ಕಾಬೂಲ್‌ ಜೈಲು : ರಾಜ್ಯಕ್ಕೆ ಬೇಕಾದ ಉಗ್ರರು ಪರಾರಿ!


Team Udayavani, Aug 18, 2021, 7:10 AM IST

ಕಾಬೂಲ್‌ ಜೈಲು : ರಾಜ್ಯಕ್ಕೆ ಬೇಕಾದ ಉಗ್ರರು ಪರಾರಿ!

ಬೆಂಗಳೂರು: ರಾಜ್ಯದಲ್ಲಿ ನಡೆದ ಕೆಲವು ಉಗ್ರ ಪ್ರಕರಣಗಳಲ್ಲಿ ಬೇಕಾದ ಮತ್ತು ಭಾರತದ ಮಾಹಿತಿಯ ಅನ್ವಯ ಅಫ್ಘಾನ್‌ನಲ್ಲಿ ಬಂಧಿತರಾಗಿ ಜೈಲಿನಲ್ಲಿದ್ದ 10ಕ್ಕೂ ಅಧಿಕ ಶಂಕಿತ ಉಗ್ರರು ತಾಲಿಬಾನ್‌ ಆಕ್ರಮಣದ ವೇಳೆ ತಪ್ಪಿಸಿಕೊಂಡಿದ್ದಾರೆ!

ಈ ಆರೋಪಿಗಳು ತಾಲಿಬಾನ್‌ ಮತ್ತಿತರ ಉಗ್ರ ಸಂಘಟನೆಗಳ ಜತೆ ಸೇರಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯಕ್ಕೆ ರಾಜ್ಯ ಅಥವಾ ದೇಶಕ್ಕೆ ಅವರಿಂದ ತೊಂದರೆ ಇಲ್ಲವಾದರೂ ಮುಂದಿನ ದಿನಗಳಲ್ಲಿ ರಾಜ್ಯದ ಉಗ್ರ ಸ್ಲಿàಪರ್‌ ಸೆಲ್‌ಗ‌ಳ ಜತೆ ಸಂಪರ್ಕ ಸಾಧಿಸಿ ದುಷ್ಕೃತ್ಯಗಳನ್ನು ನಡೆಸುವ ಸಾಧ್ಯತೆ ಇದೆ ಎಂಬ ಆತಂಕ ಇದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಗುಪ್ತಚರ ಇಲಾಖೆ ಮತ್ತು ಆಂತರಿಕ ಭದ್ರತ ವಿಭಾಗ (ಐಎಸ್‌ಡಿ)ಅಧಿಕಾರಿಗಳು ಕಾರ್ಯಾಚರಣೆ ಚುರುಕುಗೊಳಿಸಿದ್ದು, ರಾಜ್ಯದಲ್ಲಿರುವ ಶಂಕಿತರ ಮೇಲೆ ಹೆಚ್ಚಿನ ನಿಗಾ ಇರಿಸಿದ್ದಾರೆ.

ಅಫ್ಘಾನಿಸ್ಥಾನವನ್ನು ತಾಲಿಬಾನ್‌ ಉಗ್ರರು ವಶಪಡಿಸಿಕೊಳ್ಳುವ ಯತ್ನದಲ್ಲಿದ್ದಾಗಲೇ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಅಫ್ಘಾನ್‌ ಮೂಲದ ಐಎಸ್‌-ಕೆಪಿ ಮತ್ತು ಐಸಿಸ್‌ ಉಗ್ರ ಸಂಘಟನೆಗಳ ಕೆಲವು ಸ್ಲಿàಪರ್‌ ಸೆಲ್‌ಗಳು ಮತ್ತೆ ಸಕ್ರಿಯವಾಗಿವೆ ಎಂಬುದು ತನಿಖೆಯಿಂದ ತಿಳಿದುಬಂದಿತ್ತು.

ಪರಾರಿಯಾದವರಲ್ಲಿ ಕೆಲವರು ಕಾಬೂಲ್‌ ನಲ್ಲಿದ್ದರೆ ಇನ್ನಷ್ಟು ಮಂದಿ ಪಾಕ್‌ ಸಹಿತ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಗಳಿವೆ.

ಜೈಲು ತೆರವು ವೇಳೆ ಪರಾರಿ? :

ಕಾಬೂಲ್‌ನಿಂದ ದಿಲ್ಲಿಗೆ ಬರಲು ಯತ್ನಿಸಿದ ನೌಶಿದುಲ್‌É ಹಮ್ಜಫ‌ರ್‌ ಎಂಬಾತನನ್ನು ಅಫ್ಘಾನ್‌ ಭದ್ರತ ಪಡೆಗಳು 2017ರಲ್ಲಿ ಬಂಧಿಸಿದ್ದವು. ಈತ 2016ರಲ್ಲಿ ಕೇರಳದಲ್ಲಿ ದಾಖಲಾಗಿದ್ದ ಐಸಿಸ್‌ ಉಗ್ರ ಸಂಘಟನೆ ನೇಮಕಾತಿ ಪ್ರಕರಣದ ಆರೋಪಿ. ಈತ ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ. 2020ರ ಮಾ. 20ರಂದು ಕಾಬೂಲ್‌ನಲ್ಲಿ ನಡೆದ ಶೋರ್‌ ಬಜಾರ್‌ಪ್ರದೇಶದ ಗುರುದ್ವಾರದ ದಾಳಿ ವೇಳೆ 27 ಮಂದಿಯ ಹತ್ಯೆಯಾಗಿತ್ತು. ಇದರ ಹೊಣೆಯನ್ನು ಐಎಸ್‌-ಕೆಪಿ ಹೊತ್ತಿತ್ತು. ಇದೇ ಪ್ರಕರಣದಲ್ಲಿ ಆಗ ತಾನೇ ಸಂಘಟನೆ ಸೇರಿಕೊಂಡಿದ್ದ ಕಾಸರಗೋಡಿನ ಮುಹ್ಸಿನ್‌ ಎಂಬಾತನ ಕೈವಾಡ ಪತ್ತೆಯಾಗಿತ್ತು. ಈತನಲ್ಲದೆ ಇತರ ಕೆಲವು ಉಗ್ರರೂ ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು ಸಂಪರ್ಕ :

