ನಮ್ಮ ಕೈ ಕಟ್ಟಿ ಹಾಕಿ ಉಗ್ರರಿಗೆ ದೇಶ ಮಾರಾಟ: ಅಫ್ಘಾನ್ ಅಧ್ಯಕ್ಷರ ವಿರುದ್ಧ ರಕ್ಷಣಾ ಸಚಿವ
ಈ ಕುರಿತು ಅಫ್ಘಾನ್ ಸರ್ಕಾರ ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ.
Team Udayavani, Aug 16, 2021, 12:35 PM IST
ಕಾಬೂಲ್: ತಾಲಿಬಾನ್ ಬಂಡುಕೋರರು ರಾಜಧಾನಿ ಕಾಬೂಲ್ ಸೇರಿದಂತೆ ಪ್ರಮುಖ ನಗರಗಳನ್ನು ವಶಪಡಿಸಿಕೊಂಡ ಬೆನ್ನಲ್ಲೇ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಏತನ್ಮಧ್ಯೆ ಅಫ್ಘಾನಿಸ್ತಾನ್ ರಕ್ಷಣಾ ಸಚಿವ ಬಿಸ್ಮಿಲ್ಲಾ ಮೊಹಮ್ಮದಿ ಟ್ವೀಟ್ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.
ಅಫ್ಘಾನಿಸ್ತಾನ ಸರ್ಕಾರ ನಮ್ಮ ಕೈಯನ್ನು ಕಟ್ಟಿ ಹಾಕಿ, ದೇಶವನ್ನು ಉಗ್ರರಿಗೆ ಮಾರಾಟ ಮಾಡಿರುವುದಾಗಿ ರಕ್ಷಣಾ ಸಚಿವ ಬಿಸ್ಲಿಲ್ಲಾ ಕಿಡಿಕಾರಿದ್ದಾರೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಅಫ್ಘಾನ್ ಅಧ್ಯಕ್ಷ ಘನಿ ಅವರು ಮೂರ್ಖತನದ ನಿರ್ಧಾರ ತೆಗೆದುಕೊಂಡಿದ್ದಾರೆ. ನಮ್ಮ (ಸೇನೆ) ಕೈಯನ್ನು ಕಟ್ಟಿ ಹಾಕಿ ದೇಶವನ್ನು ಶ್ರೀಮಂತ ವ್ಯಕ್ತಿ ಮತ್ತು ಆತನ ಗ್ಯಾಂಗ್ ಗೆ ಮಾರಾಟ ಮಾಡಿರುವುದಾಗಿ ಟೀಕಿಸಿದ್ದಾರೆ.
ಭಾನುವಾರ ಬೆಳಗ್ಗೆ ತಾಲಿಬಾನ್ ಅಫ್ಘಾನ್ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಂಡಿದ್ದು, ಅಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಘನಿ ತಜಿಕಿಸ್ತಾನಕ್ಕೆ ಪಲಾಯನ ಮಾಡಿರುವುದಾಗಿ ರಾಯಿಟರ್ಸ್ ವರದಿ ಮಾಡಿತ್ತು. ಭದ್ರತೆಯ ದೃಷ್ಟಿಯಿಂದ ಅಶ್ರಫ್ ಘನಿ ಅವರ ಬಗ್ಗೆ ಯಾವ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ಅಫ್ಘಾನ್ ಆಂತರಿಕ ಸಚಿವಾಲಯದ ಅಧಿಕಾರಿಯೊಬ್ಬರು ನ್ಯೂಸ್ ಏಜೆನ್ಸಿಗೆ ತಿಳಿಸಿದ್ದಾರೆ.
ತಾಲಿಬಾನ್ ಬಂಡುಕೋರರು ಕಾಬೂಲ್ ನಲ್ಲಿರುವ ಅಧ್ಯಕ್ಷರ ಅರಮನೆಯನ್ನು ಪ್ರವೇಶಿಸಿದ್ದು, ಅಧಿಕಾರವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿರುವುದಾಗಿ ತಾಲಿಬಾನ್ ನ ಇಬ್ಬರು ಹಿರಿಯ ಕಮಾಂಡರ್ ತಿಳಿಸಿರುವುದಾಗಿ ವರದಿ ವಿವರಿಸಿದೆ. ಆದರೆ ಈ ಕುರಿತು ಅಫ್ಘಾನ್ ಸರ್ಕಾರ ಈವರೆಗೆ ಅಧಿಕೃತ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು
U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್ ಪ್ರಧಾನಿ ಸುನಕ್ ಚಿಂತನೆ!
Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