ತಾಲಿಬಾನ್ ಉಗ್ರರಿಗೆ ಸಡ್ಡು ಹೊಡೆದು ಪಡೆ ಕಟ್ಟಿದ್ದ ಮಹಿಳಾ ಗವರ್ನರ್ ಸಲೀಮಾ ಸೆರೆ!

ಆದರೂ ಧೈರ್ಯ ಕಳೆದುಕೊಳ್ಳದ ಸಲೀಮಾ ಜನರನ್ನು ಸಂಘಟಿಸುವ ಕೆಲಸ ಮುಂದುವರಿಸಿದ್ದರು.

Team Udayavani, Aug 18, 2021, 1:19 PM IST

ತಾಲಿಬಾನ್ ಉಗ್ರರಿಗೆ ಸಡ್ಡು ಹೊಡೆದು ಪಡೆ ಕಟ್ಟಿದ್ದ ಮಹಿಳಾ ಗವರ್ನರ್ ಸಲೀಮಾ ಸೆರೆ!

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಂಡುಕೋರರ ವಿರುದ್ಧವೇ ಸಡ್ಡು ಹೊಡೆದಿದ್ದ ಅಫ್ಘಾನ್ ನ ಪ್ರಥಮ ಮಹಿಳಾ ಗವರ್ನರ್ ಸಲೀಮಾ ಮಜಾರಿಯನ್ನು ತಾಲಿಬಾನ್ ಉಗ್ರರು ಸೆರೆಹಿಡಿದಿದ್ದು, ಸದ್ಯ ಸಲೀಮಾ ಎಲ್ಲಿದ್ದಾರೆ, ಹೇಗಿದ್ದಾರೆ ಎಂಬ ವಿಷಯ ತಿಳಿದು ಬಂದಿಲ್ಲ ಎಂದು ವರದಿ ತಿಳಿಸಿದೆ.

ಅಫ್ಘಾನಿಸ್ತಾನ ತಾಲಿಬಾನ್ ಉಗ್ರರ ಕೈವಶವಾಗುತ್ತಿದ್ದಂತೆಯೇ ಹಲವು ಮಂದಿ ರಾಜಕೀಯ ಮುಖಂಡರು ದೇಶ ಬಿಟ್ಟು ಪಲಾಯನವಾಗಿದ್ದರು. ಆದರೆ ಸಲೀಮಾ ಗವರ್ನರ್ ಆಗಿದ್ದ ಚಹಾರ್ ಜಿಲ್ಲೆ ತಾಲಿಬಾನ್ ವಶಕ್ಕೆ ಪಡೆದ ನಂತರ ಬಾಲ್ಕ್ ಪ್ರಾಂತ್ಯದಲ್ಲಿ ಸಲೀಮಾ ಅವರನ್ನು ಸೆರೆ ಹಿಡಿಯಲಾಯಿತು ಎಂದು ವರದಿ ವಿವರಿಸಿದೆ.

ಇದನ್ನೂ ಓದಿ:ಸುನಂದಾ ಪುಷ್ಕರ್ ಸಾವಿನ ಪ್ರಕರಣ: ಶಶಿ ತರೂರ್ ಎಲ್ಲಾ ಆರೋಪದಿಂದ ಮುಕ್ತ: ದೆಹಲಿ ಕೋರ್ಟ್

ವರದಿಯ ಪ್ರಕಾರ, ತಾಲಿಬಾನ್ ಬಂಡುಕೋರರು ಇಡೀ ಅಫ್ಘಾನಿಸ್ತಾನವನ್ನು ತಮ್ಮ ವಶಕ್ಕೆ ಪಡೆದ ನಂತರ ಗವರ್ನರ್ ಸಲೀಮಾ ಮಜಾರಿಯನ್ನು ಬಂಧಿಸಿದ್ದಾರೆ. ಏತನ್ಮಧ್ಯೆ ಅಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಘನಿ ಕೂಡಾ ದೇಶ ಬಿಟ್ಟು ಪರಾರಿಯಾಗಿದ್ದರು.

ಕೆಲವು ವರ್ಷಗಳ ಹಿಂದೆ ಸಲೀಮಾ ಮಜಾರಿ ಅಫ್ಘಾನಿಸ್ತಾನ ಕಂಡ ಮೂವರು ಮಹಿಳಾ ರಾಜ್ಯಪಾಲರಲ್ಲಿ ಒಬ್ಬರಾಗಿದ್ದಾರೆ. ಅಫ್ಘಾನಿಸ್ತಾನದ ಬಹುತೇಕ ಪ್ರಾಂತ್ಯಗಳನ್ನು ತಾಲಿಬಾನ್ ಬಂಡುಕೋರರು ಯಾವುದೇ ವಿರೋಧ, ಹಿಂಸೆ ಇಲ್ಲದೆ ವಶಪಡಿಸಿಕೊಂಡಿದ್ದರು. ಆದರೆ ಬಾಲ್ಕ ಪ್ರಾಂತ್ಯದ ಚಹಾರ್ ಕಿಂಟ್ ನಲ್ಲಿ ಯಾವುದೇ ಸಾವು ನೋವು ಸಂಭವಿಸದಂತೆ ಉಳಿಸಿಕೊಳ್ಳಲು ಸಲೀಮಾ ಪ್ರಯತ್ನಿಸಿದ್ದರು.