2020ರ ಅಕ್ಟೋಬರ್‌ನಲ್ಲಿ ಬೆಂಗಳೂರಿನ ವೈದ್ಯ ಡಾ| ಅಬುರ್‌ ರೆಹಮಾನ್‌ ಅಲಿಯಾಸ್‌ ಬ್ರೇವ್‌ ಸಿರಿಯಾದಲ್ಲಿರುವ ಉಗ್ರ ಸಂಘಟನೆ ಸದಸ್ಯರಿಗೆ ವೈದ್ಯಕೀಯ ಸಹಾಯ ಮತ್ತು ಶಸ್ತ್ರಾಸ್ತ್ರಗಳ ಖರೀದಿ ಬಗ್ಗೆ ಮಾಹಿತಿ ನೀಡಿದ್ದ. ಐಸ್‌-ಕೆಪಿ ಸಂಘಟನೆ ಸದಸ್ಯರ ಜತೆಗೂ ನಿರಂತರ ಸಂಪರ್ಕ ಹೊಂದಿದ್ದು, ತಮಿಳುನಾಡು ಮೂಲದ ಅಹ್ಮದ್‌ ಅಬ್ದುಲ್‌, ಬೆಂಗಳೂರಿನ ಇರ್ಫಾನ್‌ ನಾಸೀರ್‌ ಜತೆ ಸೇರಿ ಬೆಂಗಳೂರು, ಮಂಗಳೂರಿನ ಕೆಲವು ಯುವಕರನ್ನು ಸಿರಿಯಾಕ್ಕೆ ಕಳುಹಿಸಿದ್ದ.

ಈ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ತಾಂತ್ರಿಕ ತನಿಖೆ ವೇಳೆ ಬೆಂಗಳೂರು, ಮಂಗಳೂರಿನಲ್ಲಿ ಅಮರ್‌ ಅಬ್ದುಲ್‌ ರೆಹಮಾನ್‌, ಬೆಂಗಳೂರಿನ ಮಾದೇಶ್‌ ಪೆರುಮಾಳ್‌ ಅಲಿಯಾಸ್‌ ಅಬ್ದುಲ್‌ ಮತ್ತು ಅನಂತರ ಭಟ್ಕಳದ ಝಫ್ರಿ ಜವಾರ್‌ ದಾಮುದಿ ಎಂಬವರನ್ನು ಬಂಧಿಸಲಾಗಿತ್ತು. ಈ ಪೈಕಿ ಝಫ್ರಿ ಜವಾರ್‌ ದಾಮುದಿ, ಐಸಿಸ್‌ ಜತೆಗೆ ಅಫ್ಘಾನ್‌ ಮತ್ತು ಪಾಕಿಸ್ಥಾನದಲ್ಲಿ ಸಕ್ರಿಯವಾಗಿದ್ದ ಎಂಬುದು ಪತ್ತೆಯಾಗಿತ್ತು. ಬೆಂಗಳೂರಿನ ಮಾದೇಶ್‌ ಪೆರುಮಾಳ್‌, ಮಂಗಳೂರು ಮೂಲದ ಮಹಿಳೆಯ ಸಂದೇಶಗಳಿಂದ ಪ್ರೇರಣೆಗೊಂಡು ಮತಾಂತರಗೊಂಡಿದ್ದು, ಈತ ಅಘ್ಘಾನಿಸ್ಥಾನದ ಐಎಸ್‌-ಕೆಪಿ ಸಂಘಟನೆ ಸೇರಲು ಸಿದ್ಧತೆ ನಡೆಸಿದ್ದ ಎಂಬುದು ಎನ್‌ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

20ಕ್ಕೂ ಹೆಚ್ಚು ಮಂದಿ ಸಕ್ರಿಯ :

ಅಫ್ಘಾನ್‌ ಮೂಲದ ಐಸ್‌-ಕೆಪಿ, ಐಸಿಸ್‌ ಸಂಘಟನೆಯ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿರುವ ಸುಮಾರು 20ಕ್ಕೂ ಅಧಿಕ ಮಂದಿ ರಾಜ್ಯದಲ್ಲಿ ಸಕ್ರಿಯವಾಗಿದ್ದಾರೆ ಎಂದು ರಾಜ್ಯ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಮೂಲಗಳು ತಿಳಿಸಿವೆ. ಈ ಶಂಕಿತರ ಚಲನವಲನಗಳು ಮತ್ತು ತಂತ್ರಜ್ಞಾನ, ತಾಂತ್ರಿಕ ಚಟುವಟಿಕೆಗಳ ಮೇಲೂ ನಿಗಾ ವಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

 

- ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.