ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ

ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ ಸ್ಪಷ್ಟನೆ ; ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣ

Team Udayavani, Aug 15, 2021, 3:57 PM IST

ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ 9ರಿಂದ19 ವರ್ಷದೊಳಗಿನ ಮಕ್ಕಳಲ್ಲಿ ಹೆಚ್ಚು ಕೋವಿಡ್‌ ಸೋಂಕು ಕಂಡುಬರುತ್ತಿದೆ ಎಂದು ಹಬ್ಬಿರುವ
ಸುದ್ದಿಯಿಂದ ಪೋಷಕರಲ್ಲಿ ಭೀತಿ ಉಂಟಾಗಿದೆ.

ಆದರೆ, ಬೇರೆ ವಯೋಮಾನದ ಕೋವಿಡ್‌ ಸೋಂಕಿತರಿಗೆ ಹೋಲಿಸಿದರೆ, ಸೋಂಕಿತ ಮಕ್ಕಳಲ್ಲಿ ಗಂಭೀರತೆ ಕಂಡುಬಂದಿಲ್ಲ ಎಂದು
ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ ಸ್ಪಷ್ಟಪಡಿಸಿದೆ.

ನಗರದಲ್ಲಿ ಕಳೆದ ನಾಲ್ಕು ತಿಂಗಳಿಂದ ದೃಢವಾದ ಕೋವಿಡ್‌ ಸೋಂಕು ಪ್ರಕರಣಗಳ ಪೈಕಿ 0-18 ವರ್ಷದೊಳಗಿನವರ ಸೋಂಕು ಪಾಸಿಟಿವಿಟಿ ದರ ಶೇ.11 ಇದೆ. ಹೀಗಾಗಿ, ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ.ಕಳೆದ10 ದಿನಗಳಲ್ಲಿ ಪತ್ತೆಯಾದ ಕೋವಿಡ್‌ ಸೋಂಕಿತರಲ್ಲಿ ಐದು ಮಕ್ಕಳು ಸರ್ಕಾರಿ ಮತ್ತು 24 ಮಕ್ಕಳು ಖಾಸಗಿ ಕೋಟಾದಡಿ ಆಸ್ಪತ್ರೆ ದಾಖಲಾಗಿದ್ದಾರೆ. ಒಟ್ಟು ಸೋಂಕು ಪ್ರಕರಣದ ಶೇ.5.7 ಮಕ್ಕಳು ಮಾತ್ರ ಆಸ್ಪತ್ರೆಗೆ ದಾಖಲಾತಿಯಾಗಿದ್ದು, ಬೇರೆ ವಯೋಮಾನದ ಸೋಂಕಿತರಿಗೆ ಹೋಲಿಸಿದರೆ ಇದುಕಡಿಮೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ:ತಾಲಿಬಾನ್ ಗೆ ಶರಣಾದ ಅಫ್ಘಾನ್: ಉಗ್ರರಿಗೆ ಅಧಿಕಾರ ಹಸ್ತಾಂತರಿಸಿದ ಅಫ್ಘಾನ್ ಅಧ್ಯಕ್ಷ!

ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳವಾಗಿದ್ದರೂ, ರಾಜ್ಯದಲ್ಲಿ ಕೋವಿಡ್‌ ಸೋಂಕು ನಿಯಂತ್ರಣದಲ್ಲಿದೆ. ನಗರದಲ್ಲಿ ಕಳೆದ 20 ದಿನಗಳಲ್ಲಿ ನಿತ್ಯ ಸರಾಸರಿ 388(350-400) ಸೋಂಕು ಪತ್ತೆಯಾಗುತ್ತಿದೆ. 0-12 ವಯಸ್ಸಿನ ಮಕ್ಕಳಿಗೆ ಜೂನ್‌ನಲ್ಲಿ2,643, ಜುಲೈನಲ್ಲಿ 778 ಮತ್ತು ಆ.13ರ ಅಂತ್ಯಕ್ಕೆ 309 ಸೋಂಕು ಕಂಡುಬಂದಿದೆ. ಇದಕ್ಕೆ ಹೋಲಿಕೆ ಮಾಡಿದಲ್ಲಿ ಮಕ್ಕಳ ಸೋಂಕು ಪ್ರಮಾಣ ಇಳಿಕೆಯಾಗಿದೆ.

