ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಅಖಾಡ ಸಜ್ಜು

ಅಂತಿಮ ಮುದ್ರೆಯೊಂದೇ ಬಾಕಿ? | ಗಣೇಶ ಚತುರ್ಥಿ ಮುನ್ನವೇ ಹೆಚ್ಚಲಿದೆ ಚುನಾವಣೆ ಕಾವು

Team Udayavani, Aug 12, 2021, 1:03 PM IST

dfsset

ವರದಿ: ಅಮರೇಗೌಡ ಗೋನವಾರ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮುಹೂರ್ತ ನಿಗದಿಯಾಗಿದ್ದು, ಅಂತಿಮ ಮುದ್ರೆ ಬೀಳುವುದು ಬಾಕಿ ಇದೆ.

ಗಣೇಶ ಚತುರ್ಥಿ ಮುನ್ನವೇ ಚುನಾವಣೆ ಬಿಸಿ ಹೆಚ್ಚಲಿದೆ. ಪಕ್ಷಗಳಿಗೆ ಉಸಿರಾಡುವುದಕ್ಕೂ ಪುರುಸೊತ್ತು ಇಲ್ಲದ ರೀತಿಯಲ್ಲಿ ಚುನಾವಣೆ ಪ್ರಕ್ರಿಯೆ, ಮತದಾನ ದಿನಾಂಕ ನಿಗದಿಯಾಗಿದೆ. ಅಧಿಸೂಚನೆ ಹೊರಬಿದ್ದ 18 ದಿನದೊಳಗೆ ನಾಮಪತ್ರ ಸಲ್ಲಿಕೆ, ಹಿಂಪಡೆಯುವಿಕೆ, ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ವಾರ್ಡ್‌ ಪುನರ್‌ ವಿಂಗಡಣೆ ಗೊಂದಲ-ಆಕ್ಷೇಪ, ಕೋವಿಡ್‌ ಇನ್ನಿತರೆ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಪಾಲಿಕೆಗೆ ಚುನಾಯಿತ ಮಂಡಳಿ ಇಲ್ಲವಾಗಿದೆ. ಚುನಾವಣೆ ನಡೆಸಲು ರಾಜ್ಯ ಚುನಾವಣೆ ಆಯೋಗ ದಿನಾಂಕ ನಿಗದಿ ಮಾಡಿದೆಯಾದರೂ ಆ.13ರ ನಂತರ ಚುನಾವಣೆಯ ಮುಂದಿನ ಹೆಜ್ಜೆ ಏನೆಂಬುದು ಸ್ಪಷ್ಟವಾಗಲಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ 67 ವಾರ್ಡ್‌ಗಳಿದ್ದವು ವಾರ್ಡ್‌ ಪುನರ್‌ ವಿಂಗಡಣೆ ಮಾಡಲಾಗಿದ್ದು, ಇದೀಗ 82 ವಾರ್ಡ್ ಗಳಾಗಿವೆ. ವಾರ್ಡ್‌ ಪುನರ್‌ ವಿಂಗಡಣೆಗೆ ಒಂದಿಷ್ಟು ಆಕ್ಷೇಪಗಳು ವ್ಯಕ್ತವಾಗಿದ್ದರಿಂದ ಚುನಾವಣೆ ಪ್ರಕ್ರಿಯೆ ಮುಂದುವರಿಯುತ್ತಲೇ ಸಾಗಿತ್ತು. ಇದೀಗ ರಾಜ್ಯ ಚುನಾವಣೆ ಆಯೋಗ ಚುನಾವಣೆ ದಿನಾಂಕ ನಿಗದಿ ಮಾಡಿದ್ದರಿಂದ ಪಾಲಿಕೆ ರಾಜಕೀಯ ಚಟುವಟಿಕೆ ಸಕ್ರಿಯತೆ ಪಡೆದಿದೆ. ಪಾಲಿಕೆ ಚುನಾವಣೆ ನಿಟ್ಟಿನಲ್ಲಿ ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ತಮ್ಮದೇ ತಯಾರಿ ಕೈಗೊಂಡಿವೆಯಾದರೂ ಚುನಾವಣೆ ಆಯೋಗದ ನಿರ್ಧಾರ ಒಂದು ರೀತಿಯಲ್ಲಿ ನಿರೀಕ್ಷೆಗಿಂತ ಮುಂಚಿತವಾಗಿಯೇ ಚುನಾವಣೆ ಎದುರಾಗಿರುವುದು, ಹೆಚ್ಚಿನ ಸಮಯ ಇಲ್ಲದಿರುವುದು, ರಾಜಕೀಯ ಪಕ್ಷಗಳಲ್ಲಿ ತಳಮಳ ಸೃಷ್ಟಿಸುವಂತೆ ಮಾಡಿದೆ.

