ಆದರ್ಶ ಬದುಕು ಚಿರಸ್ಥಾಯಿ


Team Udayavani, Aug 16, 2021, 3:07 PM IST

Udayavani Chithradurga Hosadurga News

ಹೊಸದುರ್ಗ: ಮಾನವ ಹುಟ್ಟಿದ ಮೇಲೆ ಸಾಯುವುದು ಖಚಿತ. ಸಾವಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆದರ್ಶ ಜೀವನದ ಮೂಲಕ ಸತ್ತ ಮೇಲೂ ಬದುಕಲು ಸಾಧ್ಯವಿದೆ. ಇದನ್ನು ಅರಿಯದ ಕೆಲವರು ತಮಗೆ ಸಾವೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದಾರೆ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾಣೇಹಳ್ಳಿಯ ತರಳಬಾಳು ಜಗದ್ಗುರು ಶಾಖಾ ಮಠದಿಂದ ಆಯೋಜಿಸಿರುವ “ಮತ್ತೆ ಕಲ್ಯಾಣ’ ಕಾರ್ಯಕ್ರಮದ 15ನೇ ದಿನದ ಆನ್‌ಲೈನ್‌ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಸತ್ಯವನ್ನು ಸುಳ್ಳೆಂದು, ಸುಳ್ಳನ್ನು ಸತ್ಯವೆಂದು ಬಿಂಬಿಸುವ ಹರಸಾಹಸ ಮಾಡುವವರೂ ಇದ್ದಾರೆ. ಹೊನ್ನು, ಹೆಣ್ಣು, ಮಣ್ಣುಗಳನ್ನು ಬಯಸಿ ಏನೆಲ್ಲ ಅನಾಹುತ ಮಾಡಿಕೊಳ್ಳುತ್ತಾರೆ.

ಇಂಥವರನ್ನು ಕಂಡು ಉರಿಲಿಂಗ ಪೆದ್ದಿಗಳು “ಅಯ್ಯೋ ಅಯ್ಯೋ ಕೆಡದಿರಿ’ ಎಂದು ಎಚ್ಚರಿಸುವುದರ ಜೊತೆಗೆ ಕಾಯಕದಿಂದ ಬಂದ ಆದಾಯವನ್ನು ಗುರು-ಲಿಂಗ-ದಾಸೋಹಕ್ಕೆ ಅರ್ಪಣೆ ಮಾಡಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದಬ ಸಂದೇಶ ಸಾರಿದ್ದಾರೆ ಎಂದರು.

ಉರಿಲಿಂಗ ಪೆದ್ದಿ ಕಳ್ಳತನ ಮಾಡಿ, ಕಟ್ಟಿಗೆ ಕಡಿದು ಜೀವನ ನಡೆಸುತ್ತಿದ್ದ ಕೆಳ ವರ್ಗದ ವ್ಯಕ್ತಿ. ಪೆದ್ದಿ ಎಂದರೆ ಮೂರ್ಖ. ಪತ್ನಿ ಕಾಳವ್ವೆ. ಒಮ್ಮೆ ಶ್ರೀಮಂತನೊಬ್ಬನ ಮನೆಗೆ ಕಳ್ಳತನಕ್ಕೆ ಹೋದಾಗ ಅಲ್ಲಿ ಉರಿಲಿಂಗದೇವರು ಲಿಂಗದೀಕ್ಷೆ ನೀಡುತ್ತಿರುವುದನ್ನು ಕಾಣುತ್ತಾನೆ. ಇದನ್ನು ಕಂಡ ಪೆದ್ದಿಯ ಮನಃಪರಿವರ್ತನೆಯಾಗಿ ತನಗೂ ದೀಕ್ಷೆ ಕರುಣಿಸುವಂತೆ ಪ್ರಾರ್ಥಿಸುತ್ತಾನೆ.

ಅವನ ಕಾಟ ತಪ್ಪಿಸಿಕೊಳ್ಳಲು ಒಂದು ಕಲ್ಲನ್ನು ಎಸೆದು ತೆಗೆದುಕೊಂಡು ಹೋಗು ಎನ್ನುತ್ತಾರೆ. ಪೆದ್ದಿ ಅದನ್ನೇ ಲಿಂಗವೆಂದು ಭಾವಿಸಿ ನಿಷ್ಠೆಯಿಂದ ಪೂಜಿಸುತ್ತಾನೆ. ಇದನ್ನು ಗಮನಿಸಿದ ಉರಿಲಿಂಗದೇವರು ತಮ್ಮ ಶಿಷ್ಯನನ್ನಾಗಿ ಮಾಡಿಕೊಂಡು ಸಂಸ್ಕೃತ, ವೇದಗಳನ್ನು ಕಲಿಸುವುದಲ್ಲದೆ ಕೊನೆಗೆ ತಮ್ಮ ನಂತರ ಮಠಕ್ಕೆ ಪೀಠಾಧಿ ಕಾರಿಗಳನ್ನಾಗಿ ನೇಮಿಸುತ್ತಾರೆ.

