ಸಂಘದ ಗತವೈಭವ ಮತ್ತೆ ಮರುಕಳಿಸಲು ಸದಸ್ಯರು ಕೈಜೋಡಿಸಿ: ಅಡೊಕೇಟ್‌ ಜಗದೀಶ್‌ ಹೆಗ್ಡೆ

ಮಲಾಡ್‌ ಕನ್ನಡ ಸಂಘದ ನೂತನ ಕಾರ್ಯಕಾರಿ ಸಮಿತಿಯ ಸಾಮಾನ್ಯ ಸಭೆ

Team Udayavani, Aug 17, 2021, 1:29 PM IST

ಸಂಘದ ಗತವೈಭವ ಮತ್ತೆ ಮರುಕಳಿಸಲು ಸದಸ್ಯರು ಕೈಜೋಡಿಸಿ: ಅಡೊಕೇಟ್‌ ಜಗದೀಶ್‌ ಹೆಗ್ಡೆ

ಮಲಾಡ್‌: ಕ್ರಿಯಾಶೀಲ ಹಾಗೂ ಸೃಜನಶೀಲ ವ್ಯಕ್ತಿತ್ವದ ಅಧ್ಯಕ್ಷ ಹರೀಶ್‌ ಎನ್‌. ಶೆಟ್ಟಿಯವರ ಸುದೀರ್ಘ‌ ಅಧ್ಯಕ್ಷತೆಯಲ್ಲಿ ವಿಶಾಲ ಮಲಾಡ್‌ ಪ್ರದೇಶದಲ್ಲಿ ಸಾಂಸ್ಕೃತಿಕ ರಾಯಭಾರಿಯಾಗಿ ಕಾರ್ಯವೆಸಗುತ್ತಿದ್ದ ಮಲಾಡ್‌ ಕನ್ನಡ ಸಂಘದ ಕಾರ್ಯಕ್ರಮಗಳ ಗತವೈಭವವನ್ನು ಮರು ಅನುಷ್ಠಾನಗೊಳಿಸುವ ಶತಪ್ರಯತ್ನಕ್ಕೆ ಸದಸ್ಯರೆಲ್ಲರು ಮತ್ತೂಮ್ಮೆ ನಿಸ್ವಾರ್ಥ ಸೇವೆಯಿಂದ ಕೈಜೋಡಿಸಬೇಕು.

ಉಪನಗರದಲ್ಲಿ ಅತೀ ಹೆಚ್ಚು ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿರುವ ಈ ಸಂಸ್ಥೆಯ ಸಾಂಸ್ಕೃತಿಕ, ಸಾಮಾಜಿಕ ವೈಭವವನ್ನು ಮರು ಸ್ಥಾಪಿಸಿ ಪರಿಸರದ ಕನ್ನಡಿಗರಿಗೆ ಮತ್ತೊಮ್ಮೆ ವೈವಿಧ್ಯ ಕಾರ್ಯಕ್ರಮಗಳನ್ನು ನೀಡುವ ಸಂಸ್ಥೆಯನ್ನಾಗಿ ಬೆಳೆಸಬೇಕು ಎಂದು ಮಲಾಡ್‌ ಕನ್ನಡ ಸಂಘದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯವಾದಿ ಜಗದೀಶ್‌ ಹೆಗ್ಡೆ ತಿಳಿಸಿದರು.

