ಮುಂದುವರಿದ ಮೀಸಲಾತಿ ಹಗ್ಗಜಗ್ಗಾಟ

ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿ: ಚುನಾವಣಾ ಆಯೋಗಕ್ಕೆ ಸರ್ಕಾರದ "ನಾಳೆ ಬಾ' ಉತ್ತರ

Team Udayavani, Aug 12, 2021, 2:41 PM IST

ಮುಂದುವರಿದ ಮೀಸಲಾತಿ ಹಗ್ಗಜಗ್ಗಾಟ

ಸಾಂದರ್ಭಿಕ ಚಿತ್ರ..

ಬೆಂಗಳೂರು: ಹುಬ್ಬಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ವೇಳಾಪಟ್ಟಿ
ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗಕ್ಕೆ 2021 ಮುಗಿಯುವುದರೊಳಗೆ ರಾಜ್ಯದ 51 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸವಾಲು ಎದುರಾಗಿದೆ.

ಈ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗದ ನಡುವೆ “ಮೀಸಲಾತಿ’ ಹಗ್ಗಜಗ್ಗಾಟ ನಡೆಯುತ್ತಿದೆ.
2016ರಲ್ಲಿ ಚುನಾವಣೆ ನಡೆದ 51 ನಗರ ಸ್ಥಳೀಯ ಸಂಸ್ಥೆಗಳಿಗೆ ಈ ವರ್ಷ ಚುನಾವಣೆ ನಡೆಸಬೇಕಿದ್ದು, ಅದಕ್ಕಾಗಿ ಮೀಸಲಾತಿ ಪಟ್ಟಿ ಕೊಡಿ ಎಂದು ಚುನಾವಣಾ ಆಯೋಗ ಸರ್ಕಾರಕ್ಕೆ ಪರಿ ಪರಿಯಾಗಿ ಬೇಡಿಕೊಳ್ಳುತ್ತಿದೆ. ಆದರೆ, ಸರ್ಕಾರಮಾತ್ರ “ನಾಳೆಬಾ’ಧೋರಣೆ
ಅನುಸರಿಸುತ್ತಿದೆ.

ಪ್ರವಾಹ, ಕೋವಿಡ್‌ 3ನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ 2018ರಲ್ಲಿ ಅವಧಿ ಮುಗಿದು ನನೆಗುದಿಗೆ ಬಿದ್ದಿದ್ದ 13 ಹಾಗೂ
2016ರಲ್ಲಿ ಚುನಾವಣೆ ನಡೆದು ಈ ವರ್ಷ ಅವಧಿ ಮುಗಿಯಲಿರುವ51 ನಗರ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸ
ಬೇಕು ಎಂಬಆಲೋಚನೆಯಲ್ಲಿ ಚುನಾವಣಾ ಆಯೋಗ ಇತ್ತು. ಹೇಗೋ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಿದೆ. ಆದರೆ, ಸರ್ಕಾರದ “ಅಸಹಕಾರ’ ಧೋರಣೆಯಿಂದ 51 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ದಿನಾಂಕ ನಿಗದಿಪಡಿಸಲು ಕಾದು ನೋಡುವ ಅನಿವಾರ್ಯತೆ ಚುನಾವಣಾ ಆಯೋಗಕ್ಕೆ ಎದುರಾಗಿದೆ.

ಇದನ್ನೂ ಓದಿ:ಮೃತ ಫೈಟರ್ ವಿವೇಕ್‌ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಿದ ನಿರ್ಮಾಪಕರ ಪತ್ನಿ

ಚುನಾವಣೆ ನಡೆಸಲು ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಆದರೆ, ಸರ್ಕಾರ ಮೀಸಲಾತಿ ಅಂತಿಮಗೊಳಿಸದ ಕಾರಣ ಆಯೋಗ ತೀರ್ಮಾನಕ್ಕೆ ಬರಲು ಆಗುತ್ತಿಲ್ಲ ಎನ್ನಲಾಗಿದೆ.ರಾಜ್ಯದ 1 ನಗರಸಭೆ, 16 ಪುರಸಭೆ ಹಾಗೂ 34 ಪಟ್ಟಣ ಪಂಚಾಯಿತಿಗಳಿಗೆ 2021ರಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಬೇಕಿದೆ. ಈ ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಸರ್ಕಾರ ಕೊಟ್ಟರೆ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಬಹುದು. ಆದರೆ,51ರ ಪೈಕಿ ಈವರೆಗೆ ಸರ್ಕಾರ ಕೇವಲ 10 ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ಆಯೋಗಕ್ಕೆ ಕೊಟ್ಟಿದೆ. ಈ ವರ್ಷಾಂತ್ಯಕ್ಕೆ ತಾ.ಪಂ., ಜಿ.ಪಂ. ಚುನಾವಣೆಗಳು ಎದುರಾಗಬಹುದು.

