ದೊಡ್ಡ ಬಳ್ಳಾಪುರ ನಗರಸಭೆಗೆ ಚುನಾವಣೆ ಭಾಗ್ಯ

ಸೆ.3ರಂದು ಚುನಾವಣೆ ನಡೆಸಲು ಆದೇಶ ; ನಾಮಪತ್ರ ಸಲ್ಲಿಸಲು ಆ.23 ಕೊನೆ ದಿನ

Team Udayavani, Aug 12, 2021, 3:34 PM IST

ದೊಡ್ಡ ಬಳ್ಳಾಪುರ ನಗರಸಭೆಗೆ ಚುನಾವಣೆ ಭಾಗ್ಯ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸೆಪ್ಟಂಬರ್‌ 3ರಂದು ದಿನಾಂಕ ನಿಗದಿಪಡಿಸಿದ್ದು,ಚುನಾವಣೆ ನಡೆಸಲು ಇದ್ದ ಸಮಸ್ಯೆಗಳು ನಿವಾರಣೆಯಾದಂತಾಗಿವೆ.

ರಾಜ್ಯ ಚುನಾವಣೆ ಆಯೋಗದ ಅಧೀನ ಕಾರ್ಯದರ್ಶಿ ಎನ್‌.ಆರ್‌.ನಾಗರಾಜ್‌ ಮಾಡಿರುವ ಆದೇಶದ ಅನುಸಾರ ದೊಡ್ಡಬಳ್ಳಾಪುರ ನಗರಸಭೆಗೆ ಚುನಾವಣೆ ಸೆ.3ರಂದು ಚುನಾವಣೆ ನಡೆಸಲು ದಿನಾಂಕ ನಿಗದಿಯಾಗಿದೆ. ಆ.16ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಆ.23 ಕೊನೆಯ ದಿನವಾಗಿದೆ. ಆ.24 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರಗಳನ್ನು ಹಿಂಪಡೆಯಲು ಆ.26 ಕಡೆಯ ದಿನವಾಗಿದೆ.ಚುನಾವಣೆ ಸೆ.3ರಂದು ನಡೆಯಲಿದ್ದು, ಸೆ.6ರಂದು ಮತ ಎಣಿಕೆಗೆ ತಾಲೂಕು ಕೇಂದ್ರದಲ್ಲಿ ನಡೆಯಲಿದೆ.

ಚುನಾವಣೆಗಿದ್ದ ಅಡೆತಡೆಗಳ ನಿವಾರಣೆ:ನಗರಸಭೆಯ ಸದಸ್ಯರ ಅಧಿಕಾರ ಅವಧಿ 2019ರ ಮಾ.12ರ ಸಂಜೆ ಮುಕ್ತಾಯವಾಗಿ, ನಗರಸಭೆ ಈಗ ಆಡಳಿತಾಧಿಕಾರಿಗಳ ಸುಪರ್ದಿನಲ್ಲಿದೆ.2ವರ್ಷ 5 ತಿಂಗಳಾಗಿದ್ದರೂ ಚುನಾವಣೆಗೆ ಕಾಲ ಕೂಡಿ ಬಂದಿರಲಿಲ್ಲ. ವಾರ್ಡ್‌ಗಳ ಗಡಿ ನಿಗದಿ, ವಾರ್ಡ್‌ಗಳ ಮೀಸಲಾತಿ ಅಂತಿಮಗೊಳಿಸಿದ್ದರೂ ಸಹ ಇದು ಸರಿ ಇಲ್ಲ ಎನ್ನುವುದನ್ನು ಪ್ರಶ್ನಿಸಿ, ಕೆಲವರು ನ್ಯಾಯಾಲಯದ ಮೊರೆ ಹೋದ ಕಾರಣದಿಂದಾಗಿ ನಗರಸಭಾ ಚುನಾವಣೆ ವಿಳಂಬವಾಗುತ್ತಲೇ ಬರುತ್ತಿತ್ತು. ಈಹಿಂದೆ ನಗರಸಭೆಗೆ ಚುನಾವಣಾ ಆಯೋಗದಿಂದ ಏ.27ರಂದು ಚುನಾವಣೆ ನಡೆಸಲು, ಮಾರ್ಚ್‌ 29ರಂದು ವೇಳಾಪಟ್ಟಿಯ ಪ್ರಕಟಣೆ ಹೊರಡಿಸಲಾಗಿತ್ತು. ನಂತರ ಸಂಜೆ ವೇಳೆಗೆ ತಾಂತ್ರಿಕ ಕಾರಣ ನೀಡಿ,
ಚುನಾವಣೆ ವೇಳಾಪಟ್ಟಿಯನ್ನು ಹಿಂದಕ್ಕೆ ಪಡೆದು ಆದೇಶ ಹೊರಡಿಸಿತ್ತು. ವಾರ್ಡ್‌ಗಳ ಮೀಸಲಾತಿ ನಿಗದಿಯನ್ನು ಪ್ರಶ್ನಿಸಿ ಜಿ.ಎಸ್‌.ಸೋಮರುದ್ರ ಶರ್ಮ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೆಲ್ಲವು ಇತ್ಯರ್ಥವಾಗಿ ಚುನಾವಣಾ ದಿನಾಂಕ ಪ್ರಕಟವಾಗುತ್ತದೆ ಎನ್ನುವಷ್ಟರಲ್ಲೇ ಮತ್ತೂಮ್ಮೆ ಲಾಕ್‌ಡೌನ್‌ ಜಾರಿಗೆ ಬಂತು. ಈಗ ವಾರ್ಡ್‌ ತಕರಾರು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಕರೇನಹಳ್ಳಿ ಗಡಿಗೆ ಸಂಬಂಧಿಸಿದಂತೆ ಈ ಹಿಂದಿನ ಮತದಾರರ ಪಟ್ಟಿಯನ್ನು ಪುರಸ್ಕರಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು ಚುನಾವಣೆಗೆ ಇದ್ದ ಆತಂಕಗಳು ನಿವಾರಣೆಯಾದಂತಾಗಿದೆ.

