ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಮ: ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ


Team Udayavani, Aug 17, 2021, 5:33 PM IST

ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಮ: ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ

ತುಮಕೂರು: ಜಿಲ್ಲೆಯಲ್ಲಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ಬಿಡುಗಡೆಯಾಗುವ ಅನುದಾನವನ್ನು ಕಳೆದ ಸಾಲಿನಿಂದ ಬಾಕಿ ಉಳಿದು ಮುಂದುವರಿದಿರುವ ಕಾಮಗಾರಿ ಪೂರ್ಣಗೊಳಿಸಲು ಆದ್ಯತೆ ನೀಡಬೇಕು. ಉಳಿದ ಅನುದಾನದಲ್ಲಿ ಹೊಸ ಕಾಮಗಾರಿ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಡಿಪಿಯಡಿ 61 ಮುಂದುವರಿದ ಕಾಮಗಾರಿಗಳಿದ್ದು, ಸದರಿ ಕಾಮಗಾರಿ ಪೂರ್ಣಗೊಳಿಸದಿರಲು ಸಕಾರಣ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಒಂದೇ ಕಾಮಗಾರಿಯನ್ನು ಗ್ರಾಮ ಪಂಚಾಯಿತಿಯಿಂದ ಹಾಗೂ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯಿಂದ ಕೈಗೆತ್ತಿಕೊಳ್ಳದಂತೆ ಎಚರಿಕೆ ‌c ವಹಿಸಬೇಕು. ಹೊಸ ಕೊಳವೆ ಬಾವಿ ಕೊರೆಯುವ ಸಂಖ್ಯೆ ಕಡಿಮೆ ಮಾಡಿ ಹಳೆಯ ಕೊಳವೆ ಬಾವಿಗಳನ್ನು ಪುನಶ್ಚೇತನ ಗೊಳಿಸಬೇಕೆಂದು ಸೂಚನೆ ನೀಡಿದರು.

ಇದನ್ನೂ ಓದಿ:ತಾಲಿಬಾನ್ ಕ್ರೌರ್ಯಕ್ಕೆ ಬೆಚ್ಚಿದ ಅಫ್ಗಾನ್ : ಭಯದಲ್ಲಿ ಬೆಂದು ಹೋಗುತ್ತಿವೆ ಹೆಣ್ಣು ಜೀವಗಳು  

ಎಂಜನಿಯರ್‌ ಕಾರ್ಯಪ್ರವೃತ್ತರಾಗಲಿ:
ಕೆಟ್ಟು ಹೋದ ಪಂಪು-ಮೋಟಾರ್‌ಗಳನ್ನು ಸರಿಪಡಿಸಿ ಮರುಬಳಕೆ ಮಾಡುವಂತೆ ಕ್ರಮ ಕೈಗೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸಂಬಂಧಿಸಿದಂತೆ ಸಾರ್ವಜನಿಕ ದೂರುಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲವೆಂದು ಸಾಕಷ್ಟು ದೂರುಗಳು ಬರುತ್ತಿದ್ದು, ಕುಡಿಯುವ ನೀರಿಗೆ ಸಂಬಂಧಿಸಿದ ದೂರು ಸ್ವೀಕರಿಸಿದ ಕೂಡಲೇ ಎಂಜನಿಯರ್‌ಗಳು ಕಾರ್ಯ ಪ್ರವೃತ್ತರಾಗಬೇಕೆಂದು ತಿಳಿಸಿದರು.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಕೆ. ಮುತ್ತಪ್ಪ ಮಾತನಾಡಿ, ಲೆಕ್ಕ ಶಿರ್ಷಿಕೆ 4215ರ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ ಜಿಲ್ಲೆಯ ಕುಣಿಗಲ್‌ ತಾಲೂಕಿಗೆ 3.89 ಕೋಟಿ ರೂ., ಮಧುಗಿರಿ-4.79 ಕೋಟಿ ರೂ., ಗುಬ್ಬಿ- 5.97 ಕೋಟಿ ರೂ., ಶಿರಾ-4.97 ಕೋಟಿ ರೂ., ಪಾವಗಡ-5.16ಕೋಟಿರೂ., ತುರುವೇಕೆರೆ- 2.58ಕೋಟಿರೂ., ಕೊರಟಗೆರೆ- 3.13ಕೋಟಿ ರೂ. ಹಾಗೂ ಚಿಕ್ಕನಾಯಕನಹಳ್ಳಿ-3.13 ಕೋಟಿ ರೂ. ಸೇರಿದಂತೆ ಒಟ್ಟು33.65 ಕೋಟಿ ರೂ.ಗಳಿಗೆ ಕ್ರಿಯಾಯೋಜನೆ ತಯಾರಿಸಲು ಸಲ್ಲಿಸಲಾಗುವುದು ಎಂದರು.

