ತಜ್ಞರ ವರದಿಯ ಆದರದ ಮೇಲೆ 9 ರಿಂದ 12 ನೇ ತರಗತಿ ನಡೆಸಲು ತೀರ್ಮಾನ : ಶಿಕ್ಷಣ ಸಚಿವ


Team Udayavani, Aug 18, 2021, 2:37 PM IST

ತಜ್ಞರ ವರದಿಯ ಆದರದ ಮೇಲೆ 9 ರಿಂದ 12 ನೇ ತರಗತಿ ನಡೆಸಲು ತೀರ್ಮಾನ : ಶಿಕ್ಷಣ ಸಚಿವ

ಚಿತ್ರದುರ್ಗ: ತಾಂತ್ರಿಕ ಸಮಿತಿ, ಟಾಸ್ಕ್ ಫೋರ್ಸ್ ಹಾಗೂ‌ ಮಕ್ಕಳ ತಜ್ಞರ ವರದಿಯ ಆಧಾರದ ಮೇಲೆ 9 ರಿಂದ 12 ನೇ ತರಗತಿಗಳನ್ನು ನಡೆಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದ ಕೊರೊನಾ ನಡುವೆಯೂ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಲು ಆನ್ಲೈನ್ ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಆದರೂ, ಶೇ.30 ರಿಂದ 40 ರಷ್ಟು ಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಶೇ.99 ರಷ್ಟು ಮಕ್ಕಳು ಹಾಜರಾಗಿದ್ದರು. ಪೋಷಕರು ಹಾಗು ಮಕ್ಕಳ ಧೈರ್ಯದ ಮೇಲೆ ಈಗ ಶಾಲೆ ಆರಂಭಿಸುತ್ತಿದ್ದೇವೆ. ಎಲ್ಲಾ ಕಡೆ ಡಿಡಿಪಿಐ, ಬಿಇಒಗಳ ಮೀಟಿಂಗ್ ನಡೆಸುತ್ತಿದ್ದೇನೆ. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಿಕೊಂಡು 9,10,11 ಹಾಗು 12ನೇ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆದಿದೆ ಎಂದರು.
ಇದರ ಯಶಸ್ಸಿನ ಆಧಾರದಲ್ಲಿ 1 ರಿಂದ 8 ನೇ ತರಗತಿಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆಸಲಾಗುವುದು.

ಒಂದು ವೇಳೆ ಮಕ್ಕಳು ಭಯದಿಂದ ಶಾಲೆಗೆ ಬರದಿದ್ದರೆ ಅವರ ಮನವೊಲಿಸಲು ಶಿಕ್ಷಕರಿಗೆ ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಬಲವಂತ ಮಾಡುವುದಿಲ್ಲ. ಪೋಷಕರು ಒಪ್ಪದಿದ್ದರೆ ಅವರಿಗೆ ಆನ್ ಲೈನ್ ಮುಂದುವರೆಯುತ್ತದೆ. ಈ ಬಗ್ಗೆ ಆತಂಕ ಬೇಡ ಎಂದರು.

ಒಂದು ವೇಳೆ ಶಾಲೆ ಆರಂಭವಾದ ನಂತರ ಯಾರಿಗಾದರೂ ಪಾಸಿಟಿವ್ ಬಂದರೆ, ಒಂದು ವಾರದ ಶಾಲೆ ಬಂದ್ ಮಾಡಿ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ಆರಂಭಿಸಲು ಸೂಚಿಸಿದ್ದೇವೆ.

ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.‌ಬದರಿನಾಥ್, ಬಿಜೆಪಿ ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್, ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್ ಮತ್ತಿತರರಿದ್ದರು.

ಪದವಿ ಪೂರ್ವ ಶಿಕ್ಷಣಕ್ಕೆ ಹೆಚ್ಚು ವಿದ್ಯಾರ್ಥಿಗಳು ಸೇರುವ ನಿರೀಕ್ಷೆ ಇದೆ. 8.75 ಲಕ್ಷ ಮಕ್ಕಳು ತೇರ್ಗಡೆಯಾಗಿದ್ದು, ಎಲ್ಲರು ಕಾಲೇಜಿಗೆ ಬರುವುದಿಲ್ಲ. ಪಿಯುಸಿಗೆ 12 ಲಕ್ಷ ಮಕ್ಕಳು ಸೇರುವಷ್ಟು ವ್ಯವಸ್ಥೆ ಇದೆ. ರಾಜ್ಯದ ಕೆಲವೆಡೆ ಸಮಸ್ಯೆ ಆಗಬಹುದು. ಸೀಟುಗಳನ್ನು ಹೆಚ್ಚಿಸಿಕೊಳ್ಳಲು ಡಿಡಿಪಿಐ ಗಳಿಗೆ ಸೂಚಿಸಿದ್ದೇವೆ  ಎಂದು ಬಿ.ಸಿ.ನಾಗೇಶ್ ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.