18 ದಿನಗಳಲ್ಲಿಯೇ ಮತದಾನ ಪ್ರಕ್ರಿಯೆ: ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೂ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ವಿವಿಧ ಕಾರಣಕ್ಕೆ ಸಾಧ್ಯವಾಗಿರಲಿಲ್ಲ. ಉದ್ದೇಶಪೂರ್ವಕವಾಗಿಯೇ ಚುನಾವಣೆ ಮುಂದೂಡುವ ಯತ್ನಕ್ಕೆ ಸರಕಾರ ಮುಂದಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದೀಗ ಬಹುತೇಕ ಗೊಂದಲಗಳು ಮುಗಿದು 3 ಮಹಾನಗರ ಪಾಲಿಕೆಗಳಿಗೆ ಚುನಾವಣೆ ಘೋಷಣೆ ಮಾಡಲಾಗಿದ್ದು, ಅಧಿಸೂಚನೆ ಹೊರಡಿಸಿದ ದಿನದಿಂದಲೇ ಕೇವಲ 18 ದಿನಗಳಲ್ಲಿಯೇ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವಂತೆ ಆಯೋಗ ವೇಳಾ ಪಟ್ಟಿ ಪ್ರಕಟಿಸಿದ್ದು, ಕೆಲ ರಾಜಕೀಯ ಪಕ್ಷಗಳು ಗೊಂದಲಕ್ಕೆ ಸಿಲುಕುವಂತಾಗಿದೆ. ಆ.16ರಂದು ಪಾಲಿಕೆ ಚುನಾವಣೆ ಹೊರ ಬಿದ್ದರೆ, ನಾಮಪತ್ರ ಸಲ್ಲಿಸಲು ಎಂಟು ದಿನಗಳನ್ನು ನೀಡಲಾಗಿದ್ದು, ಇದರಲ್ಲಿ ಆ.20ರಂದು ಸಾರ್ವತ್ರಿಕ ರಚನೆ ಬಂದಿದೆ. ಆ.24ರಂದು ನಾಮಪತ್ರಗಳ ಪರಿಶೀಲನೆ ನಡೆದರೆ, ಆ.26ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ನಾಮಪತ್ರಗಳು ಹಿಂಪಡೆದ ನಂತರದಲ್ಲಿಯೇ ಸ್ಪರ್ಧಾ ಕಣದ ಅಂತಿಮ ಹಾಗೂ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಅಲ್ಲಿಗೆ ನಾಮಪತ್ರ ಹಿಂತೆಗೆಕೊಂಡ ನಂತರ ಮತದಾನಕ್ಕೆ ಉಳಿದಿರುವುದು ಕೇವಲ 8 ದಿನ ಮಾತ್ರವಾಗಿದ್ದು, ಸೆಪ್ಟೆಂಬರ್‌ 3ರಂದು ಮತದಾನ ನಡೆಯಲಿದೆ. ಟಿಕೆಟ್‌ ಗಿಟ್ಟಿಸಿಕೊಳ್ಳುವುದು ಒಂದು ಸಾಹಸವಾದರೆ, ಬಂಡಾಯ ಇಲ್ಲವೆ ಗೆಲುವಿಗೆ ಅಡ್ಡಿಯಾಗಬಹುದಾದ ಸ್ಪರ್ಧಾಳುಗಳನ್ನು ಕಣದಿಂದ ಹಿಂದಕ್ಕೆ ಸರಿಸುವುದು ಮತ್ತೂಂದು ರೀತಿ ಕಸರತ್ತು. ನಾಮಪತ್ರ ಹಿಂಪಡೆದ ನಂತರದಲ್ಲಿ ಕೇವಲ ಎಂಟು ದಿನಗಳಲ್ಲಿಯೇ ನಡೆಯುವ ಮತದಾನಕ್ಕೆ ಗೆಲುವು ಖಚಿತ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಪ್ರಚಾರ, ಮನವೊಲಿಕೆ ಇನ್ನಿತರೆ ತಂತ್ರಗಾರಿಕೆ ಕೈಗೊಳ್ಳಬೇಕಿದೆ.