744 ಹೊಸ ಕಾಮಗಾರಿ: ಪ್ರಸಕ್ತ ಸಾಲಿನಲ್ಲಿ ಎಸ್‌ಡಿಪಿಯಡಿ 61 ಮುಂದುವರಿದ ಕಾಮಗಾರಿ, 9 ವಿದ್ಯುತ್‌ ಸಂಪರ್ಕ, 6 ಬರ ಕಾಮಗಾರಿ, 64 ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಕಾಮಗಾರಿ, 744 ಹೊಸ ಕಾಮಗಾರಿ ಸೇರಿದಂತೆ ಒಟ್ಟು884 ಕಾಮಗಾರಿ ಕೈಗೊಳ್ಳಲು 33.65 ಕೋಟಿ ರೂ.ಗಳನ್ನು ನಿಗದಿಪಡಿಸಿ ಕ್ರಿಯಾ ಸಲ್ಲಿಸಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು. ಗ್ರಾಮೀಣನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಎಂಜಿಯರ್‌ ಮಮತಾ, ರಮೇಶ್‌, ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್‌ ಜಿಲ್ಲಾ ಮಟ್ಟದ ಸಮಿತಿ ಸದಸ್ಯ ಡಿಡಿಪಿಐ ಸಿ.ನಂಜಯ್ಯ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಭಾಗ್ಯಮ್ಮ, ವಾರ್ತಾ ಇಲಾಖೆಯ ರೂಪಕಲಾ ಎಲ್ಲ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಇದ್ದರು.

ಕ್ರಿಯಾಯೋಜನೆ ತಯಾರಿಸಲು ನಿರ್ಧಾರ
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಪ್ರಸಕ್ತ ಸಾಲಿಗಾಗಿ ವಿಶೇಷ ಅಭಿವೃದ್ಧಿ ಕಾರ್ಯಕ್ರಮದಡಿ 33.65 ಕೋಟಿ ರೂ.ಗಳನ್ನು ನಿಗದಿಪಡಿಸಿ ಕ್ರಿಯಾಯೋಜನೆ ತಯಾರಿಸಲು ನಿರ್ಧರಿಸಲಾಗಿದೆ ಎಂದು ಜಿಪಂ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.

ಯಾವುದೇ ಕಾಮಗಾರಿಯಾಗಲಿ ಅಗತ್ಯಕ್ಕಿಂತ ಹೆಚ್ಚಿನ ಸಮಯ ತೆಗೆದುಕೊಳ್ಳದೆ ವಿನಾಕಾರಣ ಮುಂದೂಡದೆ, ಎಲ್ಲ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸ ಬೇಕು. ಕಾಮಗಾರಿ ನಿಧಾನಗತಿಯಲ್ಲಿ ಸಾಗಲು ಕಾರಣ ಏನೆಂಬುದನ್ನು ತಿಳಿದು ಸಮಸ್ಯೆಗಳ ಪರಿಹಾರಕ್ಕೆ
ಸೂಕ್ತ ಕ್ರಮಕೈಗೊಳ್ಳಬೇಕು.
-ಡಾ.ಕೆ.ವಿದ್ಯಾಕುಮಾರಿ, ಜಿಪಂ
ಮುಖ್ಯ ಕಾರ್ಯ ನಿರ್ವಹಣಾಧಿಕಾರಿ

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.