ಆಗಸ್ಟ್‌ ತಿಂಗಳಲ್ಲಿ 0-18 ವರ್ಷದ 511 ಮಕ್ಕಳಿಗೆ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.11.5ರಷ್ಟಿದೆ. ಏಪ್ರಿಲ್‌ ನಿಂದ ಜೂನ್‌ವರೆಗೆ 14 ಮಕ್ಕಳುಸಾವನ್ನಪ್ಪಿದ್ದು, ಜುಲೈ ಮತ್ತು ಆಗಸ್ಟ್‌ನಲ್ಲಿ ಯಾರೂ ಮೃತರಾಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಶೀಘ್ರ 30 ಹಾಸಿಗೆಗಳ ಸಾಮರ್ಥ್ಯ ಆಸ್ಪತ್ರೆ: ಅಮೇರಿಕನ್‌ ಅಕಾಡೆಮಿ ಆಫ್ ಪೀಡಿಯಾ ಟ್ರಿಕ್ಸ್‌ ಪ್ರಕಟಿಸಿದ ಜಾಗತಿಕ ದತ್ತಾಂಶದಲ್ಲಿ ಒಟ್ಟು
ಕೋವಿಡ್‌ ಪ್ರಕರಣಗಳಲ್ಲಿ ಶೇ.14.3 ಮಕ್ಕಳಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಪೈಕಿ ಕೇವಲ ಶೇ.1.9 ಮಕ್ಕಳು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬೆಂಗಳೂರಲ್ಲಿ ಜಾಗತಿಕ ದತ್ತಾಂಶಕ್ಕಿಂತಲೂ ಕಡಿಮೆ ಸೋಂಕು ವರದಿ ಯಾಗುತ್ತಿದೆ. ಸೋಂಕಿತ ಮಕ್ಕಳ ಆರೈಕೆಗೆ
ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆ ಸೇರಿದಂತೆ 7 ಆಸ್ಪತ್ರೆ ಗುರುತಿಸಲಾಗಿದೆ. ಜತೆಗೆ, ಬಿಬಿಎಂಪಿ ವತಿಯಿಂದ ಮಕ್ಕಳ ಆರೈಕೆಗೆ ಶೀಘ್ರ 30
ಹಾಸಿಗೆಗಳ ಸಾಮರ್ಥ್ಯ ಆಸ್ಪತ್ರೆ ವ್ಯವಸ್ಥೆ ಮಾಡಲಿದೆ ಎಂದು ತಿಳಿಸಿದೆ.

ಭಯಪಡುವ ಅಗತ್ಯವಿಲ್ಲ
ಕೋವಿಡ್‌ ಸೋಂಕು ಪತ್ತೆಯಾದ ಬಹುತೇಕ ಮಕ್ಕಳಲ್ಲಿ ಸೌಮ್ಯ ರೋಗಲಕ್ಷಣಗಳು ಕಂಡುಬಂದಿದ್ದು, ತಮ್ಮಷ್ಟಕ್ಕೆ ತಾವೇ ಚೇತರಿಸಿಕೊಳ್ಳುತ್ತಾರೆ. ಹೀಗಾಗಿ, ನಗರದ ಜನರು ಹಾಗೂ ಪೋಷಕರು ಭಯಪಡುವ ಅಗತ್ಯವಿಲ್ಲ. ಮಕ್ಕಳಲ್ಲಿ ಸೋಂಕು ಲಕ್ಷಣ ಕಂಡು ಬಂದಲ್ಲಿ ವೈದ್ಯಕೀಯ ಮೌಲ್ಯಮಾಪನಕ್ಕಾಗಿ ಬಿಬಿಎಂಪಿ ದೈಹಿಕ ಚಿಕಿತ್ಸಾ ಕೇಂದ್ರ(ಪಿಟಿಸಿ), ಪ್ರಾಥಮಿಕ ಆರೋಗ್ಯಕೇಂದ್ರ(ಪಿಎಚ್‌ಸಿ) ಅಥವಾ ಸಮುದಾಯ
ಆರೋಗ್ಯ ಕೇಂದ್ರಗಳಿಗೆ (ಸಿಎಚ್‌ಸಿಎ) ತೆರಳಿ ತಪಾಸಣೆ ಮಾಡಿಸಿಕೊಳ್ಳಬಹುದು. ಮೂರು ವರ್ಷ ಮೇಲ್ಪಟ್ಟ ಎಲ್ಲ ಮಕ್ಕಳುಕಡ್ಡಾಯವಾಗಿ ಕೋವಿಡ್‌ನಿಯಮಗಳನ್ನು ಪಾಲಿಸಬೇಕು ಎಂದು ಬಿಬಿಎಂಪಿಯ ಮಕ್ಕಳ ತಜ್ಞರ ಸಮಿತಿಯು ಸಲಹೆ ನೀಡಿದೆ.

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್‌ ಅಂಡರ್‌ಪಾಸ್‌

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ 

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.