ಆ. 8ರಂದು ಮಲಾಡ್‌ ಕನ್ನಡ ಸಂಘದ ಯುನಿಟಿ ಅಪಾರ್ಟ್‌ಮೆಂಟ್‌ನಲ್ಲಿರುವ ಮಲಾಡ್‌ ಕನ್ನಡ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘ ಯಾವತ್ತೂ ಏಕವ್ಯಕ್ತಿಯಿಂದ ನಡೆಯಲು ಸಾಧ್ಯವಿಲ್ಲ. ಇಲ್ಲಿ ನಿಸ್ವಾರ್ಥ ಸಾಂಘಿಕತೆ ಮನೋಭಾವ ಇರಬೇಕು. ಬದಲಾಗುತ್ತಿರುವ ಕಾಲ ಘಟ್ಟದಲ್ಲಿ ಸಂಘ ದಲ್ಲಿ ಕೆಲವೊಂದು ಬದಲಾವಣೆಗಳು ಅನಿವಾರ್ಯವಾಗಿವೆ. ದೊಡ್ಡ ಯೋಜನೆಯ ಕಾರ್ಯ ಕ್ರಮಗಳನ್ನು ನಡೆಸಲು ಅಸಾಧ್ಯವಾದ ಇಂದಿನ ಪರಿಸ್ಥಿತಿಯಲ್ಲಿ ಸಣ್ಣ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಮಲಾಡ್‌ ಪರಿಸರದಲ್ಲಿ ಮತ್ತೊಮ್ಮೆ ಮಲಾಡ್‌ ಕನ್ನಡ ಸಂಘವನ್ನು ತುಳು-ಕನ್ನಡಿಗರ ಆಕರ್ಷಣೆಯ ವೇದಿಕೆಯನ್ನಾಗಿ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ.

ಇದನ್ನೂ ಓದಿ:ಮನೆಯಲ್ಲೇ ನಕಲಿ ನೋಟು ಮುದ್ರಿಸಿ ಚಲಾಯಿಸುತ್ತಿದ್ದ ಭೂಪ !

ಪ್ರಸ್ತುತ ಕೋವಿಡ್‌ ಸಮಯದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಕಾರ್ಯಕ್ರಮ ನಡೆಸುವ ಜವಾಬ್ದಾರಿಯಿದೆ. ಆ ಮೂಲಕ ನಾವು ಸಾಂಘಿಕವಾಗಿ ಜವಾಬ್ದಾರಿಯುತವಾಗಿ ಮುಂದುವರಿಯ ಬೇಕಾಗಿದೆ. ಸದಸ್ಯರೆಲ್ಲರೂ ಸಾಮೂಹಿಕವಾಗಿ ಅಥವಾ ವೈಯಕ್ತಿಕವಾಗಿ ಸಲಹೆ ನೀಡಿ ಹರೀಶಣ್ಣನ ಸೇವೆಗಿಂತ ಹೆಚ್ಚಿನ ಮಟ್ಟದಲ್ಲಿ ಸಂಘವನ್ನು ಬೆಳೆಸುವ ಉದ್ದೇಶ ಹೊಂದುವ ಎಂದು ತಿಳಿಸಿ, ಕಾನೂನು ಸಲಹೆಗಾರನಾಗಿ ಸಂಘದ ಸದಸ್ಯರಿಗೆ ಯಾವುದೇ ಸಂದರ್ಭದಲ್ಲಿ ಧರ್ಮಾರ್ಥವಾಗಿ ಕಾನೂನು ಸಲಹೆ ನೀಡಲು ಸದಾ ಸಿದ್ಧ ಎಂದು ಹೇಳಿದರು .

