ರಾಜೀನಾಮೆ ವೈಯಕ್ತಿಕ ವಿಚಾರ; ಬೆಂಬಲಿಸುವ ಚರ್ಚೆ ಇಲ್ಲ: ಎಂಟಿಬಿ
Team Udayavani, Aug 11, 2021, 10:15 PM IST
ಬೆಂಗಳೂರು: “ನನಗೆ ನೀಡಿರುವ ಪೌರಾಡಳಿತ ಖಾತೆಯಲ್ಲೇ ಕೆಲಸ ನಿರ್ವಹಿಸುತ್ತೇನೆ ಹಾಗೂ 2023ರವರೆಗೂ ಬಿಜೆಪಿಯಲ್ಲೇ ಇರುತ್ತೇನೆ’ ಎಂದು ಸಚಿವ ಎಂಟಿಬಿ ನಾಗರಾಜ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡುತ್ತಿರುವುದು ಅವರ ವೈಯಕ್ತಿಕ ವಿಚಾರ. ನಾವು ಅವರಿಗೆ ಬೆಂಬಲ ನೀಡುವ ಬಗ್ಗೆ ಯಾವುದೇ ರೀತಿ ಚರ್ಚೆ ಮಾಡಿಲ್ಲ. ನಾನು ಮಾತ್ರ ನನಗೆ ವಹಿಸಿರುವ ಖಾತೆಯಲ್ಲೇ ಕಾಯ ನಿರ್ವಹಿಸುತ್ತೇನೆ ಹಾಗೂ 2023ರವರೆಗೂ ಬಿಜೆಪಿಯಲ್ಲೇ ಇರುತ್ತೇನೆ. ಅಷ್ಟೇ ಅಲ್ಲ, ಮುಂದೆಯೂ ಇಲ್ಲಿಯೇ ಟಿಕೆಟ್ ಸಿಗಲಿದೆ’ ಎಂದು ಸ್ಪಷ್ಟಪಡಿಸಿದರು.
“ಹಿಂದೆ ಎಂದೂ ದೆಹಲಿಗೂ ಹೋಗಿಲ್ಲ, ಮುಂದೆಯೂ ಹೋಗುವುದೂ ಇಲ್ಲ. ನಾನು ಅಧಿಕಾರ, ಹಣದ ಆಮಿಷಕ್ಕೆ ಬರಲಿಲ್ಲ. ನನ್ನ ಬಳಿ ಎಲ್ಲವೂ ಇದೆ. ನಾನು ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿಗೆ ಬಂದವನು. ಪಕ್ಷವು ವಿಧಾನ ಪರಿಷತ್ತಿನ ಸದಸ್ಯನನ್ನಾಗಿ ಮಾಡಿ ಸಚಿವ ಸ್ಥಾನವನ್ನೂ ಪಕ್ಷ ನೀಡಿದೆ. ನನ್ನನ್ನು ಕರೆತಂದ ಸಚಿವ ಆರ್. ಅಶೋಕ್ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ರಾಜಕೀಯ ಹರಿಯುವ ನೀರು ಇದ್ದಂತೆ. ಜನರ ಸೇವೆ ಮಾಡಬೇಕು ಹಾಗೂ ಪಕ್ಷಕ್ಕೆ ಒಳ್ಳೆಯದು ಮಾಡಬೇಕು ಎಂಬ ಉದ್ದೇಶದಿಂದ ಬಂದಿದ್ದೇನೆ’ ಎಂದರು.
ಇದನ್ನೂ ಓದಿ:ರಾಜ್ಯದಲ್ಲಿಂದು ಕೋವಿಡ್ ಏರಿಕೆ: 1826 ಪ್ರಕರಣ ಪತ್ತೆ; 33 ಸಾವು
ಮುಖ್ಯಮಂತ್ರಿಗಳು ಯಾವ ನಿರ್ಧಾರ ಬೇಕಾದರೂ ತೆಗೆದುಕೊಳ್ಳಲಿ. ಅದಕ್ಕೆ ನಾನಂತೂ ಬದ್ಧನಾಗಿದ್ದೇನೆ. ರಾಜೀನಾಮೆ ನೀಡುವುದು ಅವರವರ ವೈಯಕ್ತಿಕ ವಿಚಾರ ಎಂದು ಪುನರುತ್ಛರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