ಖಾದ್ಯ ತೈಲ ಉತ್ಪಾದನೆ: ಸ್ವಾವಲಂಬನೆಯತ್ತ ಕೇಂದ್ರದ ದಿಟ್ಟ ಹೆಜ್ಜೆ


Team Udayavani, Aug 19, 2021, 6:00 AM IST

ಖಾದ್ಯ ತೈಲ ಉತ್ಪಾದನೆ: ಸ್ವಾವಲಂಬನೆಯತ್ತ ಕೇಂದ್ರದ ದಿಟ್ಟ ಹೆಜ್ಜೆ

ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಖಾದ್ಯ ತೈಲಗಳಿಗೆ ಭಾರೀ ಬೇಡಿಕೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಭಾರತ ಗರಿಷ್ಠ ಪ್ರಮಾಣದಲ್ಲಿ ವಿದೇಶಗಳಿಂದ ಖಾದ್ಯ ತೈಲಗಳನ್ನು ಅದರಲ್ಲೂ ತಾಳೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಸದ್ಯ ತಾಳೆ ಎಣ್ಣೆ ಆಮದಿನಲ್ಲಿ ಭಾರತ ವಿಶ್ವದಲ್ಲಿಯೇ ಅಗ್ರಸ್ಥಾನದಲ್ಲಿದ್ದು ಮಲೇಷ್ಯಾ ಮತ್ತು ಇಂಡೋನೇಷ್ಯಾ­ದಿಂದ ಗರಿಷ್ಠ ಪ್ರಮಾಣದಲ್ಲಿ ತಾಳೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಇದೀಗ ಖಾದ್ಯ ತೈಲಗಳು-ತಾಳೆ ಎಣ್ಣೆಗಾಗಿನ ರಾಷ್ಟ್ರೀಯ ಯೋಜನೆಯೊಂದನ್ನು ಘೋಷಿಸಿದೆ. ಇದರಡಿಯಲ್ಲಿ ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ತಾಳೆ ಎಣ್ಣೆ ಉತ್ಪಾದನೆಯಲ್ಲಿ ಸ್ವಾವಲಂಬನೆಯ ಗುರಿ ಹಾಕಿಕೊಳ್ಳಲಾಗಿದೆ. ಈ ಮೂಲಕ ತಾಳೆ ಎಣ್ಣೆ ಸಹಿತ ಖಾದ್ಯ ತೈಲಗಳ ಆಮದನ್ನು ಕಡಿಮೆಗೊಳಿಸುವ ಉದ್ದೇಶ ಸರಕಾರದ್ದಾಗಿದೆ. ಈ ಯೋಜನೆಗಾಗಿ ಸರಕಾರ ಒಟ್ಟು 11,040 ಕೋ. ರೂ.ಗಳನ್ನು ಮೀಸಲಿರಿಸಿದೆ.

ದೇಶದ 75ನೇ ಸ್ವಾತಂತ್ರೊéàತ್ಸವ ದಿನದ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದ್ದರಲ್ಲದೆ ಖಾದ್ಯ ತೈಲ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸಲು ಈ ಯೋಜನೆ ನೆರವಾಗಲಿದೆ ಎಂದು ಆಶಾವಾದ ವ್ಯಕ್ತಪಡಿಸಿದ್ದರು. ಅದರಂತೆ ಬುಧವಾರ ಕೇಂದ್ರ ಸಚಿವ ಸಂಪುಟ ಈ ಯೋಜನೆಗೆ ಒಪ್ಪಿಗೆ ನೀಡಿದೆ.