ಗೌರವ ಕಾರ್ಯದರ್ಶಿ ಶಂಕರ್‌ ಡಿ. ಪೂಜಾರಿ ಮಾತನಾಡಿ, ಸುಮಾರು ಇಪ್ಪತ್ತು ವರ್ಷಗಳ ಹಿಂದೆ ಮಾಲ್ವಾಣಿ ಪರಿಸರದಲ್ಲಿ ಬೆಳೆದ ಈ ಸಂಸ್ಥೆಗೆ
ಕೋವಿಡ್‌ ಮಹಾಮಾರಿಯಿಂದ ಸ್ಥಗಿತಗೊಂಡಿದ್ದ ಕಾರ್ಯಕ್ರಮಗಳಿಗೆ ಮತ್ತೆ ಕಾಯಕಲ್ಪ ದೊರೆಯ  ಬೇಕಾಗಿದೆ. ಆ ನಿಟ್ಟಿನಲ್ಲಿ ನಾವೆಲ್ಲ ಒಗ್ಗಟ್ಟಾಗಿ ಮತ್ತೆ ಕಾರ್ಯೋನ್ಮುಖರಾಗಬೇಕು. ಮಲಾಡ್‌ ಪರಿಸರದಲ್ಲಿ ವೈವಿಧ್ಯ ಕಾರ್ಯಕ್ರಮಗಳನ್ನು ನೀಡುತ್ತಾ ಹೆಸರು ವಾಸಿ ಯಾದ ಸಂಸ್ಥೆಗೆ ನಾವೆಲ್ಲ ಹಿಂದಿನಂತೆ ನಿಸ್ವಾರ್ಥ ಸೇವೆಯಿಂದ ಸೇವೆ ಸಲ್ಲಿಸಬೇಕಾಗಿದೆ. ಪರಿಸರದಲ್ಲಿ ಮಲಾಡ್‌ ಕನ್ನಡ ಸಂಘದ ಹೆಸರನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಸಾಂಘಿಕ ಚಿಂತನೆ ನಮ್ಮಲ್ಲಿ ಬೆಳೆಯಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಿರಿಯ ಸದಸ್ಯರಾದ ಬಾಬು ಶೆಟ್ಟಿ, ಸಾಧು ಡಿ. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸಂತೋಷ್‌ ಪೂಜಾರಿ, ಮಾಜಿ ಯುವ ವಿಭಾಗದ ಕಾರ್ಯಾಧ್ಯಕ್ಷ ಸೂರಪ್ಪ ಕುಂದರ್‌ ಅವರು ಸಂಘದ ಮುಂದಿನ ಕಾರ್ಯಯೋಜನೆಯ ಬಗ್ಗೆ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಮಾಸಿಕ ಲೆಕ್ಕಪತ್ರ, ವರದಿ ಮಂಡಿಸಲಾಯಿತು. ಸಂಘದ ಮುಖಾಂತರ ಶೀಘ್ರದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ
ಸಭೆಯಲ್ಲಿ ಸುದೀರ್ಘ‌ವಾಗಿ ಚರ್ಚಿಸಲಾಯಿತು. ಗೌರವ ಕೋಶಾಧಿಕಾರಿ ಪ್ರಕಾಶ್‌ ಎಸ್‌. ಶೆಟ್ಟಿ, ಜತೆ ಕಾರ್ಯದರ್ಶಿ ಅನಿಲ್‌ ಎಸ್‌ ಪೂಜಾರಿ, ಜತೆ ಕೋಶಾಧಿಕಾರಿ ಶಂಕರ್‌ ಆರ್‌. ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಕಾರ್ಯದರ್ಶಿ ಶಾಂಭವಿ ಬಿ. ಶೆಟ್ಟಿ, ಯುವ ವಿಭಾಗದ ಕಾರ್ಯದರ್ಶಿ ಸುಂದರ ಪೂಜಾರಿ, ಉಪಸಮಿತಿಯ ಸದಸ್ಯರು ಸಲಹೆ-ಸೂಚನೆಗಳನ್ನು ನೀಡಿದರು.

ಟಾಪ್ ನ್ಯೂಸ್

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

ಹುಚ್ಚು ರಾಜಕಾರಣಕ್ಕೆ ಸಿದ್ದು ದೊಡ್ಡ ಬೆಲೆ ತೆರಬೇಕಾದೀತು: ಡಿವಿಎಸ್‌

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

Prajwal Revanna ಮಾಜಿ ಕಾರು ಚಾಲಕ ಎಲ್ಲಿದ್ದಾನೆ ಎಂದು ಎಸ್‌ಐಟಿಗೆ ಗೊತ್ತು: ಪರಮೇಶ್ವರ್‌

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

CID ಕಚೇರಿಯಲ್ಲಿ ನಿದ್ದೆ ಇಲ್ಲದೆ ರಾತ್ರಿ ಕಳೆದ ರೇವಣ್ಣ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.