ಬಹಿರ್ದೆಸೆ ಜಾಗದಲ್ಲೇ ಬಸವ ಭವನ!

ಸುಮಾರು 500ರಿಂದ 1000 ಜನ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸುವ ಬೃಹತ್‌ ವೇದಿಕೆ ನಿರ್ಮಾಣವಾಗಿದೆ.

Team Udayavani, Aug 9, 2021, 6:30 PM IST

Bhavana

ಬಸವನಬಾಗೇವಾಡಿ: ಸರ್ಕಾರ ಹಾಗೂ ಜನಪ್ರತಿನಿಧಿಗಳು ಇಚ್ಛಾಶಕ್ತಿ, ಮನಸ್ಸು ಮಾಡಿದರೆ ಏನೆಲ್ಲ ಸಾಧಿಸಬಹುದು ಎಂಬುದಕ್ಕೆ ಪಟ್ಟಣದಲ್ಲಿ ನಿರ್ಮಾಣವಾಗುತ್ತಿರುವ ಬಸವ ಭವನವೇ ಸಾಕ್ಷಿ. ಕಳೆದ ಹಲವು ವರ್ಷಗಳ ಹಿಂದೆ ಈ ಜಾಗೆ ಬಯಲು ಬಹಿರ್ದೆಸೆಗೆ ಉಪಯೋಗವಾಗುತ್ತಿತ್ತು. ಆದರೆ ಇಂದು ಈ ಜಾಗೆಯಲ್ಲಿ ಸುಮಾರು 12 ಕೋಟಿ ವೆಚ್ಚದಲ್ಲಿ ಬೃಹತ್‌ ಬಸವ ಭವನ ತೆಲೆ ಎತ್ತಿ ನಿಂತಿದೆ.

ಪಟ್ಟಣದ ವಿಜಯಪುರ ರಸ್ತೆಯ ಯಾತ್ರಿ ನಿವಾಸದ ಪಕ್ಕದಲ್ಲಿರುವ ಮನಗೂಳಿ- ಬಿಜ್ಜಳ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ 150ಗಿ150 ವಿಶಾಲವಾದ ಜಾಗೆಯಲ್ಲಿ 100ಗಿ100 ಅಳತೆಯಲ್ಲಿ ಮೂರು ಅಂತಸ್ತಿನ ಭವ್ಯವಾದ ಬಸವ ಭವನ ನಿರ್ಮಾಣ ಕಾರ್ಯ ಶೇ.99 ಪೂರ್ಣಗೊಂಡಿದ್ದು, ಇನ್ನೇನು ಕೆಲವೇ ತಿಂಗಳಲ್ಲಿ ಲೋಕಾರ್ಪಣೆಯಾಗಿದೆ.

ಶಾಸಕ ಶಿವಾನಂದ ಪಾಟೀಲ ತಾಲೂಕಿನ ಎಲ್ಲ ಸಮುದಾಯದ ಜನರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಈ ಭವನ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಅವರ ಪ್ರಯತ್ನದ ಫಲದಿಂದ ಮೂರು ಅಂತಸ್ತಿನ ಬೃಹತ್‌ ಬಸವ ಭವನದ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಜನರ ಬಹುದಿನಗಳ ಆಸೆಗೆ ರೆಕ್ಕೆ ಪುಕ್ಕ ಬಂದಿದೆ.

ವಿಶೇಷ ಸೌಲಭ್ಯಗಳೇನು?: ಮೂರು ಅಂತಸ್ತಿನ ಭವ್ಯವಾದ ಬಸವ ಭವನದ ಕೆಳ ಮಹಡಿಯಲ್ಲಿ ಅಡುಗೆ ತಯಾರಿಸುವ ಕೋಣೆ ಹಾಗೂ ಊಟದ ಕೋಣೆ, 2 ನೇ ಮಹಡಿಯಲ್ಲಿ ಸುಮಾರು 500ರಿಂದ 1000 ಜನ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸುವ ಬೃಹತ್‌ ವೇದಿಕೆ ನಿರ್ಮಾಣವಾಗಿದೆ.

