ಪರಿಸರ ಸಮೃದ್ಧಿಗೆ ವಿನಯ್‌ ರಾಮಕೃಷ್ಣ ಸಂಕಲ್ಪ

ಮುಂದಿನ ತಲೆಮಾರಿಗಾಗಿ ಪರಿಸರ ಪೋಷಣೆ ಈಗಾಗಲೇ ಸಾವಿರಾರು ಗಿಡ ನೆಟ್ಟು ಪೋಷಣೆ; ಪ್ರಾಣಿ, ಪಕ್ಷಿಗಳಿಗೆ ಆಸರೆ

Team Udayavani, Aug 11, 2021, 5:25 PM IST

ಪರಿಸರ ಸಮೃದ್ಧಿಗೆ ವಿನಯ್‌ ರಾಮಕೃಷ್ಣ ಸಂಕಲ್ಪ

ಭಾರತೀನಗರ: ತಮ್ಮ ತಮ್ಮಕುಟುಂಬ ಚೆನ್ನಾಗಿದ್ದರಾಯಿತು, ಬೇರೆಯವರ ಉಸಾಬರೀ ನಮಗೇಕೆ ಎನ್ನುವ ಸ್ವಾರ್ಥ ಮನೋಭಾವವೇ ತುಂಬಿರುವ ಇಂದಿನ ಸಮಾಜದಲ್ಲಿ ನಮ್ಮ ನೆರೆ-ಹೊರೆಯವರು, ನಮ್ಮ ಊರಿನವರು ಮಾತ್ರವಲ್ಲ ನಾಡಿನ ಸಮಸ್ತರು ಬದುಕಿ ಬಾಳಬೇಕಾದರೆ ಪರಿಸರ ಅಗತ್ಯ ಎಂದು ಗಿಡಮರ ಬೆಳೆಸುತ್ತಾ ಎಲೆಮರೆಕಾಯಿಯಂತೆ ಇರುವ ವ್ಯಕ್ತಿಯೊಬ್ಬರು ಇಂದು ಪರಿಸರಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.

ಪರಿಸರ ಪ್ರೇಮಿ: ಆರ್‌.ಕೆ.ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾಗಿರುವ ವಿನಯ್‌ ರಾಮಕೃಷ್ಣ ಅವರು ವಿದ್ಯಾರ್ಥಿಗಳಿಗೆ ವಿದ್ಯೆ ಕಲಿಸುತ್ತಲೇ ಪರಿಸರ ಕುರಿತು ಜಾಗೃತಿ ಮೂಡಿಸಿಕೊಂಡು ಬಂದ ಇವರು ಅಪರೂಪದ ವ್ಯಕ್ತಿ. ಇಂದು ಪರಿಸರ ಪ್ರೇಮಿಯಾಗಿ ನಮ್ಮೊಡನಿದ್ದಾರೆ.

ಪ್ರಾಣಿ, ಪಕ್ಷಿಗಳಿಗೆ ಆಸರೆ: ಮೂಲತಃ ಮದ್ದೂರು ತಾಲೂಕಿನ ಎಸ್‌.ಐ.ಹೊನ್ನಲಗೆರೆ ಗ್ರಾಮದ ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ರಾಮಕೃಷ್ಣ ಮತ್ತು ಚಂದ್ರಕಲಾ ಅವರ ಸುಪುತ್ರರಾಗಿ ಜನಿಸಿದ ವಿನಯ್‌ ರಾಮಕೃಷ್ಣ, ಇಂದು ಮದ್ದೂರು ತಾಲೂಕಿನಾದ್ಯಂತ ತಮ್ಮ ಸೇವೆ ಮಾಡುತ್ತಾ ಜೊತೆಗೆ ಪರಿಸರ ವೇದಿಕೆಯಿಂದ ಸಾವಿರಾರು ಗಿಡಗಳನ್ನು ನೆಟ್ಟಿದ್ದು, ಅವುಗಳು ಈಗ ತಂಪನ್ನೀಯುತ್ತಿವೆ. ಮಾತ್ರವಲ್ಲ ಪ್ರಾಣಿ, ಪಕ್ಷಿಗಳಿಗೆ ಪ್ರತ್ಯಕ್ಷ-ಪರೋಕ್ಷವಾಗಿ ಆಸರೆಯಾಗಿದೆ.

