ವಲಸಿಗರ ಗುಂಪು ಛಿದ್ರ: ಬಿಜೆಪಿಗೆ ಅನುಕೂಲ?


Team Udayavani, Aug 12, 2021, 7:00 AM IST

ವಲಸಿಗರ ಗುಂಪು ಛಿದ್ರ: ಬಿಜೆಪಿಗೆ ಅನುಕೂಲ?

ಬೆಂಗಳೂರು: ಹಿಂದಿನ ಮೈತ್ರಿ ಸರಕಾರವನ್ನು ಪತನಗೊಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣ ರಾಗಿದ್ದ ವಲಸಿಗರ ಬಳಗ ಈಗ ಛಿದ್ರವಾಗಿದ್ದು,  ಅಂತರ ಕಾಯ್ದುಕೊಳ್ಳುವ ಲೆಕ್ಕಾಚಾರ ಆರಂಭವಾಗಿದೆ. ಇದು ಬಿಜೆಪಿಗೆ ವರವಾದಂತಿದೆ.

ಜೆಡಿಎಸ್‌ ಮತ್ತು ಕಾಂಗ್ರೆಸ್‌ನ 15 ಶಾಸಕರು ಹಾಗೂ ಇಬ್ಬರು ಪಕ್ಷೇ ತರ ಶಾಸಕರು ಮೈತ್ರಿ ಸರಕಾರದ ಪತನ ಮತ್ತು ಅನಂತರ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗ ಒಟ್ಟಾ ಗಿಯೇ ಇದ್ದರು.  ತಂಡದಲ್ಲಿ ಯಾರಿಗೆ  ಅನ್ಯಾಯವಾದರೂ  ಒಟ್ಟಾಗಿ ಚರ್ಚಿಸುತ್ತಿದ್ದರು. ಈಗ ತಮ್ಮನ್ನು ಬಿಜೆಪಿಗೆ ಕರೆತಂದ ಯಡಿಯೂರಪ್ಪ ಅಧಿಕಾರದಲ್ಲಿಲ್ಲದ ಕಾರಣ ಮತ್ತು ಮಿತ್ರ ಮಂಡಳಿ ಸದಸ್ಯರ ನಡುವಿನ ವೈಯಕ್ತಿಕ ಪ್ರತಿಷ್ಠೆಯಿಂದಾಗಿ ಎಲ್ಲರೂ ತಮ್ಮ ರಾಜಕೀಯ ಭವಿಷ್ಯವನ್ನು

ಗಮನದಲ್ಲಿ ಇರಿಸಿಕೊಂಡು ಲೆಕ್ಕಾ ಚಾರದ ರಾಜಕಾರಣ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಜಾರಕಿಹೊಳಿಯಿಂದ ಅಂತರ :

ಮೈತ್ರಿ ಸರಕಾರದ ವಿರುದ್ಧ ಬಂಡಾಯ ಸಾರಿದ ಸಂದರ್ಭದಲ್ಲಿ ವಲಸಿಗರ ತಂಡದ ನಾಯಕತ್ವ ವಹಿಸಿದ್ದ ರಮೇಶ್‌ ಜಾರಕಿಹೊಳಿ ಸಿ.ಡಿ. ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕ ವಲಸಿಗರ ತಂಡ ವಿಭಜನೆಯತ್ತ ಸಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕೆಲವರು ಬಿಜೆಪಿಯಲ್ಲೇ ಗಟ್ಟಿ :

ವಲಸಿಗರಲ್ಲಿ ಎಸ್‌.ಟಿ. ಸೋಮ ಶೇಖರ್‌, ಬಿ.ಸಿ. ಪಾಟೀಲ್‌, ಡಾ| ಸುಧಾಕರ್‌, ಬೈರತಿ ಬಸವರಾಜ್‌, ಡಾ| ನಾರಾಯಣ ಗೌಡ, ಮುನಿರತ್ನ ಬಿಜೆಪಿಯಲ್ಲೇ ಗಟ್ಟಿ ನೆಲೆ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಆನಂದ್‌ ಸಿಂಗ್‌ರಿಂದಲೂ ದೂರ :

ಮುಂಬಯಿ ಮಿತ್ರ ಮಂಡಳಿ ಸದಸ್ಯರು ಈಗ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರದಲ್ಲಿ ಆನಂದ್‌ ಸಿಂಗ್‌ಗೆ ಆಗಿದೆ ಎನ್ನಲಾದ  ಅನ್ಯಾಯದ ವಿಚಾರದಲ್ಲಿಯೂ ಇದೇ ಕಾರಣಕ್ಕೆ ಅಂತರ ಕಾಯ್ದು ಕೊಂಡಿದ್ದಾರೆ ಎನ್ನಲಾಗಿದೆ. ಇದೆಲ್ಲವೂ ಮಿತ್ರ ಮಂಡಳಿ ಹಿಂದಿನ ಒಗ್ಗಟ್ಟಿನಲ್ಲಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ.

ಭವಿಷ್ಯ ಅಗೋಚರ, ಕೆಲವರಿಗೆ ಆತಂಕ :

ಸಚಿವ ಸ್ಥಾನ ಸಿಗದೆ ಬೇಸರಗೊಂಡಿರುವ ಮಹೇಶ್‌ ಕುಮಟಳ್ಳಿ, ಶ್ರೀಮಂತ ಪಾಟೀಲ್‌, ಆರ್‌. ಶಂಕರ್‌,  ರಮೇಶ್‌ ಜಾರಕಿಹೊಳಿ, ಚುನಾವಣೆಯಲ್ಲಿ ಸೋಲುಂಡಿರುವ ಎಂ.ಟಿ.ಬಿ. ನಾಗರಾಜ್‌, ಎಚ್‌. ವಿಶ್ವನಾಥ್‌ ಅವರಿಗೆ ಬಿಜೆಪಿಯಲ್ಲಿ ಭವಿಷ್ಯದ ಆತಂಕ ಆರಂಭವಾಗಿದೆ.

ನನ್ನ ಬಗ್ಗೆ ಎಲ್ಲರೂ ಅನುಕಂಪ ತೋರಿಸು ತ್ತಾರೆ. ಆದರೆ, ಆನಂದ್‌ ಸಿಂಗ್‌ಗೆ ಸೂಕ್ತ ಖಾತೆ ನೀಡಬೇಕಿತ್ತು. ವಲಸಿಗರಲ್ಲಿ ಒಗ್ಗಟ್ಟು ಇಲ್ಲದಿರುವುದಕ್ಕೆ ಹೀಗಾಗುತ್ತಿದೆ.ಪ್ರತಾಪ್‌ ಗೌಡ ಪಾಟೀಲ್‌, ವಲಸಿಗ ಮಾಜಿ ಶಾಸಕ

ನಾನು ಬಿಜೆಪಿ ಸೇರ್ಪಡೆಯಾಗಿದ್ದೇನೆ. ನನ್ನನ್ನು ಎಂಎಲ್‌ಸಿ ಮಾಡಿ ಸಚಿವನನ್ನಾಗಿ ಮಾಡಿದ್ದಾರೆ. ಅಶೋಕ್‌ ನನ್ನ ಬೆಂಬಲಕ್ಕೆ ನಿಂತಿದ್ದಾರೆ. ನಾನು ಬಿಜೆಪಿಯಲ್ಲಿಯೇ ಇರುತ್ತೇನೆ.ಎಂ.ಟಿ.ಬಿ. ನಾಗರಾಜ್‌,  ಪೌರಾಡಳಿತ ಸಚಿವ

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.