ತಾಲಿಬಾನ್ ಹಿಡಿತ: ಕಾಬೂಲ್ ನಲ್ಲಿದ್ದ ಭಾರತದ ರಾಯಭಾರಿ, ಅಧಿಕಾರಿಗಳು ತಾಯ್ನಾಡಿಗೆ ವಾಪಸ್
ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿದೆ.
Team Udayavani, Aug 17, 2021, 12:32 PM IST
ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ಅನ್ನು ವಶಪಡಿಸಿಕೊಳ್ಳುತ್ತಲೇ ತಾಲಿಬಾನ್ ಉಗ್ರ ಸಂಘಟನೆ ಅಫ್ಘಾನಿಸ್ತಾನದಲ್ಲಿನ ಯುದ್ಧ ಕೊನೆಗೊಂಡಿದೆ ಎಂದು ಘೋಷಿಸಿದೆ. ಮತ್ತೊಂದೆಡೆ ಅಫ್ಘಾನಿಸ್ತಾನದಲ್ಲಿರುವ ಭಾರತೀಯ ರಾಯಭಾರಿ ಸೇರಿದಂತೆ ಇತರ 120 ಅಧಿಕಾರಿಗಳನ್ನು ಭಾರತೀಯ ವಾಯುಪಡೆ ಮೂಲಕ ಗುಜರಾತ್ ನ ಜಾಮ್ ನಗರಕ್ಕೆ ಮಂಗಳವಾರ (ಆಗಸ್ಟ್ 17) ಬಂದಿಳಿದಿದ್ದಾರೆ.
ಇದನ್ನೂ ಓದಿ:ಮಂಗಳೂರು: ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ಬೃಹತ್ ತೆಂಗಿನ ಮರ!
ಅಫ್ಘಾನಿಸ್ತಾನದಲ್ಲಿನ ಅರಾಜಕತೆ ಸ್ಥಿತಿಯ ಹಿನ್ನೆಲೆಯಲ್ಲಿ ಕಾಬೂಲ್ ನಲ್ಲಿರುವ ನಮ್ಮ ರಾಯಭಾರಿ ಹಾಗೂ ರಾಯಭಾರ ಕಚೇರಿಯ ಸಿಬಂದಿಗಳನ್ನು ಕೂಡಲೇ ಭಾರತಕ್ಕೆ ವಾಯುಪಡೆ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾ ಅರಿಂದಾಮ್ ಬಾಗ್ಚಿ ತಿಳಿಸಿದ್ದರು.
ಇಂದು ಬೆಳಗ್ಗೆ ಭಾರತೀಯ ವಾಯುಪಡೆಯ ಸಿ17 ವಿಮಾನದಲ್ಲಿ ಕಾಬೂಲ್ ನಲ್ಲಿದ್ದ ರಾಯಭಾರಿ ಹಾಗೂ ಇತರೆ 120ಕ್ಕೂ ಅಧಿಕ ಭಾರತೀಯ ಅಧಿಕಾರಿಗಳನ್ನು ಗುಜರಾತ್ ಗೆ ಕರೆ ತರಲಾಗಿದ್ದು, ಇನ್ನುಳಿದವರನ್ನು ಮಂಗಳವಾರ ಕರೆತರಲಾಗುವುದು ಎಂದು ವರದಿ ವಿವರಿಸಿದೆ.
ಅಫ್ಘಾನಿಸ್ತಾನ ಉಗ್ರರ ಕೈವಶವಾಗುತ್ತಲೇ ಅಮೆರಿಕದಲ್ಲಿ ಬೈಡೆನ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರಗಳು ಶುರುವಾಗಿದೆ. ಯುದ್ಧಗ್ರಸ್ತ ರಾಷ್ಟ್ರದಿಂದ ಸೇನೆಯನ್ನು ವಾಪಸ್ ಪಡೆಯುವ ಮೂಲಕ ಜಾಗತಿಕ ಮಟ್ಟದಲ್ಲಿ ದೇಶದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