ಇದನ್ನೂ ಓದಿ:ಇಂದಿನಿಂದ ಲಾರ್ಡ್ಸ್ ಕದನ: ಟಾಸ್ ಗೆದ್ದ ಇಂಗ್ಲೆಂಡ್, ಭಾರತ ತಂಡದಲ್ಲಿ ಒಂದು ಬದಲಾವಣೆ

ಗರಿಗೆದರಿದ ರಾಜಕೀಯ ಚಟುವಟಿಕೆಗಳು:
ಡಿಸೆಂಬರ್‌ವರೆಗೂ ಯಾವುದೇ ಚುನಾವಣೆ ನಡೆಯುವುದಿಲ್ಲ ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಆದರೆ, ರಾಜ್ಯದಲ್ಲಿ ಶಾಲಾ ಕಾಲೇಜು,
ವಾಣಿಜ್ಯ ವ್ಯವಹಾರಗಳಿಗೆ ಕೊರೊನಾ ಅನ್‌ಲಾಕ್‌ ಮಾಡಿರುವ ರಾಜ್ಯ ಸರ್ಕಾರಕ್ಕೆ ಚುನಾವಣೆ ನಡೆಸಲು ಏನು ಅಡ್ಡಿ ಎಂದು ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಜರೂರಾಗಿ ಚುನಾವಣೆ ದಿನಾಂಕ ಪ್ರಕಟವಾಗಿದೆ.

ಯಾವ ಸಮಯದಲ್ಲದಾರೂ ಚುನಾವಣೆ ನಡೆಯಬಹುದೆಂಬ ನಿರೀಕ್ಷೆಯಿಂದ ವಿವಿಧ ರಾಜಕೀಯ ಪಕ್ಷಗಳಲ್ಲಿ ಆಕಾಂಕ್ಷಿಗಳ ಸಭೆಗಳನ್ನು
ನಡೆಸಲಾಗುತ್ತಿತ್ತು. ವಿವಿಧ ರಾಜಕೀಯ ಮುಖಂಡರು ತಮ್ಮ ಪಕ್ಷಗಳನ್ನು ಬದಲಾಯಿಸಿ ಇತರೆ ಪಕ್ಷಗಳಿಗೆ ಸೇರ್ಪಡೆಗೊಳ್ಳುತ್ತಿರುವುದು ಸಾಮಾನ್ಯವಾಗಿದೆ. ವಾರ್ಡ್‌ಗಳ ಮೀಸಲಾತಿಯನ್ವಯ ತಾವು ಸ್ಪರ್ಧಿಸುವ ವಾರ್ಡ್‌ಗಳಿಗೆ ಭೇಟಿ ನೀಡಿ ಮತದಾರರನ್ನು ಓಲೈಸುವುದು, ವಾರ್ಡ್‌ಗಳು ತಮಗೊಪ್ಪದಿದ್ದರೆ ನಿರಾಶರಾಗುತ್ತಿರುವುದು ನಡೆಯುತ್ತಿದೆ. ಈಗ ನಗರಸಭೆ ಚುನಾವಣೆ ಘೋಷಣೆಯು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.

