ಅಂತ್ಯ ಸಂಸ್ಕಾರ ಮಾಡಲು ಹಣ ಇಲ್ಲದೆ ಅಜ್ಜನ ಶವವನ್ನು ಫ್ರಿಡ್ಜ್ ನಲ್ಲಿಟ್ಟ ಮೊಮ್ಮಗ!
ನನ್ನಲ್ಲಿ ಹಣ ಇಲ್ಲದ ಕಾರಣ ಅಜ್ಜ ಅಂತ್ಯ ಸಂಸ್ಕಾರ ನಡೆಸಲು ಸಾಧ್ಯವಾಗಿಲ್ಲವಾಗಿತ್ತು
Team Udayavani, Aug 13, 2021, 11:55 AM IST
ಹೈದರಾಬಾದ್: ಅಂತ್ಯ ಸಂಸ್ಕಾರ ನಡೆಸಲು ಹಣ ಇಲ್ಲದ ಕಾರಣದಿಂದ 93 ವರ್ಷದ ಅಜ್ಜನ ಶವವನ್ನು ಫ್ರಿಡ್ಜ್ ನೊಳಗೆ ಅಡಗಿಸಿ ಇಟ್ಟಿರುವ ಭಯಾನಕ ಘಟನೆ ತೆಲಂಗಾಣದಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಾರಂಗಲ್ ನ ಪರ್ಕಾಲಾ ಎಂಬ ಪ್ರದೇಶದಲ್ಲಿ ಕೆಟ್ಟ ವಾಸನೆ ಬರುತ್ತಿರುವುದಾಗಿ ಸುತ್ತಮುತ್ತಲಿನ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸ್ ತಂಡ ಮನೆಯೊಳಗೆ ಶೋಧ ಕಾರ್ಯ ನಡೆಸಿದ ವೇಳೆ ರೆಫ್ರಿಜರೇಟರ್ ನೊಳಗೆ ಶವ ಇದ್ದಿರುವುದು ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಪರ್ಕಾಲಾ ಪ್ರದೇಶದಲ್ಲಿ ನಿವೃತ್ತ ವ್ಯಕ್ತಿ ಮತ್ತು ಮೊಮ್ಮಗ ನಿಖಿಲ್ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಈ ಹಿರಿಯ ವ್ಯಕ್ತಿಗೆ ಬರುತ್ತಿದ್ದ ಪೆನ್ಶನ್ ಹಣದಿಂದಲೇ ಮೊಮ್ಮಗ ಜೀವನ ಸಾಗಿಸುತ್ತಿದ್ದ ಎಂದು ವರದಿ ತಿಳಿಸಿದೆ.
ನಿಖಿಲ್ ಪೊಲೀಸರಿಗೆ ತಿಳಿಸಿರುವ ಮಾಹಿತಿ ಪ್ರಕಾರ, ತನ್ನ ಅಜ್ಜ ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದು, ಮೂರು ದಿನಗಳ ಹಿಂದೆ ಸಾವನ್ನಪ್ಪಿದ್ದರು. ನಂತರ ಅಜ್ಜನ ಶವವನ್ನು ಬೆಡ್ ಶೀಟ್ ನಲ್ಲಿ ಸುತ್ತಿ ಫ್ರಿಡ್ಜ್ ನೊಳಗೆ ಇಟ್ಟಿದ್ದೆ. ನನ್ನಲ್ಲಿ ಹಣ ಇಲ್ಲದ ಕಾರಣ ಅಜ್ಜ ಅಂತ್ಯ ಸಂಸ್ಕಾರ ನಡೆಸಲು ಸಾಧ್ಯವಾಗಿಲ್ಲವಾಗಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಅಜ್ಜನ ಅಂತ್ಯ ಸಂಸ್ಕಾರ ನಡೆಸಲು ಹಣ ಇಲ್ಲದಿದ್ದ ಕಾರಣದಿಂದ ಫ್ರಿಡ್ಜ್ ನೊಳಗೆ ಅಡಗಿಸಿಟ್ಟಿರುವುದಾಗಿ ನಿಖಿಲ್ ತಿಳಿಸಿದ್ದು, ಇದೊಂದು ಅಸಹಜ ಸಾವೊ ಅಥವಾ ಇನ್ಯಾವುದೋ ಕಾರಣದಿಂದ ಸಾವು ಸಂಭವಿಸಿದೆಯೇ ಎಂಬುದನ್ನು ತನಿಖೆಯಿಂದ ತಿಳಿದು ಬರಬೇಕಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