ಹಾಗಾಗಿ, ಆದಷ್ಟು ಬೇಗ ಈ 51 ನಗರ ಸ್ಥಳೀಯ ಸಂಸ್ಥೆಗಳಿಗೆಚುನಾವಣೆ ನಡೆಸಬೇಕು ಎಂದು ಆಯೋಗ ಆಲೋಚನೆ ಮಾಡಿತ್ತು. ಆದರೆ, ಸರ್ಕಾರ ಈವರೆಗೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಕೊಡದೇ ಇದ್ದುದರಿಂದ ದಿನಾಂಕ ನಿಗದಿಪಡಿಸಲು ಸಾಧ್ಯವಾಗುತ್ತಿಲ್ಲ. ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ನಿರಂತರ ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದು ಆಯೋಗದ
ಅಧಿಕಾರಿಗಳು ತಿಳಿಸಿದ್ದಾರೆ.

2021ನೇ ಸಾಲಿನಲ್ಲಿ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳು
ನಗರಸಭೆ: ಹೆಬ್ಬಗೋಡಿ. ಪುರಸಭೆ: ಜಿಗಣಿ, ಚಂದಾಪುರ, ಬಿಡದಿ, ಮಲೆಬೆನ್ನೂರು, ಕಾಪು, ಹಾರೋಗೇರಿ, ಮುಗಳಖೋಡ, ಮುನವಳ್ಳಿ, ಉಗಾರಖುರ್ದ, ಕಾರಟಗಿ, ಕುರೆಕುಪ್ಪ, ಹಗರಿಬೊಮ್ಮನಹಳ್ಳಿ,ಕುರಗೋಡು, ಮಸ್ಕಿ,ಕೆಂಭಾವಿ,ಕಕ್ಕೆರಾ. ಪಟ್ಟಣ ಪಂಚಾಯಿತಿ: ನಾಯಕನಹಟ್ಟಿ, ವಿಟ್ಲಾ, ಕೋಟೆಕಾರು, ಎಂ.ಕೆ. ಹುಬ್ಬಳ್ಳಿ, ಕಂಕನಾಡಿ, ನಾಗನೂರ, ಯಕ್ಸಾಂಬ, ಚೆನ್ನಮ್ಮನ ಕಿತ್ತೂರು, ಅರಭಾವಿ, ಐನಾಪೂರ, ಶೇಡಬಾಳ, ಚಿಂಚಿಲಿ, ಬೋರಗಾವ, ಕಲ್ಲೋಳಿ, ನಾಲತವಾಡ, ನಿಡಗುಂದಿ, ದೇವರಹಿಪ್ಪರಗಿ, ಆಲಮೇಲ, ಮನಗೋಳಿ, ಕೋಲ್ಹಾರ, ಕಮತಗಿ, ಬೆಳಗಲಿ, ಅಮೀನಗಡ, ಗುತ್ತಲ, ಜಾಲಿ, ತಾವರಗೇರಾ, ಕುಕನೂರ, ಭಾಗ್ಯನಗರ, ಕನಕಗಿರಿ, ಮರಿಯಮ್ಮನಹಳ್ಳಿ,ಕವಿತಾಳ, ತುರ್ವಿಹಾಳ, ಬಳಗಾನೂರ, ಸಿರವಾರ.

2021ರಲ್ಲಿ ಚುನಾವಣೆ ನಡೆಯಬೇಕಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಬೇಕು ಎಂಬ
ಯೋಜನೆ ಇತ್ತು. ಅದರಂತೆ, ಆಯೋಗ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ. ಆದರೆ, ಅನೇಕ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ಆಯೋಗಕ್ಕೆ ಈವರೆಗೆ ಬಂದಿಲ್ಲ. ನಗರಾಭಿವೃದ್ಧಿ ಇಲಾಖೆಗೆ ಪದೇ ಪದೆ ಮನವಿ ಮಾಡಲಾಗಿದೆ.
-ಡಾ. ಬಿ. ಬಸವರಾಜು,
ರಾಜ್ಯ ಚುನಾವಣಾ ಆಯುಕ್ತ

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.