ಮೊದಲನೇ ಮಹಡಿಯಲ್ಲಿ 2 ವಿಐಪಿ ಕೋಣೆಗಳು, 10 ಸಾಮಾನ್ಯ ಕೋಣೆಗಳಿದ್ದು, ಎಲ್ಲ ಕೊಣೆಗಳಲ್ಲಿ ಇಂಡಿಯನ್‌ ಸೇರಿದಂತೆ ವೆಸ್ಟರ್ನ್ ಶೌಚಾಲಯ, ಬಾತ್‌ ರೂಂ, ಫ್ಯಾನ್‌, ಎಸಿ, ಶುದ್ಧ ಕುಡಿವ ನೀರಿನ ವ್ಯವಸ್ಥೆ ಇದೆ. ಭವನದ ಮುಂದೆ ಚಿಕ್ಕದಾದ ಉದ್ಯಾನವನ ಹಾಗೂ ಪಕ್ಕದಲ್ಲಿರುವ 140ಗಿ130 ಜಾಗೆಯಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಹೀಗೆ ಹತ್ತಾರು ಸೌಲಭ್ಯ ಬಸವಭವನ ಹೊಂದಿದೆ.

ಎಲ್ಲ ಸಮುದಾಯದ ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಅತ್ಯಾಧುನಿಕ ಸೌಲಭ್ಯದೊಂದಿಗೆ ಸರ್ಕಾರದಿಂದ ಹೈಟೆಕ್‌ ಬಸವ ಭವನ ನಿರ್ಮಿಸಲಾಗಿದೆ. ಕೊರೊನಾದಿಂದ ಕಾಮಗಾರಿ ವಿಳಂಬವಾಗಿದ್ದು, ಶೇ.99 ಕಾರ್ಯ ಪೂರ್ಣವಾಗಿದೆ. ಕೆಲವೇ ತಿಂಗಳಗಳಲ್ಲಿ ಲೋಕಾರ್ಪಣೆಯಾಗಲಿದೆ.
ಶಿವಾನಂದ ಪಾಟೀಲ, ಶಾಸಕ

ಬಸವನಾಡಿನಲ್ಲಿ ಬಸವ ಭವನ ನಿರ್ಮಾಣವಾಗುತ್ತಿರುವುದು ಸಂತೋಷದ ವಿಷಯ. ಭವನದ ಬಗ್ಗೆ ಸಿದ್ದೇಶ್ವರ ಶ್ರೀಗಳೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭವನ ಸ್ವಚ್ಛ ಮತ್ತು ಸುಂದರವಾಗಿ ಇಟ್ಟುಕೊಳ್ಳಬೇಕು. ಆಗ ಶಾಸಕ ಶಿವಾನಂದ ಪಾಟೀಲರ ಕಾರ್ಯ ಅರ್ಥಪೂರ್ಣವಾಗುತ್ತದೆ.
ಸಿದ್ದಲಿಂಗ ಶ್ರೀ, ವಿರಕ್ತಮಠ

ಶಾಸಕ ಶಿವಾನಂದ ಪಾಟೀಲರ ಪ್ರತಿಯೊಂದು ಯೋಜನೆಗಳು ಮುಂದಿನ ಯುವ ಪೀಳಿಗೆಗೆ ಉಪಯುಕ್ತವಾಗಲಿವೆ. ಅವರ ಕೈಗೊಂಡ ಕಾರ್ಯಗಳು ಜನ ಮೆಚ್ಚುಗೆ ಗಳಿಸಿವೆ.
ರವಿಗೌಡ ಚಿಕ್ಕೊಂಡ,ಯುವ
ಮುಖಂಡ

2015ರಲ್ಲಿ ಪಟ್ಟಣದಲ್ಲಿ ಸಿದ್ದೇಶ್ವರ ಶ್ರೀಗಳ ಪ್ರವಚನ ನಡೆಸಲಾಗಿತ್ತು. ಈ ಸ್ಥಳ ನೋಡಿ ಶ್ರೀಗಳು ಇಲ್ಲಿ ಸಾರ್ವಜನಿಕರಿಗೆ ಉಪಯೋಗವಾಗುವ ಕಟ್ಟಡ ನಿರ್ಮಾಣವಾಗಲಿ ಎಂಬ ಆಸೆ ವ್ಯಕ್ತಪಡಿಸಿದ್ದರು. ಅದರಂತೆ ಶಾಸಕ ಪಾಟೀಲರು ಭವನ ನಿರ್ಮಾಣ ಮಾಡಿರುವುದು ಶ್ಲಾಘನೀಯ.
ವಿನೂತ ಕಲ್ಲೂರ, ಯುವ ಮುಖಂಡ

ಪ್ರಕಾಶ ಬೆಣ್ಣೂರ

ಟಾಪ್ ನ್ಯೂಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.