ದೇಶದ ಈಶಾನ್ಯ ರಾಜ್ಯಗಳು ಮತ್ತು ಅಂಡಮಾನ್‌ ಮತ್ತು ನಿಕೋ­ಬಾರ್‌ ದ್ವೀಪಗಳಲ್ಲಿ ಖಾದ್ಯ ತೈಲ ಬೀಜಗಳ ಉತ್ಪಾದನೆ ಅದರಲ್ಲೂ ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗೆ ಇನ್ನಷ್ಟು ಹೆಚ್ಚಿನ ಉತ್ತೇಜನ ನೀಡುವ ಮೂಲಕ ಈ ಪ್ರದೇಶವನ್ನು ಖಾದ್ಯ ತೈಲದ ಹಬ್‌ ಆಗಿ ಪರಿ­ವರ್ತಿ­ಸಲು ಕೇಂದ್ರ ಸರಕಾರ ಯೋಜನೆ ರೂಪಿಸಿದೆ. ಹೊಸ ಯೋಜನೆ­ಯಡಿ ತಾಳೆ ಎಣ್ಣೆ ಉತ್ಪಾದನೆಯನ್ನು ಹೆಚ್ಚಿಸಲು ಬೆಳೆಗಾರರಿಗೆ ಅವಶ್ಯ­ವಿರುವ ಅಗತ್ಯ ಹಣಕಾಸಿನ ನೆರವು ಸಹಿತ ಇತರ ಮೂಲ ಸೌಕರ್ಯ­ಗಳನ್ನು ಒದಗಿಸುವ ಜತೆಯಲ್ಲಿ ಬೆಳೆಗೆ ಸೂಕ್ತ ಬೆಲೆಯನ್ನು ಒದಗಿಸಿ­ಕೊಡುವ ಭರವಸೆಯನ್ನೂ ಸರಕಾರ ನೀಡಿದೆ. ಸದ್ಯ ತಾಳೆ ಬೆಳೆಗಾರರಿಗೆ ನೀಡಲಾಗುತ್ತಿರುವ ಹಣಕಾಸು ನೆರವನ್ನು ಸರಿಸುಮಾರು ಒಂದೂವರೆ ಪಟ್ಟು ಹೆಚ್ಚಿಸಿರುವ ಕೇಂದ್ರ ಸರಕಾರ ಈ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಗಾರರನ್ನು ತಾಳೆ ಬೆಳೆಯತ್ತ ಆಕರ್ಷಿಸಲು ಮುಂದಾಗಿದೆ.

ಕಳೆದ ಹಲವಾರು ದಶಕಗಳಿಂದ ಖಾದ್ಯ ತೈಲಗಳಿಗಾಗಿ ಭಾರತ ವಿದೇಶಗಳನ್ನೇ ಅವಲಂಬಿತವಾಗಿದೆ. ಇದರ ಪರಿಣಾಮವಾಗಿ ಜನರು ಖಾದ್ಯ ತೈಲಕ್ಕಾಗಿ ಹೆಚ್ಚಿನ ಹಣವನ್ನು ವ್ಯಯಿಸುತ್ತಿರುವುದು ಮಾತ್ರವಲ್ಲದೆ ಗುಣಮಟ್ಟದ ತೈಲವೂ ಅವರಿಗೆ ಲಭಿಸುತ್ತಿಲ್ಲ. ಕಲಬೆರಕೆ ಖಾದ್ಯ ತೈಲಗಳ ಬಳಕೆಯ ಪರಿಣಾಮ ಜನರ ಆರೋಗ್ಯದ ಮೇಲೂ ಗಂಭೀರ ಪರಿಣಾಮಗಳುಂಟಾಗುತ್ತಿವೆ. ಈ ಎಲ್ಲ ಸಮಸ್ಯೆಗಳ ನಡುವೆಯೇ ಸರಕಾರ ಖಾದ್ಯ ತೈಲ ಆಮದಿನ ಮೇಲಣ ತೆರಿಗೆಯನ್ನು ಪದೇಪದೆ ಕಡಿತಗೊಳಿಸುವ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು ಇದರಿಂದಾಗಿ ಸರಕಾರದ ಮೇಲೆ ಆರ್ಥಿಕವಾಗಿ ಭಾರೀ ಪ್ರಮಾಣದ ಹೊರೆ ಬೀಳುತ್ತಿದೆ. ಆತ್ಮ ನಿರ್ಭರ ಭಾರತದ ಸಂಕಲ್ಪ ತೊಟ್ಟಿರುವ ಕೇಂದ್ರ ಸರಕಾರ ಇದರ ಮತ್ತೂಂದು ಹೆಜ್ಜೆಯಾಗಿ ತಾಳೆ ಎಣ್ಣೆ ಆದಿಯಾಗಿ ಖಾದ್ಯ ತೈಲಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಪಣತೊಟ್ಟಿರುವುದು ಆಶಾದಾಯಕ ಮತ್ತು ಸ್ವಾಗತಾರ್ಹ ಹೆಜ್ಜೆ.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.