 

ರಾಜಕೀಯ ಪಕ್ಷಗಳಿಗೆ ಸಂದಿಗ್ಧ ಸ್ಥಿತಿ: ಪಾಲಿಕೆ ಚುನಾವಣೆ ಘೋಷಣೆ ಕೆಲವೊಂದು ರಾಜಕೀಯ ಪಕ್ಷಗಳಿಗೆ ಒಂದಿಷ್ಟು ಸಂದಿಗ್ಧ ಸ್ಥಿತಿ ನಿರ್ಮಾಣ ಮಾಡಿದೆ ಎಂದೇ ಹೇಳಬಹುದು. ಅಭ್ಯರ್ಥಿಗಳ ಆಯ್ಕೆ, ಬಂಡಾಯ ಶಮನ, ಇನ್ನೊಂದು ಪಕ್ಷಕ್ಕೆ ಹಾರುವವರನ್ನು ತಡೆಯುವುದು ಇನ್ನಿತರೆ ಕಾರ್ಯಗಳಿಗೆ ರಾಜಕೀಯ ಪಕ್ಷಗಳಿಗೆ ಅವಕಾಶ ನೀಡದ ರೀತಿಯಲ್ಲಿ ಚುನಾವಣೆ ಆಯೋಗ ದಿನಾಂಕ ನಿಗದಿ ಮಾಡಿದೆ. ಪಾಲಿಕೆಯ ಎಲ್ಲ 82 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಗುರುತಿಸುವ ಕಾರ್ಯ ಮಾಡಬೇಕಿದೆ. ಈಗಾಗಲೇ ಪಾಲಿಕೆ ಸದಸ್ಯರಾಗಿದ್ದವರಿಗೆ ಕೆಲ ವಾರ್ಡ್‌ಗಳು ಮೀಸಲಾತಿ ಕಾರಣದಿಂದ ಕೈ ತಪ್ಪಿವೆ. ಅಲ್ಲಿ ಹೊಸಬರಲ್ಲಿ ಯಾರನ್ನು ಕಣಕ್ಕಿಳಿಸಬೇಕೆಂಬುದು ಒಂದು ಕಡೆಯಾದರೆ, ವಾರ್ಡ್‌ ಕಳೆದುಕೊಂಡ ಕೆಲವರಿಗೆ ಎಲ್ಲಿ ಅವಕಾಶ ಮಾಡಿ ಕೊಡಬೇಕೆಂಬ ಸವಾಲು ಮತ್ತೂಂದು ಕಡೆಯದ್ದಾಗಿದೆ. ಪಾಲಿಕೆ ಚುನಾವಣೆ ತಯಾರಿ ವಿಚಾರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ ಜೆಡಿಎಸ್‌ ಹಾಗೂ ಆಮ್‌ಆದ್ಮಿ ಪಕ್ಷ ಪಕ್ಷಗಳು ತಮ್ಮದೇ ತಯಾರಿಯಲ್ಲಿ ತೊಡಗಿವೆ.

ಪಾಲಿಕೆ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ, ಮತದಾರರ ಸಂಪರ್ಕ ವಿಚಾರದಲ್ಲಿ ಬಿಜೆಪಿ ಈಗಾಗಲೇ ಹಲವು ತಯಾರಿ ಕೈಗೊಂಡಿದೆ ಎನ್ನಬಹುದು. ಪಾಲಿಕೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ಬೂತ್‌ ಕಮಿಟಿ, ಪ್ರೇಜ್‌ ಪ್ರಮುಖರು, ಪಂಚರತ್ನ ಸಮಿತಿ, ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರದ ಸದಸ್ಯರನ್ನು ನೇಮಕ ಮಾಡಿದೆ. 3-5 ವಾರ್ಡ್‌ಗೆ ಒಂದು ಮಹಾಶಕ್ತಿ ಕೇಂದ್ರ ಇದ್ದು, 4-6 ವಾರ್ಡ್‌ಗೆ ಒಂದು ಶಕ್ತಿ ಕೇಂದ್ರ ಇರುತ್ತದೆ. ಪ್ರತಿ ಬೂತ್‌ಗೆ 12 ಜನರು ಸದಸ್ಯರಿದ್ದು, ಪಂಚರತ್ನ ಸಮಿತಿಯಲ್ಲಿ 5 ಜನ ಇರುತ್ತಾರೆ. ಅದೇ ರೀತಿ 30-60 ಜನರ ಮತದಾರರಿಗೆ ಒಬ್ಬರು ಪೇಜ್‌ ಪ್ರಮುಖರನ್ನು ನೇಮಿಸಲಾಗಿದೆ.