ಮಜಾರಿಯ ಹಲವು ಭಾಗ ತಾಲಿಬಾನ್ ಹಿಡಿತದಲ್ಲಿದ್ದು, ಇನ್ನುಳಿದ ಪ್ರದೇಶವನ್ನು ತಾಲಿಬಾನ್ ವಶಕ್ಕೆ ಹೋಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಸಲೀಮಾ ತಾಲಿಬಾನ್ ವಿರುದ್ಧ ಹೋರಾಡಲು ಜನರನ್ನು ನೇಮಕ ಮಾಡಿಕೊಳ್ಳುವುದರಲ್ಲಿಯೇ ಹೆಚ್ಚಿನ ಸಮಯ ಕಳೆದಿದ್ದರು. ಆ ನಿಟ್ಟಿನಲ್ಲಿ ರೈತರು, ಕಾರ್ಮಿಕರು, ಕುರಿಗಾಹಿಗಳು ತಾಲಿಬಾನ್ ವಿರುದ್ಧದ ಹೋರಾಟದಲ್ಲಿ ಸೇರ್ಪಡೆಗೊಂಡಿದ್ದರು. ನಮ್ಮ ಜನರ ಕೈಯಲ್ಲಿ ಗನ್ ಗಳಿಲ್ಲ, ಆದರೂ ತಮ್ಮ ದನ, ಕುರಿ, ಭೂಮಿಯನ್ನು ಮಾರಾಟ ಮಾಡಿ ಶಸ್ತ್ರಾಸ್ತ್ರವನ್ನು ಖರೀದಿಸುತ್ತಿದ್ದಾರೆ ಎಂದು ಸಲೀಮಾ ತಿಳಿಸಿದ್ದರು.

ಯಾವುದೇ ಸಂಬಳ ಪಡೆಯದೇ ಹಗಲು, ರಾತ್ರಿ ಅವರೆಲ್ಲಾ ಪಹರೆ ಕಾಯುತ್ತಿದ್ದ ಪರಿಣಾಮ ತಾಲಿಬಾನ್ ಉಗ್ರರಿಗೆ ಇನ್ನೂ ಮಝಾರಿ ಪ್ರದೇಶವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈಯದ್ ನಜೀರ್ ವಿಶ್ವಾಸವ್ಯಕ್ತಪಡಿಸಿದ್ದರು. ಜನರ ಬೆಂಬಲದಿಂದಾಗಿ ನಮಗೆ ಈ ಸಾಧನೆ ಮಾಡಲು ಸಾಧ್ಯವಾಗಿದೆ. ಇತ್ತೀಚೆಗಷ್ಟೇ ತಾಲಿಬಾನ್ ಉಗ್ರರ ವಿರುದ್ಧ ಹೋರಾಟ ನಡೆಸುವ ವೇಳೆ ಸಲೀಮಾ ಕಾಲಿಗೆ ಗುಂಡೇಟು ಕೂಡಾ ಬಿದ್ದಿತ್ತು.

ಆದರೂ ಧೈರ್ಯ ಕಳೆದುಕೊಳ್ಳದ ಸಲೀಮಾ ಜನರನ್ನು ಸಂಘಟಿಸುವ ಕೆಲಸ ಮುಂದುವರಿಸಿದ್ದರು. ಇದಕ್ಕೆ ಕಾರಣ ತಾಲಿಬಾನ್ ಆಡಳಿತದ ಸಂದರ್ಭದಲ್ಲಾದ ಭಯಾನಕ ಅನುಭವಗಳು ಇನ್ನೂ ಮಾಸಿಲ್ಲ ಎಂಬುದಾಗಿ ಚಾರ್ಕಿಂಟ್ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದರು. ಒಂದು ವೇಳೆ ತಾಲಿಬಾನ್ ಉಗ್ರರು ಮತ್ತೊಮ್ಮೆ ವಾಪಸ್ ಅಧಿಕಾರಕ್ಕೆ ಬಂದರೆ ಅವರು ಮಹಿಳೆಯೊಬ್ಬಳು ಗವರ್ನರ್ ಹುದ್ದೆಯಲ್ಲಿರುವುದನ್ನು ಸಹಿಸಿಕೊಳ್ಳುವುದಿಲ್ಲ ಎಂಬ ಸತ್ಯದ ಅರಿವಿದೆ ಎಂದು ಸಲೀಮಾ ಅಭಿಪ್ರಾಯವ್ಯಕ್ತಪಡಿಸಿದ್ದರು.!

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.