ಹಸಿರಿನಿಂದ ಕಂಗೊಳಿಸುವಿಕೆ: ವಿನಯ್‌ ರಾಮಕೃಷ್ಣರವರ ಕಾಳಜಿಯ ಕ್ಷೇತ್ರ ಪರಿಸರ. ಸುಮಾರು 50 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಿರುವ ಸಂಸ್ಥೆಯ ಆರಣದಲ್ಲಿ ಮೊನ್ನೆಯಷ್ಟೇ 500 ಸಸಿಗಳನ್ನು ವಿದ್ಯಾರ್ಥಿಗಳು, ಪೋಷಕರು ಹಾಗೂ ಸಂಸ್ಥೆಯ ಸಿಬ್ಬಂದ್ದಿಗಳೊಂದಿಗೆ ನೆಟ್ಟಿದ್ದಾರೆ. ಗಿಡ ನೆಡುವ ಮೂಲಕ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಗುತ್ತಿದ್ದು, ಸಂಸ್ಥೆಯನ್ನು ಹಸಿರಿನಿಂದಕಂಗೊಳಿಸಿವಂತೆ ಮಾಡಲಾಗಿದೆ.

ರಾಜಕೀಯ ಸೇವೆಗೂ ಸೈ: ವಿನಯ್‌ ರಾಮಕೃಷ್ಣ ಅವರು ತಮ್ಮ ತಂದೆ ಬಿ. ರಾಮಕೃಷ್ಣರವರ ಹಾದಿಯಲ್ಲೇ ಜನರ ಸೇವೆಗೆ ಮುಂದಾಗಿದ್ದಾರೆ.
ರಾಜಕೀಯಕ್ಕೆ ಪ್ರವೇಶ ನೀಡಿಜನರ ಸೇವೆಮಾಡುವುದಕ್ಕೂ ಸೈ ಎಂದಿದ್ದಾರೆ.

ಇದನ್ನೂ ಓದಿ:ರಾಜ್ಯಗಳಿಗೆ ಒಬಿಸಿ ಪಟ್ಟಿ ಅಧಿಕಾರ ಮರುಸ್ಥಾಪನೆ : ಸಚಿವ ಶ್ರೀರಾಮುಲು ಧನ್ಯವಾದ

ಗ್ರಾಮೀಣ ಪ್ರತಿಭೆಗಳ ಆಶಾಕಿರಣ ಆರ್‌ಕೆ ವಿದ್ಯಾಸಂಸ್ಥೆ
ಮಂಡ್ಯ ಜಿಲ್ಲೆಯು, ಶೈಕ್ಷಣಿಕ ಪ್ರಗತಿಯಿಂದ ದೂರ ಎಂಬ ಹಣೆಪಟ್ಟಿಯನ್ನು ಕಳಚಿಕೊಂಡು ಹೊರಬರುತ್ತಿದೆ.ಇದಕ್ಕೆಇಲ್ಲಿನ ಶಿಕ್ಷಣ ಸಂಸ್ಥೆಗಳು ಕಾರಣ, ಜಿಲ್ಲೆಯಲ್ಲಿರುವ ಕೆಲವೇ ಪರಿಣಾಮಕಾರಿ ವಿದ್ಯಾಸಂಸ್ಥೆಗಳಲ್ಲಿ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆಯಲ್ಲಿರುವ ಆರ್‌ಕೆ ವಿದ್ಯಾ ಸಂಸ್ಥೆಯೂ ಒಂದು. ಆರ್‌ಕೆ ಶಿಕ್ಷಣ ಸಂಸ್ಥೆಯು ಕಳೆದ ಎರಡು ದಶಕಗಳಿಂದ ಈ ಭಾಗದ ನೂರಾರು ಗ್ರಾಮಗಳ ವಿದ್ಯಾರ್ಥಿಗಳ ಭವಿಷ್ಯದ ಆಶಾದೀಪವಾಗಿ ಕಾರ್ಯ ನಿರ್ವಹಿಸುತ್ತಿರುವುದು ತಾಲೂಕಿಗೆ ಹೆಮ್ಮೆಯ ವಿಚಾರ.

