ಡಾ| ಶಿವಕುಮಾರಸ್ವಾಮೀಜಿ ಜೀವನ ಸಾಧನೆ ಸಿಡಿ ಬಿಡುಗಡೆ


Team Udayavani, Aug 19, 2021, 6:49 PM IST

19-18

ಸಿರುಗುಪ್ಪ: ಸಿದ್ಧಗಂಗಾ ಮಠದ ಶ್ರೀ ಡಾ| ಶಿವಕುಮಾರಸ್ವಾಮೀಜಿಯವರ ಜೀವನಸಾಧನೆ ಬಗ್ಗೆ ಕಾವ್ಯಕಟ್ಟಿ ಅದನ್ನು ದೃಶ್ಯರೂಪದಲ್ಲಿ ಅಳವಡಿಸಿ ಸಿಡಿಯನ್ನು ಹೊರತಂದಿರುವ ಎಂ.ಎಂ. ಶಾಂತಯ್ಯಸ್ವಾಮಿ ನಮ್ಮ ಮಠದ ಬಗ್ಗೆ ಇಟ್ಟಿರುವ ಅಭಿಮಾನವನ್ನು ಎತ್ತಿ ತೋರಿಸುತ್ತದೆ ಎಂದು ಶ್ರೀ ಸಿದ್ಧಗಂಗಾಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ತಿಳಿಸಿದರು.

ನಗರದ ಸಿರಿ ಸಾಂಸ್ಕೃತಿಕ ಸಂಗೀತ ಪಾಠ ಶಾಲೆಯ ಸಂಗೀತ ಶಿಕ್ಷಕ ಎಂ.ಎಂ. ಶಾಂತಯ್ಯಸ್ವಾಮಿ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಜೀವನಶೈಲಿ ಮತ್ತು ಸಾಧನೆಗಳ ಕುರಿತಾದ “ಸಿದ್ಧಗಂಗೆಯ ಸಿರಿ’ ಶೀರ್ಷಿಕೆಯಡಿ “ಶರಣು ಶರಣು ಗುರುವೆ ಸಾವಿರದ ಶರಣು’ ಎಂಬ ಸಂಗೀತ ದೃಶ್ಯ ಮಾಲಿಕೆಯ ಸಿಡಿಯನ್ನು ಸಿದ್ಧಗಂಗಾ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿದ ಶ್ರೀಗಳು ಆಶೀರ್ವಚನ ನೀಡಿ ಇಂದು ಭಕ್ತಿ, ಶ್ರದ್ಧೆ ಕಡಿಮೆಯಾಗುತ್ತಿದ್ದು, ಎಲ್ಲರೂ ದುಡ್ಡಿನ ಹಿಂದೆ ಓಡುತ್ತಿದ್ದಾರೆ.

ಆದರೆ ಶಾಂತಯ್ಯಸ್ವಾಮಿಯಂಥ ಭಕ್ತರು ಭಕ್ತಿ, ಶ್ರದ್ಧೆ ಹಿಂದೆ ಬಿದ್ದಿದ್ದು, ನಮ್ಮ ಮಠದ ಪರಂಪರೆಯ ಮಹತ್ವವನ್ನು ಹಾಗೂ ಹಿರಿಯ ಶ್ರೀಗಳ ಜೀವನ ಸಾಧನೆಯನ್ನು ತಿಳಿಸುವ ಕಾವ್ಯಕ್ಕೆ ಸಂಗೀತ ಸಂಯೋಜನೆ ಮಾಡಿ ಹಾಡಿದ್ದಾರೆ. ಈ ಸಿಡಿಯಲ್ಲಿರುವ ದೃಶ್ಯಕಾವ್ಯದ ಗೀತೆಗಳು ಭಕ್ತಿ ಭಾವದಿಂದ ಕೂಡಿದ್ದು, ಕೇಳುಗರನ್ನು ಮಂತ್ರಮುಗ್ಧರನ್ನಾಗಿಸುತ್ತವೆ ಎಂದು ಹೇಳಿದರು.

ಸಂಗೀತ ಶಿಕ್ಷಕ ಎಂ.ಎಂ. ಶಾಂತಯ್ಯಸ್ವಾಮಿ ಮಾತನಾಡಿ ಸಾಹಿತ್ಯವನ್ನು ಸುಭಾಷಿಣಿ ಎಂ. ಕುರುಡಿಮs… ರಚಿಸಿದ್ದು, ಇದಕ್ಕೆ ನಾನು ಸಂಗೀತ ಸಂಯೋಜನೆ ಮಾಡಿ ಹಾಡಿದ್ದೇನೆ. ದೃಶ್ಯಕಾವ್ಯದ ಸಿಡಿ ಚಿತ್ರೀಕರಣ ಮತ್ತು ಸಂಕಲನ ಜಗದೀಶ.ಟಿ. ಹಿರೇಮs… ಹಾಗೂ ಪಂಡಿತ್‌ ದೇವೇಂದ್ರಕುಮಾರ್‌ ಪತ್ತಾರ್‌ ನಿರ್ಮಾಣ ಮತ್ತು ನಿರ್ವಹಣೆಯನ್ನು ಟಿ.ಎಚ್‌. ಎಂ. ಉಜ್ಜಿನಿ ಕೊಟ್ರಮ್ಮ ನಿರ್ವಹಿಸಿದ್ದಾರೆ.

ಎಲ್ಲರ ಸಹಕಾರದಿಂದ ದೃಶ್ಯಕಾವ್ಯ ಸಿಡಿಯು ಅತ್ಯುತ್ತಮವಾಗಿ ಮೂಡಿಬಂದಿದೆ. ಇದನ್ನು ಶ್ರೀಗಳು ಬಿಡುಗಡೆ ಮಾಡಿ ನಮಗೆ ಆಶೀರ್ವಾದ ಮಾಡಿದ್ದಾರೆಂದು ಹೇಳಿದರು. ಸುಭಾಷಿಣಿ ಎಂ.ಕುರುಡಿಮs…, ಜಗದೀಶ.ಟಿ. ಹಿರೇಮs…, ಪಂಡಿತ್‌ ದೇವೇಂದ್ರಕುಮಾರ್‌ ಪತ್ತಾರ್‌, ಟಿ.ಎಚ್‌. ಎಂ. ಉಜ್ಜಿನಿ ಕೊಟ್ರಮ್ಮ ಮತ್ತು ಮಠದ ಹಳೇ ವಿದ್ಯಾರ್ಥಿ ಪಂಪನಗೌಡ ಇದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.