುಸಾರ ದೇಹವನ್ನು ಸೋಮವಾರ ಬೆ.11 ಕ್ಕೆ ವೈದ್ಯಕೀಯ ಕಾಲೇಜಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಮೃತರ ಪುತ್ರ ಸಾಹಿತಿ ಡಾ.ಮಹೇಶ ಚಿಂತಾಮಣಿ ತಿಳಿಸಿದ್ದಾರೆ.
ಗಣ್ಯರ ಸಂತಾಪ : ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ ಅವರ ನಿಧನಕ್ಕೆ ಮಾಜಿ ಸಚಿವರಾದ ಶಾಸಕ ಡಾ.ಎಂ.ಬಿ.ಪಾಟೀಲ, ಬಸವನ ಬಾಗೇವಾಡಿ ಶಾಸಕರಾದ ಮಾಜಿ ಸಚಿವ ಶಿವಾನಂದ ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಶರಣ ಸಾಹಿತ್ಯ ಪರಿಷತ್ತ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ, ಡಾ.ನಾರಾಯಣ ಪವಾರ ಸೇರಿದಂತೆ ಗಣ್ಯರು ಈಶ್ವರಚಂದ್ರ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