6 ತಿಂಗಳಲ್ಲಿ ಕೋವಿಡ್ ಪ್ರಕರಣ ದುಪ್ಪಟ್ಟು
ಈ ತಿಂಗಳ ಮೊದಲ ವಾರ ಜಾಗತಿಕ ಪ್ರಕರಣಗಳ ಸಂಖ್ಯೆ 20 ಕೋಟಿಗೇರಿಕೆ
Team Udayavani, Aug 14, 2021, 10:30 PM IST
ನವದೆಹಲಿ: ಜಗತ್ತಿಗೆ ಕೋವಿಡ್ ಸೋಂಕು ಪ್ರವೇಶ ಪಡೆದು 18 ತಿಂಗಳುಗಳೇ ಕಳೆದರೂ, ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗಿಲ್ಲ. ಪ್ರಸಕ್ತ ತಿಂಗಳ ಮೊದಲ ವಾರದಲ್ಲಿ ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 20 ಕೋಟಿಗೇರಿದೆ. ವಿಶೇಷವೆಂದರೆ, ಕಳೆದ 6 ತಿಂಗಳಲ್ಲಿ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿ 20 ಕೋಟಿಗೆ ತಲುಪಿದೆ. ಇದಕ್ಕೆ ಕಾರಣ, ಕೋವಿಡ್ ಡೆಲ್ಟಾ ರೂಪಾಂತರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.
ಈ ವರ್ಷದ ಫೆಬ್ರವರಿಯಲ್ಲಿ ಭಾರತದಲ್ಲಿ ಈ ರೂಪಾಂತರಿ ಪತ್ತೆಯಾಗಿದ್ದು, ಈಗ 140ಕ್ಕೂ ಹೆಚ್ಚು ದೇಶಗಳಲ್ಲಿ ವ್ಯಾಪಿಸಿದೆ. ಅಮೆರಿಕದ ಒಟ್ಟಾರೆ ಪ್ರಕರಣಗಳ ಪೈಕಿ ಶೇ.96ರಷ್ಟು ಡೆಲ್ಟಾ ರೂಪಾಂತರಿಗೆ ಸಂಬಂಧಿಸಿದ್ದಾಗಿದ್ದರೆ, ಯುಕೆ, ರಷ್ಯಾ, ಇಂಡೋನೇಷ್ಯಾ, ಭಾರತದಲ್ಲಿ ಶೇ.100ರಷ್ಟು ಪ್ರಕರಣಗಳು ಇದೇ ರೂಪಾಂತರಿಯದ್ದು. ಇನ್ನು, ಬ್ರೆಜಿಲ್ನಲ್ಲಿ ಗಾಮಾ ರೂಪಾಂತರಿ ಸದ್ದು ಮಾಡುತ್ತಿದ್ದು, ಶೇ.75ರಷ್ಟು ಮಂದಿಗೆ ಈ ಸೋಂಕು ದೃಢಪಟ್ಟಿದೆ ಎಂದೂ ಸಂಸ್ಥೆ ತಿಳಿಸಿದೆ.
ಇದನ್ನೂ ಓದಿ:ಕೋವಿಡ್: ದಕ್ಷಿಣ ಕನ್ನಡದಲ್ಲಿ 411 ಸೇರಿ ರಾಜ್ಯದಲ್ಲಿಂದು 1632 ಪ್ರಕರಣಗಳು ಪತ್ತೆ
ಇದೇ ವೇಳೆ, ಭಾರತದಲ್ಲಿ ಶುಕ್ರವಾರದಿಂದ ಶನಿವಾರಕ್ಕೆ 38,667 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 478 ಮಂದಿ ಸಾವಿಗೀಡಾಗಿ ದ್ದಾರೆ. ಸತತ 48 ದಿನಗಳಿಂದಲೂ 50 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದೃಢ ಪಡುತ್ತಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.
ಪ್ರವೇಶಕ್ಕೆ ಷರತ್ತು:
ಇನ್ನು, ಪಂಜಾಬ್ನಲ್ಲಿ ಸೋಮವಾರದಿಂದ ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದವರಿಗೆ ಮತ್ತು ಆರ್ಟಿ ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿ ಹೊಂದಿರುವವರಿಗೆ ಮಾತ್ರವೇ ಪ್ರವೇಶಕ್ಕೆ ಅನುಮತಿ ನೀಡುವುದಾಗಿ ಸರ್ಕಾರ ಘೋಷಿಸಿದೆ. ಜತೆಗೆ, ಹಿಮಾಚಲ ಪ್ರದೇಶ ಮತ್ತು ಜಮ್ಮುವಿನಿಂದ ಬರುವವರ ಮೇಲೆ ಹೆಚ್ಚಿನ ನಿಗಾ ಇಡಲಾಗುವುದು ಎಂದೂ ಸಿಎಂ ಕ್ಯಾ.ಅಮರೀಂದರ್ ಸಿಂಗ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