ನಗರಸಭೆ ಚುನಾವಣೆ ಎದುರಿಸಲು ಸಜ್ಜಾಗಿದ್ದೇವೆ. ಕಾಂಗ್ರೆಸ್‌ ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಬೇರೆ ಪಕ್ಷದವರು ಸೇರ್ಪಡೆಯಾಗುತ್ತಿದ್ದು, ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರ ಗಮನಕ್ಕೆ ತಂದು ಅಂತಿಮಗೊಳಿಸಲಾಗುವುದು. ನಗರಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ವಿಶ್ವಾಸವಿದೆ.
-ಟಿ.ವೆಂಕಟರಮಣಯ್ಯ, ಶಾಸಕರು

ಈಗಾಗಲೇ ಆಕಾಂಕ್ಷಿಗಳ ಸಭೆ ನಡೆಸಲಾಗಿದೆ. ಮತದಾರರ ಪಟ್ಟಿ ಅಂತಿಮಗೊಳ್ಳುತ್ತಿದೆ. ಚುನಾವಣೆ ಸಮಯದಲ್ಲಿ ಪಕ್ಷಾಂತರ ಸಹಜ.
ನಗರಸಭೆಯಲ್ಲಿ 2 ಬಾರಿ ಜೆಡಿಎಸ್‌ನಿಂದ ಹೆಚ್ಚಿನ ಸದಸ್ಯರು ಆಯ್ಕೆಯಾಗಿದ್ದು, ಜನರು ಬೆಂಬಲಿಸುವ ವಿಶ್ವಾಸವಿದೆ. ಹಿರಿಯರ ಜೊತೆ ಸಮಾಲೋಚಿಸಿ ಅಭ್ಯರ್ಥಿಗಳಘೋಷಣೆ ಮಾಡಲಾಗುವುದು.
– ವಿ.ಎಸ್‌.ರವಿಕುಮಾರ್‌, ಅಧ್ಯಕ್ಷ, ಜೆಡಿಎಸ್‌ ನಗರ ಘಟಕ

31 ವಾರ್ಡ್‌ಗಳಲ್ಲಿ ಆಕಾಂಕ್ಷಿಗಳ ಪಟ್ಟಿ ಪಡೆಯಲಾಗಿದೆ. ಬೂತ್‌ ಮಟ್ಟದಲ್ಲಿ ಕಾರ್ಯಕರ್ತರುಕೆಲಸ ಮಾಡುತ್ತಿದ್ದಾರೆ. ಅಭ್ಯರ್ಥಿಗಳ
ಕೊರತೆಯಿಲ್ಲ. ಚುನಾವಣೆ ಎದುರಿಸಲು ಬಿಜೆಪಿ ಪಕ್ಷ ಸಜ್ಜಾಗಿದ್ದು, ಈ ಬಾರಿ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿಯುವ ವಿಶ್ವಾಸವಿದೆ.
-ಎಚ್‌.ಎಸ್‌.ಶಿವಶಂಕರ್‌, ಅಧ್ಯಕ್ಷ, ಬಿಜೆಪಿ ನಗರ ಘಟಕ

ಮೀಸಲಾತಿ ಪಟ್ಟಿಯಂತೆ ಒಂದೆರಡು ವಾರ್ಡ್‌ಗಳಲ್ಲಿ ಮಾತ್ರ ಒಬ್ಬರೇ ಆಕಾಂಕ್ಷಿಗಳು ಇದ್ದಾರೆ. ಉಳಿದಂತೆ ಎಲ್ಲಾ ವಾರ್ಡ್‌ಗಳಲ್ಲಿಯೂ ಎರಡಕ್ಕಿಂತಲು ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಸಭೆ ನಡೆಸಲಾಗಿದೆ.
-ಕೆ.ಪಿ.ಜಗನ್ನಾಥ್‌, ಅಧ್ಯಕ್ಷ,ಕಾಂಗ್ರೆಸ್‌ ನಗರ ಬ್ಲಾಕ್‌

ಟಾಪ್ ನ್ಯೂಸ್

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.