ಸಾವಯವ ಕೃಷಿಗೆ ಉತ್ತೇಜನ
ವಿನಯ್‌ ರಾಮಕೃಷ್ಣ ಅವರು, ಜನರ ಆರೋಗ್ಯವೇ ಮುಖ್ಯ ಎಂಬುದನ್ನು ಮನಗಂಡು ಪರಿಸರದಜೊತೆಗೆ ಸಾವಯವ ಕೃಷಿಗೆ ಉತ್ತೇಜನ ನೀಡಲು ಮಂಡ್ಯ ಆರ್ಗ್ಯಾನಿಕ್ ಸಂಸ್ಥೆಯ ಪಾಲುದಾರರಾಗಿದ್ದಾರೆ. ಅಲ್ಲದೆ, ಸಾವಯವ ಕೃಷಿ ಜಾಗೃತಿ ಕಾರ್ಯಕ್ರಮದ ರೂವಾರಿಯಾಗಿದ್ದಾರೆ.
ಗ್ರಾಮೀಣ ರೈತರಿಗೆ ಸಾವಯವ ಕೃಷಿ ಬಗ್ಗೆ ತರಬೇತಿ ಆಯೋಜಿಸಿ ಕೃಷಿಕರನ್ನು ಉತ್ತೇಜಿಸುವ ಕೆಲಸ ಮಾಡುತ್ತಿದ್ದಾರೆ. ಹೀಗೆ, ಮದ್ದೂರು ತಾಲೂಕಿನಲ್ಲಿ ಶಿಕ್ಷಣದ ಜೊತೆಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ಆರೋಗ್ಯಕರ ಬೆಳವಣಿಗೆಗೆ ಇವರು ಶ್ರಮಿಸುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ.

ಸಾವಿರಾರು ಗಿಡ ನೆಟ್ಟು ಪೋಷಣೆ
ಬಾಲ್ಯದಿಂದಲೇ ಗಿಡಮರಗಳ ಕುರಿತು ಆಪ್ತಸಂಬಂಧ ಹೊಂದಿದ್ದ ವಿನಯ್‌ ರಾಮಕೃಷ್ಣ ಬೆಳೆಯುತ್ತ ಪರಿಸರ ಪ್ರೇಮಿಯಾಗಿ, ಈಗ ಮಂಡ್ಯ ಆರ್ಗ್ಯಾನಿಕ್ ಸಂಸ್ಥೆಯ ಪಾಲುದಾರರಾಗಿದ್ದಾರೆ. ಜೊತೆಗೆ ಆರ್‌.ಕೆ.ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುಂದಿನ ತಲೆಮಾರು ಕಾಲಕಾಲಕ್ಕೆ ಮಳೆ, ಬೆಳೆಯನ್ನು ಕಾಣುವಂತಾಗ ಬೇಕೆಂದು ಪರಿಸರ ಪ್ರಜ್ಞೆ ಮೂಡಿಸಲು ಶ್ರಮಿಸುತ್ತಿದ್ದಾರೆ. ಆರ್‌. ಕೆ.ವಿದ್ಯಾಸಂಸ್ಥೆಯು 50 ಎಕರೆ ವಿಸ್ತೀರ್ಣದಲ್ಲಿದ್ದು, ಅಲ್ಲಿ ಸಾವಿರಾರು ಗಿಡಗಳನ್ನು ನೆಟ್ಟು ಪರಿಸರವನ್ನು ಬೆಳೆಸುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಗಳು, ಸಹೋದ್ಯೋಗಿಗಳು, ಸ್ನೇಹಿತರ ನೆರವನ್ನು ಪಡೆದುಕೊಂಡು ಗಿಡಮರಗಳನ್ನು ಜೋಪಾನ ಮಾಡಿದ ಪರಿಣಾಮ
ಇಂದು ಆ ಗಿಡಗಳು ಮರಗಳಾಗಿ ನೆರಳು ನೀಡುತ್ತಿವೆ. ಇವರ ಪರಿಶ್ರಮವನ್ನು ಕಂಡ ಅರಣ್ಯ ಇಲಾಖೆಯು ವಿನಯ್‌ ರಾಮಕೃಷ್ಣ
ಅವರಿಗೆ ಬೆನ್ನುತಟ್ಟಿದ್ದಾರೆ.

-ಅಣ್ಣೂರು ಸತೀಶ್‌

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.