ಇದೊಂದು ಉಗ್ರಗಾಮಿ ಸಂಘಟನೆ; ತಾಲಿಬಾನ್ ಫೇಸ್ ಬುಕ್ ಖಾತೆ ರದ್ದು: ಎಫ್ ಬಿ ಸಂಸ್ಥೆ

ತಾಲಿಬಾನ್ ಬಂಡುಕೋರರು ಕ್ಷಿಪ್ರವಾಗಿ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಬಿಕ್ಕಟ್ಟಿಗೆ ಕಾರಣವಾಗಿತ್ತು.

Team Udayavani, Aug 17, 2021, 3:46 PM IST

ಇದೊಂದು ಉಗ್ರಗಾಮಿ ಸಂಘಟನೆ; ತಾಲಿಬಾನ್ ಫೇಸ್ ಬುಕ್ ಖಾತೆ ರದ್ದು: ಎಫ್ ಬಿ ಸಂಸ್ಥೆ

ಕಾಬೂಲ್: ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡ ಬೆನ್ನಲ್ಲೇ ಹಲವಾರು ದೇಶಗಳು ಎಚ್ಚರಿಕೆಯ ಪ್ರತಿಕ್ರಿಯೆ ವ್ಯಕ್ತಪಡಿಸಿದ ನಂತರ ಫೇಸ್ ಬುಕ್ ಕೂಡಾ ತಾಲಿಬಾನ್ ಉಗ್ರಗಾಮಿ ಸಂಘಟನೆಯನ್ನು ನಿಷೇಧಿಸಿದ್ದು, ತಮ್ಮ ಫ್ಲ್ಯಾಟ್ ಫಾರಂನಲ್ಲಿ ಉಗ್ರಗಾಮಿಗಳನ್ನು ಬೆಂಬಲಿಸುವ ಎಲ್ಲಾ ವಿಧದ ಕಂಟೆಂಟ್ ಗಳನ್ನು ತೆಗೆದು ಹಾಕಲಾಗುವುದು ಮತ್ತು ಫೇಸ್ ಬುಕ್ ಖಾತೆಯನ್ನು ರದ್ದುಗೊಳಿಸಲಾಗುವುದು ಎಂದು ಮಂಗಳವಾರ(ಆಗಸ್ಟ್ 17) ಘೋಷಿಸಿದೆ.

ಇದನ್ನೂ ಓದಿ:ಅಫ್ಘಾನ್ ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧವಾಗಿದೆ: ಪ್ರಹ್ಲಾದ ಜೋಶಿ

ತಾಲಿಬಾನ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಪರಿಗಣಿಸುವುದಾಗಿ ತಿಳಿಸಿರುವ ಫೇಸ್ ಬುಕ್, ಸಂಘಟನೆಗೆ ಸಂಬಂಧಪಟ್ಟ ಎಲ್ಲಾ ಬಗೆಯ ಮಾಹಿತಿ, ಕಂಟೆಂಟ್ ಗಳನ್ನು ತಜ್ಞರ ತಂಡ ತೆಗೆದುಹಾಕಲಿದೆ ಎಂದು ತಿಳಿಸಿದೆ.

ಕಳೆದ ಕೆಲವು ವರ್ಷಗಳಿಂದ ತಾಲಿಬಾನ್ ಸಾಮಾಜಿಕ ಜಾಲತಾಣ ಫೇಸ್ ಬುಕ್ ಉಪಯೋಗಿಸಿಕೊಂಡು  ತಮ್ಮ ಸಂದೇಶಗಳನ್ನು ಪ್ರಸಾರ ಮಾಡುತ್ತಿತ್ತು ಎಂದು ಹೇಳಿದೆ. ತಾಲಿಬಾನ್ ಬಂಡುಕೋರರು ಕ್ಷಿಪ್ರವಾಗಿ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ತೆಗೆದುಕೊಂಡ ನಂತರ ಬಿಕ್ಕಟ್ಟಿಗೆ ಕಾರಣವಾಗಿತ್ತು. ತಾಲಿಬಾನ್ ಅನ್ನು ಉಗ್ರಗಾಮಿ ಸಂಘಟನೆ ಎಂದು ಅಮೆರಿಕ ಘೋಷಿಸಿದೆ. ನಾವು ಕೂಡಾ ಅಪಾಯಕಾರಿ ಸಂಘಟನೆಯ ನಿಮಯಗಳನ್ನು ಹರಡದಂತೆ ತಡೆಗಟ್ಟಲು ನಿರ್ಬಂಧ ವಿಧಿಸಿರುವುದಾಗಿ ಫೇಸ್ ಬುಕ್ ಸಂಸ್ಥೆ ತಿಳಿಸಿದೆ.

ನಮ್ಮಲ್ಲಿಯೂ ಅಫ್ಘಾನಿಸ್ತಾನದ ಪರಿಣತರ ತಂಡವಿದ್ದು, ಅವರು ಅಫ್ಘಾನ್ ನ ಡಾರಿ ಮತ್ತು ಪಾಸ್ಟೋ ಭಾಷೆಯ ಬಗ್ಗೆ ಅನುಭವ ಹೊಂದಿದ್ದು, ಸ್ಥಳೀಯ ಭಾಷೆಯ ಬಗ್ಗೆ ಅವರ ನೆರವನ್ನು ಪಡೆದು ಫೇಸ್ ಬುಕ್ ನಲ್ಲಿರುವ ತಾಲಿಬಾನ್ ಉಗ್ರಗಾಮಿ ಸಂಘಟನೆಯ ಕಂಟೆಂಟ್ ಗಳನ್ನು ತೆಗೆದುಹಾಕಲಾಗುವುದು ಎಂದು ಫೇಸ್ ಬುಕ್ ಸಂಸ್ಥೆ ಮಾಹಿತಿ ನೀಡಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.