ಸಿದ್ದು, ಡಿಕೆಶಿ ಎದುರೇ ಕಾರ್ಯಕರ್ತರ ಹೈಡ್ರಾಮಾ; ಕೋವಿಡ್ ನಿಯಮಕ್ಕಿಲ್ಲ ಬೆಲೆ
Team Udayavani, Aug 17, 2021, 1:29 PM IST
ರಾಯಚೂರು: ನಗರದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ವಿಭಾಗೀಯ ಸಭೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎದುರು ಕಾರ್ಯಕರ್ತರು ಅತಿರೇಕದ ಅಭಿಮಾನ ತೋರುವ ಮೂಲಕ ಮುಖಂಡರಿಗೆ ಮುಜುಗುರ ಉಂಟು ಮಾಡಿದರು.
ಕಾಂಗ್ರೆಸ್ ಕಚೇರಿಗೆ ಮುಖಂಡರು ಬರುತ್ತಿದ್ದಂತೆ ಜಮಾಯಿಸಿದ ಕಾರ್ಯಕರ್ತರು ಕೋವಿಡ್ ನಿಯಮಗಳನ್ನು ಸಂಪೂರ್ಣ ಗಾಳಿಗೆ ತೂರಿ ಘೋಷಣೆಗಳನ್ನು ಕೂಗಿದರು. ಜಿಲ್ಲಾ ಮುಖಂಡರಿಗೆ ಜೋರಾಗಿ ಘೋಷಣೆ ಕೂಗಿದ್ದಲ್ಲದೇ ಮುಖಂಡರನ್ನು ಮೇಲೆತ್ತಿ ಕುಣಿದು ಕುಪ್ಪಳಿಸಿದರು. ಇದರಿಂದ ರಾಜ್ಯಮಟ್ಟದ ನಾಯಕರಿಗೆ ಇರಿಸುಮುರಿಸು ಉಂಟಾಯಿತು.
ಇದನ್ನೂ ಓದಿ:ಕೋವಿಡ್ ನಿಂದ ಗುಣಮುಖರಾದವರು ಸ್ವಯಂಪ್ರೇರಿತರಾಗಿ ಕ್ಷಯ ರೋಗ ತಪಾಸಣೆ ಮಾಡಿಸಿ: ಡಾ.ಸುಧಾಕರ್
ಕೋವಿಡ್ 3ನೇ ಅಲೆ ನಿಯಂತ್ರಣದ ಬಗ್ಗೆ ಸರ್ಕಾರದ ವಿರುದ್ಧ ಟೀಕೆ ಮಾಡುವ ಕಾಂಗ್ರೆಸ್ ನಾಯಕರು ಮಾತ್ರ ಕೋವಿಡ್ ಬಗ್ಗೆ ಕಿಂಚಿತ್ತೂ ಯೋಚಿಸದಿರುವುದು ವಿಪರ್ಯಾಸ. ಬಹುತೇಕ ಕಾರ್ಯಕರ್ತರು ಮಾಸ್ಕ್ ಹಾಕಿರಲಿಲ್ಲ. ಅಲ್ಲದೇ, ಸುಮಾರು 10 ನಿಮಿಷಗಳ ಕಾಲ ಒಂದೇ ಸಮನೆ ಚೀರಾಟ ನಡೆಸಿದ್ದು ಕೂಡ ನೆರೆದವರ ಬೇಸರಕ್ಕೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