ನಾನು ಏನಾದರೂ ತಪ್ಪು ಮಾಡಿದ್ದರೆ ದೇವರು ನೋಡಿಕೊಳ್ಳುತ್ತಾನೆ: ಸಚಿವೆ ಜೊಲ್ಲೆ
Team Udayavani, Aug 16, 2021, 1:19 PM IST
ಅಥಣಿ: ನಾನು ಯಾವುದೇ ತಪ್ಪು ಮಾಡಿಲ್ಲ. ಮಹಿಳೆ ಒಬ್ಬಳು ಒಳ್ಳೆ ಕೆಲಸ ಮಾಡುವಾಗ ಆರೋಪಗಳು ಕೇಳಿ ಬರುವುದು ಸಹಜ. ನಾನು ಇರುವ ಖಾತೆಯಲ್ಲಿ ಸಂತ್ರಪ್ತಳಾಗಿ ಕಾರ್ಯ ನಿರ್ವಹಿಸುವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಅವರು ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಒಬ್ಬ ಮಹಿಳೆಯಾಗಿ ನನ್ನ ಕುಟುಂಬವನ್ನ ಹೇಗೆ ನಿರ್ವಹಿಸುತ್ತೇನೊ ಹಾಗೆಯೆ ರಾಜ್ಯದ ಮತ್ತು ರಾಷ್ಟ್ರೀಯ ಮುಖಂಡರು ನನಗೆ ಕೊಟ್ಟ ಜವಾಬ್ದಾರಿ ನಿರ್ವಹಿಸಿದ್ದೇನೆ. ಜೊತೆಗೆ ರಾಜ್ಯದಲ್ಲಿ ಜನಸೇವೆ ಮಾಡುತ್ತಿದ್ದೇನೆ. ಕರ್ನಾಟಕದ ಜನರು ನನ್ನ ಕುಟುಂಬ ಎಂದು ಭಾವಿಸಿ ಸಮಾಜ ಸೇವೆ ಮಾಡುತ್ತಿದ್ದೇನೆ. ಒಳ್ಳೆಯ ಕೆಲಸವನ್ನು ಮಾಡುವಾಗ ಅನೇಕ ಜನ ಅದಕ್ಕೆ ಹೆಸರು ಇಡುವವರೂ ಇರುತ್ತಾರೆ. ಅಂತಹ ಜನ ಅದನ್ನು ಮಾಡುತ್ತಿರುವಾಗ ನಾನು ಅದರ ಕಡೆಗೆ ಗಮನ ಕೊಟ್ಟಿಲ್ಲ.
ನಾನು ಯಾವುದೇ ರೀತಿಯಲ್ಲಿ ತಪ್ಪು ಮಾಡಿಲ್ಲ.ನನಗೆ ಅಂತಹ ಪರಿಸ್ಥಿತಿಯೂ ಬಂದಿಲ್ಲ. ನಾನು ಸಮಾಜ ಸೇವೆಗೆ ಬಂದಿರುವುದೇ ನಮ್ಮ ಮನೆಯಲ್ಲಿ ಕೂಡ ವಿಶೇಷ ಮಗು ಇರುವುದರಿಂದ. ಅಂತಹ ತಾಯಂದಿರ ಕಷ್ಟ ನನಗೂ ಗೊತ್ತಿದೆ. ಮಂತ್ರಿಗಿರಿಯಿಂದ ಇಳಿಸಬೇಕು ಎನ್ನುವ ನಿಟ್ಟಿನಲ್ಲಿ ಕೂಡ ಆರೋಪ ಆಗಿರಬಹುದು. ನಾನು ಯಾರನ್ನೂ ಕೂಡ ಸಾಕ್ಷಿ, ಆಧಾರ ಇಲ್ಲದೆ ದೂಷಿಸುವದಿಲ್ಲ. ಯಾರು ಮಾಡಿದ್ದಾರೋ ಅವರು ಅನುಭವಿಸುತ್ತಾರೆ ಎಂದರು.
ನಾನು ಏನಾದರೂ ತಪ್ಪು ಮಾಡಿದ್ದರೆ ದೇವರು ದೊಡ್ಡವನಿದ್ದಾನೆ. ಅವನು ನೋಡಿಕೊಳ್ಳುತ್ತಾನೆ. ಆ ದೇವರ ದಯೆಯಿಂದ, ನನ್ನ ಜನರ ಆಶೀರ್ವಾದ ಮತ್ತು ಪ್ರಾಮಾಣಿಕ ಕೆಲಸ ಮಾಡಿರುವುದರಿಂದ, ಬಡವರ ಕಣ್ಣು ಒರೆಸಿರುವದರಿಂದ ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಅವರನ್ನು ದೇವರು ನೋಡಿಕೊಳ್ಳುತ್ತಾನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ
Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್
Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ
Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