ಬೂತ್‌ ಕಮಿಟಿ ಹಾಗೂ ಪಂಚರತ್ನ ಸಮಿತಿ ಪೇಜ್‌ ಪ್ರಮುಖರಿಗೆ ಕಾರ್ಯಗಳನ್ನು ಸೂಚಿಸುವುದು, ಪರಿಶೀಲನೆ ಕಾರ್ಯ ಮಾಡಲಿದೆ. ಬಿಜೆಪಿಯಲ್ಲಿಯೂ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಿದ್ದು, ಒಂದೊಂದು ವಾರ್ಡ್‌ಗೆ 4-8 ಜನರು ಪೈಪೋಟಿ ಹೆಚ್ಚಿದೆ. ಕಾಂಗ್ರೆಸ್‌ ಪಕ್ಷ ಪಾಲಿಕೆ ಚುನಾವಣೆಗೆ ಸಿದ್ಧವಿರುವುದಾಗಿ ಹೇಳಿಕೊಂಡಿದ್ದು, ಈಗಾಗಲೇ ಹಲವು ಸಭೆಗಳನ್ನು ಕೈಗೊಂಡಿದೆ. ಆದರೆ ವಾರ್ಡ್‌ ಮೀಸಲು ವಿಚಾರದಲ್ಲಿ ಚುನಾವಣೆ ವಿಳಂಬವಾಗಬಹುದೆಂಬ ಚಿಂತನೆ ಅನೇಕ ಕಾಂಗ್ರೆಸ್ಸಿಗರದ್ದಾಗಿತ್ತು. ಕಾಂಗ್ರೆಸ್‌ ಪಕ್ಷ ಈಗಾಗಲೇ 4-5 ಸಭೆಗಳನ್ನು ನಡೆಸಿದೆ. ಕಾಂಗ್ರೆಸ್‌ನಲ್ಲೂ ಟಿಕೆಟ್‌ ಪೈಪೋಟಿ ಹೆಚ್ಚಿದೆ. ಒಂದು ವಾರ್ಡ್‌ಗೆ 4-8 ಜನರು ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

ಜೆಡಿಎಸ್‌ ಪಕ್ಷ ಪಾಲಿಕೆ ನಿಟ್ಟಿನಲ್ಲಿ ಇತ್ತೀಚೆಗೆ ಸಭೆ ನಡೆಸಿದ್ದು, ಎಲ್ಲ 82 ವಾರ್ಡ್‌ಗಳಿಗೆ ಸ್ಪರ್ಧಿಸುವುದಾಗಿ ಹೇಳಿದೆ. ಜೆಡಿಎಸ್‌ನಲ್ಲಿ ಟಿಕೆಟು ಪೈಪೋಟಿಗಿಂತ ಸ್ಪರ್ಧಿಸುವವರನ್ನು ಪಕ್ಷ ಎದುರು ನೋಡುವ ಸ್ಥಿತಿ ಇದೆ ಎಂದು ಹೇಳಲಾಗುತ್ತಿದೆ. ಆಮ್‌ ಆದ್ಮಿ ಪಕ್ಷ ಈಗಾಗಲೇ ಚುನಾವಣೆ ತಯಾರಿ ಶುರುವಿಟ್ಟುಕೊಂಡಿದೆ. ವಾರ್ಡ್‌ವಾರು ಕಚೇರಿ ಉದ್ಘಾಟನೆ, ಅಭ್ಯರ್ಥಿಗಳನ್ನು ಗುರುತಿಸುವಿಕೆ, ಸಮಸ್ಯೆಗಳ ಆಲಿಸುವಿಕೆ, ಆಕಾಂಕ್ಷಿಗಳೊಂದಿಗೆ ಸಂವಾದ ಇನ್ನಿತರೆ ಕಾರ್ಯ ಕೈಗೊಂಡಿದೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.