ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ


Team Udayavani, Aug 14, 2021, 6:51 AM IST

ಕಾರವಾರದವರೆಗೂ ವಿಸ್ಟಾಡೋಮ್‌ ರೈಲು ವಿಸ್ತರಣೆ

ಕುಂದಾಪುರ/ಉಡುಪಿ: ಕೋವಿಡ್‌ ಕಾರಣದಿಂದ ಭಾಗಶಃ ಸಂಚಾರ ಮೊಟಕುಗೊಳಿಸಿದ್ದ ಬೆಂಗಳೂರು-ಕಾರವಾರ (06211/12) ಬೆಳಗಿನ ರೈಲು, ಆ.16ರಿಂದ ಹೊಸ ವಿಸ್ಟಾಡೋಮ್‌ ಕೋಚಿ ನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈಋತ್ಯ ರೈಲ್ವೇ ತಿಳಿಸಿದೆ.  ಇದಕ್ಕೆ ಕೊಂಕಣ್‌ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣ ಸಮಿತಿ, ಪ್ರಯಾಣಿಕರ ಒತ್ತಾಯ, ಹೋರಾಟ ಫ‌ಲಪ್ರದವಾಗಿದೆ.

ಕೊರೊನಾ ಕಾರಣದಿಂದ ಯಶವಂತಪುರ – ಕಾರವಾರ ಹಗಲು ರೈಲು ಸ್ಥಗಿತಗೊಂಡ ಬಳಿಕ ಅದೇ ಸಮಯದಲ್ಲಿ ವಿಸ್ಟಾಡೋಮ್‌ ಪ್ರವಾಸಿ ಬೋಗಿಯಿರುವ ರೈಲನ್ನು ಯಶವಂತಪುರದಿಂದ ಮಂಗಳೂರು ತನಕ ಓಡಿಸಲಾಗುತ್ತಿತ್ತು. ಇದರಿಂದ ಕುಂದಾಪುರ, ಕಾರವಾರ ಭಾಗದ ಪ್ರಯಾಣಿಕರು ಹಾಗೂ ಪ್ರವಾಸಿಗರಿಗೆ ನಿರಾಸೆಯಾಗಿತ್ತು.

ಈ ಸಂಬಂಧ ಕಾರವಾರದವರೆಗೂ ಈ ರೈಲನ್ನು  ವಿಸ್ತರಿಸಬೇಕೆಂದು ಕುಂದಾಪುರ, ಉತ್ತರ ಕನ್ನಡ ರೈಲ್ವೇ ಪ್ರಯಾಣಿಕರ ಹಿತರಕ್ಷಣ ಸಮಿತಿ, ಉತ್ತರ ಕನ್ನಡ ರೈಲ್ವೇ ಸಮಿತಿ, ರೈಲು ಪ್ರಯಾಣಿಕರು ಸಂಸದೆ ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಮಾಡಿ ಒತ್ತಾಯಿಸಿದ್ದರು.

ಈ ನಿಟ್ಟಿನಲ್ಲಿ ತತ್‌ಕ್ಷಣ ಕಾರ್ಯ ಪ್ರವೃತ್ತರಾದ ಶೋಭಾ ಕರಂದ್ಲಾಜೆಯವರು, ಕೇಂದ್ರ ರೈಲ್ವೇ ಸಚಿವರನ್ನು ಭೇಟಿಯಾಗಿ ಕಾರವಾರ-ಬೆಂಗಳೂರು ಹಗಲು ರೈಲನ್ನು ಪುನರಾರಂಭಿಸುವಂತೆ ಮನವಿ ಮಾಡಿದರು. ಈ ಮನವಿಗೆ ಸಚಿವರು ಸ್ಪಂದಿಸಿ ವಿಸ್ಟಾಡೋಮ್‌ ಕೋಚ್‌ ಸಹಿತ ರೈಲು ಆರಂಭಿಸಲು ರೈಲ್ವೇ ಇಲಾಖೆಗೆ  ಸೂಚಿಸಿದರು. ಈ ಸಂಬಂಧ “ಉದಯವಾಣಿ’ಯು ಜು. 13ರಂದು ವರದಿ ಪ್ರಕಟಿಸಿ, ಗಮನ ಸೆಳೆದಿತ್ತು.

ಜನಪ್ರತಿನಿಧಿಗಳ ಸಹಕಾರ :

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಅನಂತ ಕುಮಾರ್‌ ಹೆಗಡೆ, ಶಾಸಕರಾದ ಕುಂದಾಪುರದ  ಹಾಲಾಡಿ ಶ್ರೀನಿವಾಸ ಶೆಟ್ಟಿ, ಕುಮಟಾದ ದಿನಕರ್‌ ಶೆಟ್ಟಿ ಅವರ ಸಹಕಾರ ಮತ್ತು ನಮ್ಮ ಹೋರಾಟದಿಂದ ವಿಸ್ಟಾಡೋಮ್‌ ರೈಲು ಕಾರವಾರದವರೆಗೆ ವಿಸ್ತರಿಸಲು ಸಾಧ್ಯವಾಗಿದೆ ಎಂದು ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗಣೇಶ್‌ ಪುತ್ರನ್‌ ತಿಳಿಸಿದ್ದಾರೆ.

ಆ.16ಕ್ಕೆ ರೈಲು ಆಗಮನ :

ವಿಸ್ಟಾಡೋಮ್‌ ರೈಲು ಉಡುಪಿ, ಕುಂದಾಪುರಕ್ಕೆ ಆ. 16ರಂದು ಬರಲಿದ್ದು, ಆ ದಿನ ಸಂಜೆ ಕುಂದಾಪುರದ ಮೂಡ್ಲಕಟ್ಟೆಯ ರೈಲು ನಿಲ್ದಾಣದಲ್ಲಿ ಸ್ವಾಗತ ಕಾರ್ಯಕ್ರಮವಿದೆ. ಉಡುಪಿ, ಕುಂದಾಪುರ, ಬೈಂದೂರು, ಕಾರವಾರದವರೆಗೆ ಅತ್ಯಾಧುನಿಕ ಸೌಲಭ್ಯಗಳಿರುವ ಈ ಬೋಗಿಗಳಲ್ಲಿ ಪ್ರಯಾಣಿಸಿದರೆ, ಪಂಚಗಂಗಾವಳಿ ನದಿ, ಗೋಕರ್ಣ, ಮುಡೇìಶ್ವರ, ಕಡಲ ಕಿನಾರೆ, ಒತ್ತಿನೆಣೆ ಗುಡ್ಡ ಸಹಿತ ಇನ್ನಿತರ ಸಹಜ ಸೌಂದರ್ಯದ ಪ್ರಾಕೃತಿಕ ಸೊಬಗನ್ನು ಸವಿಯುವ ಅವಕಾಶ ಪ್ರಯಾಣಿಕರಿಗೆ ಸಿಗಲಿದೆ.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.