ತಳ ಸಮುದಾಯದ ಕಳ್ಳನೊಬ್ಬ ಸಂಸ್ಕಾರದಿಂದ ಬದಲಾಗಿ ಪೀಠಾ ಧಿಪತಿಯಾದುದು ಬೆರಗುಗೊಳಿಸುವ ಸಂಗತಿ ಎಂದು ತಿಳಿಸಿದರು. ಮಹದೇವ ಬಣಕಾರರು “ಉರಿಲಿಂಗ ಪೆದ್ದಿ’ ಎನ್ನುವ ನಾಟಕದಲ್ಲಿ ಉರಿಲಿಂಗ ಪೆದ್ದಿಯ ಬಗ್ಗೆ ಸಮಗ್ರವಾಗಿ ರೋಚಕವಾಗಿ ಚಿತ್ರಿಸಿದ್ದಾರೆ. ಈ ನಾಟಕವನ್ನು ಶಿವಕುಮಾರ ಕಲಾಸಂಘ, ಶಿವಸಂಚಾರ ನೂರಾರು ಯಶಸ್ವಿ ಪ್ರಯೋಗಗಳನ್ನು ಪ್ರದರ್ಶಿಸಿದೆ.

ಅಲ್ಲದೆ ಇದು ವಿಶ್ವವಿದ್ಯಾಲಯದ ಪಠ್ಯಪುಸ್ತಕವಾಗಿಯೂ ಇತ್ತು. ಇಂಥ ಶರಣನ ಬಗ್ಗೆ ಜನ ಹೆಚ್ಚು ಹೆಚ್ಚು ತಿಳಿದುಕೊಂಡು ಅವರ ತತ್ವ ಸಿದ್ಧಾಂತಗಳನ್ನು ಆಚರಣೆಗೆ ತರುವಂತಾಗಲಿ ಎಂದು ಆಶಿಸಿದರು. ಉಪನ್ಯಾಸ ಮಾಲಿಕೆಯಲ್ಲಿ “ಉರಿಲಿಂಗಪೆದ್ದಿ’ ವಿಷಯದ ಕುರಿತಂತೆ ಲೇಖಕಿ ಬೀರೂರಿನ ಗೌರಿ ಪ್ರಸನ್ನ ಮಾತನಾಡಿ, ಮಾನವ ಸಮಾಜ ವೈವಿಧ್ಯತೆಯಿಂದ ಕೂಡಿದೆ.

ಯಾವುದೇ ವ್ಯಕ್ತಿಯನ್ನು ಹುಟ್ಟಿನಿಂದ ಕನಿಷ್ಠ, ಶ್ರೇಷ್ಠ ಎಂದು ಹೇಳಲಾಗದು. ಒಬ್ಬ ಕಳ್ಳ ಮಹಾನ್‌ ಶಿವಶರಣನೂ ಆಗಬಹುದು ಎನ್ನುವುದಕ್ಕೆ ಉದಾಹರಣೆ 12ನೇ ಶತಮಾನದಲ್ಲಿ ಕಲ್ಯಾಣದಲ್ಲಿದ್ದ ಉರಿಲಿಂಗ ಪೆದ್ದಿಯ ಬದುಕು-ಬರಹಗಳೇ ಸಾಕ್ಷಿ ಎಂದರು.

ಉರಿಲಿಂಗ ಪೆದ್ದಿಯ ಮೂಲ ಹೆಸರು ಪೆದ್ದಣ್ಣ. ಆಂಧ್ರಪ್ರದೇಶದಿಂದ ಬಂದವ. ಕಳ್ಳತನವೇ ಇವನ ಕೆಲಸವಾಗಿತ್ತು. ಇವರ 363 ವಚನಗಳು ಲಭ್ಯವಿವೆ. ಒಬ್ಬ ಕಳ್ಳ ಶರಣನಾಗಿ, ಜ್ಞಾನಿಯಾಗಿ, ವಚನಕಾರನಾಗಿ, ಗುರುವಾದದ್ದು ಜಗತ್ತಿನಲ್ಲಿ ಎಂದೂ ಕೇಳರಿಯದ ಸಂಗತಿ ಎಂದು ಹೇಳಿದರು.

ಬೆಂಗಳೂರಿನ ಮೈಕೋ ಮಂಜು ಸ್ವಾಗತಿಸಿದರು. ಶಿವಸಂಚಾರದ ಕೆ. ಜ್ಯೋತಿ, ಕೆ ದಾûಾಯಣಿ, ಎಚ್‌.ಎಸ್‌. ನಾಗರಾಜ್‌ ವಚನಗೀತೆಗಳನ್ನು ಹಾಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ಹಾಗೂ ಸಾಣೇಹಳ್ಳಿಯ ಭರತನಾಟ್ಯ ಶಾಲೆಯ ಸುಪ್ರಭೆ ಡಿ.ಎಸ್‌ ಹಾಗೂ ಮುಕ್ತ ಡಿ.ಜೆ. ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.